ತುಮಕೂರು: ಇಂದು ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದಲ್ಲಿ ವಿಶೇಷ ಪೂಜಾ ವ್ಯವಸ್ಥೆಯನ್ನು ಮಾಡಲಾಗಿತ್ತು.
ಬೆಳಗ್ಗೆಯಿಂದಲೂ ಶಾಂತಿ ಹೋಮ ಸೇರಿದಂತೆ ಪಂಚಾಮೃತ ಅಭಿಷೇಕವನ್ನು ನೆರವೇರಿಸಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಇಂದು ವರಮಹಾಲಕ್ಷ್ಮಿ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಸುಮಾರು ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಮಹಾಲಕ್ಷ್ಮಿ ದರ್ಶನ ಪಡೆದು ಪುನೀತರಾದರು.ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪ್ರಸಿದ್ಧ ಗೊರವನಹಳ್ಳಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆರಾಜ್ಯದ ವಿವಿಧತೆಯಿಂದ ಹಾಗೂ ನೆರೆಯ ಆಂಧ್ರಪ್ರದೇಶದಿಂದಲೂ ಭಕ್ತರು ಬಂದು ದರ್ಶನ ಮಾಡಿದರು.ದೇವಿಯ ದರ್ಶನಕ್ಕೆ ಬಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು.