nammatumakuru

    Subscribe to Updates

    Get the latest creative news from FooBar about art, design and business.

    What's Hot

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025
    Facebook Twitter Instagram
    ಟ್ರೆಂಡಿಂಗ್
    • “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ
    • ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ
    ರಾಜ್ಯ ಸುದ್ದಿ August 1, 2023

    ಭೂಮಿ ಕಳೆದುಕೊಳ್ಳುವವರ ಹಿತ ಕಾಯಲು ಬದ್ಧ; ರೈತರಿಗೆ ಡಿಕೆಶಿ ಭರವಸೆ

    By adminAugust 1, 2023No Comments2 Mins Read
    dk shivakumar

    “ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯ. ಅದನ್ನು ಕೈಬಿಡುವ ಮಾತಿಲ್ಲ. ಆದರೆ ಭೂಮಿ ಕಳೆದುಕೊಳ್ಳುವ ರೈತರಿಗೆ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ” ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ. ಕೆ. ಶಿವಕುಮಾರ್ ತಿಳಿಸಿದರು.

    ಅರಮನೆ ರಸ್ತೆಯ ಜ್ಞಾನಭಾರತಿ ಸಭಾಂಗಣದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ರೈತರು ಹಾಗೂ ಭೂ ಮಾಲೀಕರ ಜತೆ ಸಂವಾದ ಕಾರ್ಯಕ್ರಮ ನಡೆಸಿದ ಶಿವಕುಮಾರ್ ಅವರು ಯೋಜನೆಯಲ್ಲಿ ಭೂಮಿ ಕಳೆದುಕೊಂಡಿರುವವರ ಸಮಸ್ಯೆ ಆಲಿಸಿ, ಅವರ ಸಲಹೆ ಮತ್ತು ಅಭಿಪ್ರಾಯ ಪಡೆದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು,  ಜಮೀನು ಉಳಿಸಿಕೊಳ್ಳಬೇಕು, ಮನೆ ಕಟ್ಟಬೇಕು ಎಂಬುದು ಪ್ರತಿಯೊಬ್ಬರ ಕನಸು. ಇಂದಿನ ಸಭೆಯಲ್ಲಿ ನೀವು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದೀರಿ. ಕಾಲ ಮಿತಿಯಲ್ಲಿ ಯೋಜನೆ ಜಾರಿ, ಪರ್ಯಾಯ ಭೂಮಿ ಹಂಚಿಕೆ, ಸ್ವಾಧೀನ ಪಡಿಸಿಕೊಂಡಿರುವ ಭೂಮಿಗೆ ಎನ್ ಓ ಸಿ ನೀಡಬೇಕು, ಬದಲಿ ನಿವೇಶನ ನೀಡುವ ಬಗ್ಗೆ ಸಲಹೆ ನೀಡಿದ್ದೀರಿ.

    ನಾನು ಸ್ವಾಧೀನ ಆಗಿರುವ ಭೂಮಿ ಎನ್ ಓ ಸಿ ನೀಡಲು ಸಾಧ್ಯವಿಲ್ಲ. ಅದನ್ನು ನೇರವಾಗಿ ನಿಮಗೆ ಸ್ಪಷ್ಟಪಡಿಸುತ್ತೇನೆ. ನಾನು ಈ ಯೋಜನೆ ನಿಲ್ಲಿಸಲು ಆಗುವುದಿಲ್ಲ. ಆದರೆ ಯಾವ ರೀತಿ ನಿಮ್ಮ ಹಿತ ಕಾಯಬೇಕು, ಯಾವ ರೀತಿ ನಿಮಗೆ ಹೆಚ್ಚಿನ ಅನುಕೂಲ ಆಗುವಂತೆ ಅಗತ್ಯ ಕ್ರಮ ಕೈಗೊಳ್ಳುತ್ತೇನೆ. ರಸ್ತೆಯೂ ಆಗಬೇಕು, ನಿಮಗೂ ನ್ಯಾಯ ಒದಗಿಸಬೇಕು ಎಂಬುದು ನನ್ನ ಉದ್ದೇಶ.

