ಹೆಚ್ ಡಿ ಕೋಟೆ: ತಾಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಸಿದ್ದಮ್ಮ ಜವರಾಜಯ್ಯ ಉಪಾಧ್ಯಕ್ಷರಾಗಿ ಸುಮ ಗಜೇಂದ್ರ ಆಯ್ಕೆಯಾಗಿದ್ದಾರೆ.
ಇಂದು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯನ್ನು ನಡೆಸಲಾಯಿತು. 17 ಸದಸ್ಯರ ಬಲ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ, ಎಲ್ಲಾರ ಸಹಮತದಿಂದ ಅದ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆದರೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ಉಪಾದ್ಯಕ್ಷರ ಗಾದಿಗೆ ಇಬ್ಬರು ಸದಸ್ಯರು ನಾಮಪತ್ರಸಲ್ಲಿಸಿದರು ಬಿ.ಕೆ.ಮಹೇಶ ಎಂಟು ಮತಗಳನ್ನು ಪಡೆದು ಪರಾಜಿತಗೊಂಡರೆ ಸುಮ ಗಜೇಂದ್ರ ಒಂದು ಮತದ ಅಂತರ ದಿಂದ ಒಂಬತ್ತು ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು.
ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಸ್ಪರ್ಧಿಸಿ ಸುಮ ಗಜೇಂದ್ರ ಆಯ್ಕೆಯಾಗಿದ್ದಾರೆ ಎಂದು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಕೃಷ್ಣಯ್ಯ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ಘೋಷಣೆ ಮಾಡಿದರು.
ನೂತನ ಅಧ್ಯಕ್ಷೆ ಸಿದ್ದಮ್ಮಮಾತನಾಡಿ, ಅಣ್ಣೂರು ಗ್ರಾಮ ಪಂಚಾಯಿತಿಯನ್ನು ಮಾದರಿ ಗ್ರಾಮ ಪಂಚಾಯಿತಿ ಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ನನಗೆ ಸಂತಸ ತಂದಿದೆ ಎಂದು ಹೇಳಿದರು.
ಉಪಾದ್ಯಕ್ಷೆ ಸುಮ ಮಾತನಾಡಿ, ನಮ್ಮ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಮೂಲಭೂತ ಸೌಕರ್ಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಂತರ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಚಲುವರಾಜು ಎಡತೊರೆ, ಅಣ್ಣೂರು ಗ್ರಾ.ಪಂ.ಯಲ್ಲಿ ನಮ್ಮ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿರುವುದು ಬಹಳ ಸಂತಸ ತಾಲ್ಲೂಕಿನಲ್ಲಿ ನಮ್ಮದೇ ಪಕ್ಷದ ಶಾಸಕರು ಹಾಗೂ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇರುವುದರಿಂದ ನಮ್ಮ ಪಂಚಾಯಿತಿ ಅಭಿವೃದ್ದಿ ಪಡಿಸಲು ಬಹಳ ಸಹಕಾರವಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಮುಖಂಡರಾದ ಗಿರಿ ಗೌಡ,ಪರಶಿವ ಮೂರ್ತಿ, ಮಂಜುನಾಥ್ ಹೆಚ್.ಪಿ., ಬೆಟ್ಟಸ್ವಾಮಿ, ಶಿವಸ್ವಾಮಿ, ರಿಜ್ವಾನ್ , ನಂದೀಶ್, ಚೌಡನಾಯಕ ಸೇರಿದಂತೆ ಗ್ರಾಪಂ ಸದಸ್ಯರು, ಮುಖಂಡರು ಭಾಗವಹಿಸಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EAp8zUqF6y43cTFbQE5jEU
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA