nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026
    Facebook Twitter Instagram
    ಟ್ರೆಂಡಿಂಗ್
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಬಿರಗಳಿಂದ ಸೇವಾ ಮನೋಭಾವನೆ ರೂಪಿಸಿಕೊಳ್ಳಲು ಸಾಧ್ಯ: ಬಿ.ಆರ್ ಪಾಟೀಲ್
    Uncategorized August 9, 2023

    ಶಿಬಿರಗಳಿಂದ ಸೇವಾ ಮನೋಭಾವನೆ ರೂಪಿಸಿಕೊಳ್ಳಲು ಸಾಧ್ಯ: ಬಿ.ಆರ್ ಪಾಟೀಲ್

    By adminAugust 9, 2023No Comments2 Mins Read
    b r pateel

    ಬಾಗಲಕೋಟೆ: ಸಾಮಾಜಿಕ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದರ ಜೊತೆಗೆ ಗ್ರಾಮೀಣ ಸಮುದಾಯಗಳನ್ನು ಪರಿಚಯ ಮಾಡಿಸಲು ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳು ಸಹಾಯಕವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಶ್ರಾಂತ ಪ್ರಾಚಾರ್ಯರಾದ ಬಿ.ಆರ್ ಪಾಟೀಲ್ ಹೇಳಿದರು.

    ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರಿಂದ ಹಮ್ಮಿಕೊಂಡ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು, ಸಸಿಗೆ ನೀರೆರೆಯುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. 1969ರಲ್ಲಿ ರಾಷ್ಟ್ರೀಯ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಭಾರತದಲ್ಲಿ 1 ಕೋಟಿ 49 ಲಕ್ಷ ಹಾಗೂ ಕರ್ನಾಟಕದಲ್ಲಿ 2 ಲಕ್ಷ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
    ಎಐ ತಂತ್ರಜ್ಞಾನದ ಜಗತ್ತಿನಲ್ಲಿ ನಾವು ಬದುಕುತ್ತಿದ್ದು ಯಂತ್ರಗಳು ತಮ್ಮಷ್ಟಕ್ಕೆ ತಾವೆ ಅಭಿವೃದ್ಧಿ ಪಡೆಯುವಷ್ಟು ಜಗತ್ತು ಮುಂದುವರೆದಿದೆ. ಅದರಲ್ಲಿ ಪೈಪೋಟಿ ಸಾಮರ್ಥ್ಯ ಬೆಳಸಿಕೊಳ್ಳಬೇಕಿದೆ. ಸಮಾಜ ಅಭಿವೃದ್ಧಿಯತ್ತ ಸಾಗುತ್ತಿದ್ದು ಶಿಕ್ಷಣ, ನೀರು, ಆಹಾರ, ಆರೋಗ್ಯಗಳೆಲ್ಲವು ಮಾರಾಟ ಮಾಡುವ ಪೈಪೋಟಿ ಜಗತ್ತಿನಲ್ಲಿ ನಾವು ಬದಕುವ ಸಾಮರ್ಥ್ಯವನ್ನು ಬೆಳಸಿಕೊಳ್ಳಬೇಕಿದೆ. ಇಂತಹ ಶಿಬಿರಗಳಿಂದ ನೀವು ಆತ್ಮವಿಶ್ವಾಸ ಬೆಳಸಿಕೊಳ್ಳುವುದರ ಮೂಲಕ ಸೇವೆಯನ್ನು ಕಲಿಯಲು ಸಾಧ್ಯ ಎಂದರು.


    Provided by
    Provided by

    ನಾಯಕತ್ವದ ಗುಣವನ್ನು ಬೆಳಸಿಕೊಳ್ಳಲು ಮತ್ತು ಯಶಸ್ವಿ ವ್ಯಕ್ತಿಯಾಗಿ ರೂಪಗೊಳ್ಳಬೇಕೆಂದರೆ ಸಮುದಾಯಕ್ಕಾಗಿ ಶ್ರಮಿಸುವುದನ್ನು ರೂಡಿಸಿಕೊಳ್ಳಬೇಕು. ವ್ಯಕ್ತಿತ್ವವು ಆತ್ಮವಿಶ್ವಾಸದಿಂದ ರೂಪಗೊಳ್ಳುತ್ತದೆ ಹೊರತು ಬಾಹ್ಯ ಒತ್ತಡಗಳಿಂದಲ್ಲ. ಸಾಧನೆಯನ್ನು ಸಂಪತ್ತಿನಿಂದ ನಿರ್ಧರಿಸಲು ಸಾಧ್ಯವಿಲ್ಲ ನೀವು ಮಾಡುವ ಕೆಲಸದಲ್ಲಿನ ಪರಿಪೂರ್ಣತೆಯಿಂದ ಅದು ಸಾಧ್ಯ ಎಂದರು.

    ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಈ ಶಿಬಿರಗಳನ್ನು ಹಮ್ಮಿಕೊಳ್ಳುವುದರಿಂದ ಗ್ರಾಮೀಣ ಜನರನ್ನು ಹತ್ತಿರದಿಂದ ನೋಡಿ ಅವರ ಜೀವನ ಶೈಲಿಯನ್ನು ಅರಿತುಕೊಳ್ಳಲು ಪ್ರಯತ್ನಿಸಿ. ಶಿಕ್ಷಣ ಮುಗಿದ ನಂತರ ಉದ್ಯೋಗ ಪಡೆಯುವುದೇ ಒಂದು ಗುರಿಯನ್ನಾಗಿಸಿಕೊಂಡ ನಾವುಗಳು ಕೃಷಿ, ಬೇಸಾಯ ಪದ್ದತಿಯನ್ನು ಮರೆಯುತ್ತಿದ್ದೇವೆ. ಅದರ ಜ್ಞಾನವನ್ನು ಪಡೆದುಕೊಳ್ಳುವ ಕೆಲಸ ಮಾಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಬೀಳೂರು ಗುರುಬಸಬ ಪತ್ತಿನ ಸ.ಸಂಘದ ನಿರ್ದೇಶಕರಾದ ಪ್ರಭುಸ್ವಾಮಿ ಸರಗಣಾಚಾರಿ ಅವರು ಮಾತನಾಡಿ ಬಿವಿವಿ ಸಂಘವು ಮುಚಖಂಡಿ ಗ್ರಾಮವನ್ನು ದತ್ತು ಪಡೆಯುವುದರ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಎನ್.ಎಸ್.ಎಸ್ ಶಿಬಿರಗಳನ್ನು ನಡೆಸುತ್ತ ಬಂದಿದೆ. ಸಂಚಾರ ವ್ಯವಸ್ಥೆ ಇಲ್ಲದ ಸಂದರ್ಭದಲ್ಲಿ ಇಂತಹ ಶಿಬಿರದ ಮೂಲಕ ರಸ್ತೆ ನಿರ್ಮಾಣ‌ ಮಾಡಿ ಸಾರ್ವಜನಿಕ ಸಂಚಾರಕ್ಕೆ ಸಹಾಯ ಮಾಡಿದ್ದೀರಿ. ನಿಮ್ಮ ಶ್ರಮದಾನಕ್ಕೆ ಗ್ರಾಮಸ್ಥರು ಸಹಕಾರ ನೀಡುತ್ತಾರೆ‌ ಎಂದರು.

    ಪ್ರಾಚಾರ್ಯರಾದ ಎಸ್.ಆರ್ ಮುಗನೂರಮಠ ಅವರು ಮಾತನಾಡಿ ನಮ್ಮ ದೇಶದಲ್ಲಿ ಯುವಶಕ್ತಿ ಹೇರಳವಾಗಿದೆ. ಪ್ರತಿಯೊಬ್ಬರಲ್ಲಿ ಸಾಧನೆಯ ಶಕ್ತಿ ಅಡಗಿದ್ದು ಅದನ್ನು ಅರ್ಥಮಾಡಿಕೊಂಡು ಸರಿಯಾದ ಮಾರ್ಗದಲ್ಲಿ ನಡೆಯುವ ಕೆಲಸ ಮಾಡಬೇಕಿದೆ. ದುರಾಲೋಚನೆಗಳಿಂದ ದೂರ ಸರಿದು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಕೌಶಲ್ಯ ಬೆಳಸಿಕೊಳ್ಳಬೇಕು ಎಂದರು.

    ವಿದ್ಯಾರ್ಥಿಗಳು ಅಧ್ಯಯನ‌ ಮತ್ತು ಅಂಕಗಳಿಗೆ ಮಾತ್ರ ಸೀಮಿತವಾಗುತ್ತಿದ್ದು ಸಾಮಾಜಿಕ ಪ್ರಜ್ಞೆ ಮತ್ತು ಜವಾಬ್ದಾರಿ ಬರಬೇಕಿದೆ. ಅದು ಶಿಬಿರಗಳಿಂದ ಸಾಧ್ಯವಾಗುತ್ತದೆ. ಮಾತುಗಾರಿಕೆ, ಒಡನಾಟ, ವಿವೇಚನಾ ಸಾಮರ್ಥ್ಯವು ಪರಿಸರದೊಂದಿಗೆ ಬೆರೆಯುವುದರಿಂದ ಬೆಳಸಿಕೊಳ್ಳಲು ಸಾಧ್ಯ. ಹೆಚ್ಚು ಅಂಕ ಪಡೆಯುವುದರಿಂದ ನಾಯಕತ್ವ ಗುಣ ಬೆಳೆಯಲು ಸಾಧ್ಯವಿಲ್ಲ ಪ್ರಾಮಾಣಿಕತೆ, ತಾಳ್ಮೆ, ಹೊಂದಾಣಿಕೆ, ಒಗ್ಗೂಡಿಸುವ ಸಾಮರ್ಥ್ಯಗಳು ನಾಯಕತ್ವ ಗುಣವನ್ನು ಬೆಳೆಸುತ್ತವೆ. ಇದರಿಂದ ಸಾಧಕರಾಗುತ್ತೇವೆ. ಅವುಗಳನ್ನು ವಿಶೇಷ ಶಿಬಿರಗಳು ಕಲಿಸುತ್ತವೆ ಎಂದರು.

    ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಘಟಕ 1ರ ಕಾರ್ಯಕ್ರಮಾಧಿಕಾರಿ ಎಂ.ಎಚ್ ವಡ್ಡರ ಘಟಕ 2ರ ಕಾರ್ಯಕ್ರಮಾಧಿಕಾರಿ ಡಾ. ವಿರೂಪಾಕ್ಷಿ ಎನ್.ಬಿ, ಐಕ್ಯೂಎಸಿ ಸಂಯೋಜಕರಾದ ಡಾ.ಎ.ಯು ರಾಠೋಡ ಸೇರಿದಂತೆ ಎಲ್ಲ ವಿಭಾಗದ ಪ್ರಾಧ್ಯಾಪಕರುಗಳು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ಗುಬ್ಬಿ: ಕಾನೂನಾತ್ಮಕವಾಗಿ ಕ್ರಯಕ್ಕೆ ಪಡೆದ ಜಮೀನನ್ನು ಇದು ಬೇರೆಯವರು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಬೇರೆ ವ್ಯಕ್ತಿಗೆ ಮಾರಾಟ ಮಾಡಿ…

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.