ಪಿಡಿಒ ವರ್ಗಾವಣೆ ಸಂಬಂಧ ಹೆಚ್.ಡಿ.ರೇವಣ್ಣ ಬಳಿ ಯಾವ ಪೆನ್ ಡ್ರೈವ್ ಇದೆಯೋ ಅದನ್ನು ಕೊಡಲಿ” ಎಂದು ಸಚಿವ ಪ್ರಿಯಾಂಕ ಖರ್ಗೆ ಸವಾಲು ಹಾಕಿದ್ದಾರೆ. ವಿಕಾಸಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಸಚಿವರೇ ಡೀಲ್ ಮಾಡ್ತಿದ್ದಾರೆ ಎಂಬ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದರು.
”ರೇವಣ್ಣ ಬಹಳ ಹುಷಾರು ಅನ್ನೊಂಡಿದ್ದೆ. ಹೌದು, ನೇರವಾಗಿ ಪಿಡಿಒ ವರ್ಗಾವಣೆ ಸರ್ಕಾರದ ಮಟ್ಟದಲ್ಲಿ ಆಗುತ್ತದೆ. ಪಿಡಿಒಗಳು ಈಗ ಸ್ಟೇಟ್ ಕೇಡರ್ನಲ್ಲಿ ಬರುತ್ತಾರೆ. ಮೊದಲು ಸಿಇಒ ಹಾಗೂ ಕಮಿಷನರ್ ಹಂತದಲ್ಲಿ ಪಿಡಿಒ ಆಗುತ್ತಿತ್ತು. ಈ ಕುರಿತು ಡೀಲ್ ಏನಾದ್ರೂ ನಡೆದಿದ್ದರೆ, ದಾಖಲೆ ಇದ್ದರೆ ಕೊಡಿ” ಎಂದರು.
ವರ್ಗಾವಣೆ ಮಾಡಬೇಕು, ಕಾನೂನು ಪ್ರಕಾರವೇ ಅದು ಆಗುತ್ತೆ. ಪಿಡಿಒ ಅಸೋಸಿಯೇಷನ್ ಅವರನ್ನು ಕರೆದು ಕೇಳಲಿ. ರೇವಣ್ಣ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡ್ತಾರೆ. ಪ್ರಸ್ತುತ ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಹೀಗಾಗಿ ಹೀಗೆಲ್ಲ ಮಾತನಾಡುತ್ತಾರೆ’ ಎಂದು ತಿರುಗೇಟು ನೀಡಿದರು.
ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ”ಈ ಹಿಂದೆ, ಎರಡು ಬಾರಿ ಶಾಸಕಾಂಗ ಸಭೆ ಮುಂದೂಡಿದ್ದರು. ಬಿ. ಆರ್. ಪಾಟೀಲ್ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿ ಬಳಿ ಇರುವುದು ನಕಲಿ ಪತ್ರ. ನಾನು ಪತ್ರ ಬರೆದಿದ್ದು ನಿಜ ಅಂತ ಹೇಳಿದ್ದಾರೆ. ಶಾಸಕಾಂಗ ಸಭೆ ಕರೆಯಬೇಕು ಎಂದು ನಾನು ಕೂಡಾ ಸಿಎಂಗೆ ಕೇಳಿಕೊಂಡಿದ್ದೇನೆ. ಹೀಗಾಗಿ ಬೇಗ ಶಾಸಕಾಂಗ ಪಕ್ಷದ ಸಭೆ ಕರೀರಿ ಅಂತ ಅವರು ಹೇಳಿದ್ದಾರೆ. ಅದರಲ್ಲಿ ಗೊಂದಲ ಏನಿದೆ? ಬಿಜೆಪಿ ಅವರು ನಿರುದ್ಯೋಗಿ ಆಗಿದ್ದಾರೆ. ಕೆಲಸ ಇಲ್ಲದೇ ಮೈ ಪರಚಿಕೊಂಡು ಏನೇನೆಲ್ಲ ಹೇಳ್ತಾರೆ” ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


