ಕೊರಟಗೆರೆ: ಅತೀ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ತಣ್ಣೇನಹಳ್ಳಿ ಸಮೀಪ ನಡೆದಿದೆ.
ಕೊರಟಗೆರೆ ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 11 ಕೆ.ವಿ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ತಣ್ಣೇನಹಳ್ಳಿ ಗ್ರಾಮದ ಸಮೀಪ ಅತೀವೇಗವಾಗಿ ಬಂದ ಕಾರಣ ಹೈ ಪವರ್ ( 11 K.V ) ಲೈನ್ ಹೊಂದಿದ್ದ ಕಂಬ ರಾಜ್ಯ ಹೆದ್ದಾರಿ ಮಧ್ಯಭಾಗಕ್ಕೆ ಉರುಳಿ ಬಿದ್ದಿದೆ.
ಘಟನೆ ಬಗ್ಗೆ ತಕ್ಷಣವೇ ಸಾರ್ವಜನಿಕರಿಂದ ಬೆಸ್ಕಾಂ ಇಲಾಖೆಗೆ ಮಾಹಿತಿ ನೀಡಿದ್ದು ನಂತರ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿದರು. ಅಲ್ಲಿಯವರೆಗೂ ಕೆಲವು ಕಾಲ ರಸ್ತೆ ಸಂಚಾರಕ್ಕೆ ಅಡ್ಡಿಉಂಟಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇನ್ನೂ ರಸ್ತೆಯಲ್ಲಿ ವಾಹನಗಳು ಅತೀ ವೇಗದಿಂದ ಚಲಿಸುತ್ತಿವೆ, ಇದರಿಂದಾಗಿ ಅಪಾಯ ಸೃಷ್ಟಿಯಾಗುತ್ತಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.
ವರದಿ : ಮಂಜುಸ್ವಾಮಿ ಎಂ.ಎನ್.ಕೊರಟಗೆರೆ