    ನೀವು ಕೊಟ್ಟಿರುವ ಅಮೂಲ್ಯ ಸಲಹೆಗಳನ್ನು ನಾನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ. ನಂತರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಆದಷ್ಟು ಬೇಗ ಈ ವಿಚಾರವಾಗಿ ತೀರ್ಮಾನ ಮಾಡಲಾಗುವುದು. ನಾನು ನಿಮ್ಮ ಜತೆ ಇದ್ದೇನೆ. ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ.

    ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ. ಆಗಲೇ ಈ ರಸ್ತೆ ನಿರ್ಮಾಣ ಆಗಿದ್ದರೆ ನಮಗೆ ಇಷ್ಟು ಹೊರೆ ಆಗುತ್ತಿರಲಿಲ್ಲ. ನ್ಯಾಯಾಲಯದಲ್ಲಿ ಈ ಯೋಜನೆ ವಿಚಾರಣೆ ಆಗಿ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಆದೇಶ ಬಂದಿದೆ.

    ನಮ್ಮ ಸರ್ಕಾರ ಹೊಸ ಭೂಮಿಗೆ ಅಧಿಸೂಚನೆ ಹೊರಡಿಸುವ ಪರಿಸ್ಥಿತಿಯಲ್ಲಿ ಇಲ್ಲ. ನನ್ನ ಜಮೀನು ಕೂಡ ಭೂ ಸ್ವಾಧೀನ ಆಗುತ್ತಿದೆ. ಈ ಸಮಯದಲ್ಲಿ ನೋಟಿಫಿಕೇಶನ್ ಆಗಿರುವ ಜಮೀನುಗಳನ್ನು ಡಿನೋಟಿಫಿಕೇಶನ್ ಮಾಡಲು ಸಾಧ್ಯವಿಲ್ಲ. ಒಂದುವೇಳೆ ಮಾಡಿದರೆ ಕಾನೂನು ಸಮಸ್ಯೆ ಎದುರಿಸಬೇಕಾಗುತ್ತದೆ.

    ರೈತನಿಗೆ ಸಹಾಯ ಮಾಡಬೇಕು ಎಂಬುದು ನಮ್ಮ ಆಸೆ. ಈ ಯೋಜನೆಗೆ 25 ಸಾವಿರ ಕೋಟಿ ಅಗತ್ಯವಿದೆ. ಈ ಯೋಜನೆ ಆದರೆ ಸುತ್ತಮುತ್ತಲ ಜಮೀನು ಬೆಲೆ 5 ಪಟ್ಟು ಹೆಚ್ಚಾಗಲಿದೆ. ಇನ್ನು ನಾವು ಈ ಯೋಜನೆ ತಳ್ಳಿಕೊಂಡು ಹೋಗಲು ಆಗುವುದಿಲ್ಲ. ಇದಕ್ಕಾಗಿ ರೈತರಿಂದಲೇ ಅವರ ಸಮಸ್ಯೆ ಅರಿತು, ಅವರ ಸಲಹೆ ಮತ್ತು ಅಭಿಪ್ರಾಯ ಪಡೆಯಲು, ಪರಿಹಾರ ಇದ್ದರೆ ಅದನ್ನು ಪಡೆಯಲು ಈ ಸಭೆ ಮಾಡಿದ್ದೇನೆ. ನಿಮ್ಮ ಪರಿಸ್ಥಿತಿ ನಾನು ಅರಿತಿದ್ದೇನೆ. ನೀವು ನನ್ನ ಸ್ಥಾನದಲ್ಲಿ ನಿಂತು ಈ ವಿಚಾರದಲ್ಲಿ ಯಾವ ರೀತಿ ಮುಂದುವರಿಯಬೇಕು ಎಂದು ಸಲಹೆ ನೀಡಿ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    “ತಂಬಾಕು ಸೇವನೆಯಿಂದ ಯುವ ಜನತೆ ದೂರವಿರಿ”: ತಂಬಾಕು ಮುಕ್ತ ಯುವ ಅಭಿಯಾನ

    November 24, 2025

    ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ…

    ಸಂವಿಧಾನ ದಿನಾಚರಣೆ, ಅಂಬೇಡ್ಕರ್ ಅವರ ಪರಿನಿರ್ವಾಣ ದಿನ: ಪೂರ್ವಭಾವಿ ಸಭೆ | ಅಧಿಕಾರಿಗಳ ವಿರುದ್ಧ ಪ್ರತಿಭಟನೆ

    November 24, 2025

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.