nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೊರವನಹಳ್ಳಿ ಶ್ರಿ ಮಹಾಲಕ್ಷ್ಮಿಯ ದರ್ಶನ ಪಡೆಯಲು ಹರಿದು ಬಂದ ಜನಸಾಗರ
    ಜಿಲ್ಲಾ ಸುದ್ದಿ August 26, 2023

    ಗೊರವನಹಳ್ಳಿ ಶ್ರಿ ಮಹಾಲಕ್ಷ್ಮಿಯ ದರ್ಶನ ಪಡೆಯಲು ಹರಿದು ಬಂದ ಜನಸಾಗರ

    By adminAugust 26, 2023No Comments2 Mins Read
    korategere

    ಕೊರಟಗೆರೆ: ಭಕ್ತರನ್ನು ಸದಾ ತನ್ನ ಸನ್ನಿಧಿಗೆ ಪ್ರೀತಿಪಾತ್ರವಾಗಿವೇ ಕರೆಸಿಕೊಂಡು ಶ್ರದ್ಧೆ ಭಕ್ತಿಗೆ ಒಲಿಯುವ ತಾಯಿಗೆ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಶ್ರಿ ಮಹಾಲಕ್ಷ್ಮಿಯ ದರ್ಶನ ಪಡೆಯಲು ಜನಸಾಗರವೇ ಹರಿದು ಬಂದಿತು.

    ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ವರಗಳನ್ನು ನೀಡುವ ಶ್ರೀ ಮಹಾಲಕ್ಷ್ಮಿಗೆ ಮುಂಜಾನೆಯೇ ಮಹಿಳೆಯರು ತಮ್ಮ ಮನೆಗಳಲ್ಲಿ ವರಮಹಾಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದ ನಂತರ, ಈ ಪುಣ್ಯ ಕ್ಷೇತ್ರಕ್ಕೆ ಬಂದು ತಾಯಿಯ ದರ್ಶನ ಪಡೆದು ಪುನೀತರಾಗುತ್ತಾರೆ.

    ಶ್ರಾವಣ ಮಾಸದ ಎರಡನೇ ಶುಕ್ರವಾರ ಪೌರ್ಣಿಮೆಗೆ ಮೊದಲು ಬರುವ ಹಬ್ಬವಾದ ವರ ಮಹಾಲಕ್ಷ್ಮೀ ಹಬ್ಬ ಸಕಲ ಸಂಪತ್ತುಗಳಿಗೆ ಮೂಲವಾಗಿಯೂ ಪುತ್ರ ಪೌತ್ರ ಸುಖದಾಯಕವಾಗಿ ಇರುವ ಪವನಕರ ಹಬ್ಬ.

    ಪ್ರತಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ನಾನಾ ಭಾಗದಿಂದ ಭಕ್ತರು ಆಗಮಿಸುವ ಪವಿತ್ರ ಕ್ಷೇತ್ರದಲ್ಲಿ ವರಮಹಾಲಕ್ಷ್ಮೀ  ಹಬ್ಬದ ಪ್ರಯುಕ್ತ ಲಕ್ಷಾಂತರ ಜನ ಬಂದಿರುವ ನಿರೀಕ್ಷೆ ಇದ್ದು, ಉದ್ಘಾಟನೆಗೆ ಸಿದ್ಧವಾಗಿರುವ ನೂತನ ದಾಸೋಹ ಕೇಂದ್ರದಲ್ಲಿ ಸುಸಜ್ಜಿತವಾಗಿ ಪ್ರಸಾದವನ್ನು ವ್ಯವಸ್ಥೆ ಮಾಡಲಾಗಿತ್ತು, ಪ್ರತಿ ವರ್ಷದಂತೆ ಈ ವರ್ಷವೂ ಸಹ ಫ್ರೇಂಡ್ಸ್ ಗ್ರೂಪ್ ಗೆಳೆಯರ ಬಳಗ ದಾಸೋಹದ ವಿನಿಯೋಗ ನಿರ್ವಹಿಸಿತು.

    ಕೆನರಾ ಬ್ಯಾಂಕ್ ತುಮಕೂರುಜಿಲ್ಲೆ ಹಾಗೂ ತಾಲ್ಲೂಕು ಖಾಖೆಗಳಿಂದ ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ತಿಳಿಸು ಮೂಲಕ ಗೊರವನಹಳ್ಳಿ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಲಾಡು ಪ್ರಸಾದದ ಬಾಕ್ಸನ್ನು ವಿತರಿಸಿದರು.

    ರಾಜ್ಯ ಸೇರಿದಂತೆ ಹೊರ ರಾಜ್ಯದಿಂದಲ್ಲೂ ಭಕ್ತಾಧಿಗಳು ಈ ಕ್ಷೇತ್ರಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರ ರಾಗಿ ಆಶೀರ್ವಾದ ಪಡೆದುಕೊಳ್ಳುತ್ತಾರೆ, ಹಾಗೆಯೆ ತೀತಾ ಜಲಾಶಯನ ಪ್ರವಾಸಿಗರಿಗೆ ಕೈ ಬೀಸಿ ಕರೆಯುತ್ತದೆ, ಬಂದಂತಹ ಭಕ್ತರು ಒಂದು ಬಾರಿ ಈ ತೀತಾ ಡ್ಯಾಂ ನೋಡಿ ಕಣ್ಮನ ತುಂಬಿಕೊಳ್ಳುತ್ತಾರೆ.

    ಹೆಣ್ಣು ಮಕ್ಕಳಿಗೂ ಸೌಭಾಗ್ಯ ನೀಡುವ ಪುಣ್ಯಕರ ವ್ರತವಾಗಿ ಆಚರಿಸುವ ವರ ಮಹಾಲಕ್ಷ್ಮೀ ಹಬ್ಬದಂದು ರಾಜ್ಯ ಸೇರಿದಂತೆ ಹೊರ ರಾಜ್ಯಗಳಲ್ಲೂ ಪ್ರಸಿದ್ಧಿಯಾಗಿರುವ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ವರ್ಷದ ಪ್ರತಿ ಶುಕ್ರವಾರ ಮತ್ತು ಮಂಗಳವಾರ ಸೇರಿದಂತೆ ಭಾನುವಾರ ವರಮಹಾಲಕ್ಷ್ಮೀ ಹಬ್ಬದಂದು ದೇವಿಗೆ ವಿವಿಧ ನಾನಾ ಅಲಂಕಾರದೊಂದಿಗೆ ವಿಶೇಷ ಪೂಜೆ, ವ್ರತ, ಹೋಮಗಳನ್ನು ಏರ್ಪಡಿಸಲಾಗುತ್ತದೆ.

    ನಾವು ಪ್ರತಿ ವರ್ಷ ಈ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಂದು ಪೊಜೆ ಸಲ್ಲಿಸಿ ಭಕ್ತಿ ಪೂರಕವಾಗಿ ನಮಿಸುತ್ತೇವೆ ಈ ತಾಯಿ ಮಹಿಮೆಯಿಂದ ಎಲ್ಲಾವೂ ಒಳಿತಾಗಿವೆ ಎಂದು ಭಕ್ತೆಯೊಬ್ಬರು ಮಾತನಾಡಿದರು.

    ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮಾತನಾಡಿ, ಗೊರವನಹಳ್ಳಿ ಪುಣ್ಯಕ್ಷೇತ್ರಕ್ಕೆ ಹೆಚ್ಚಿನ ಮಹಿಳಾ ಭಕ್ತಾಧಿಗಳು ಆಗಮಿಸುತ್ತಿರುವುದು ರಾಜ್ಯ ಸರ್ಕಾರದ ಶಕ್ತಿ ಯೋಜನೆ ಸದುಪಯೋಗವನ್ನು ಪಡೆದು ಶ್ರೀ ಕ್ಷೇತ್ರಕ್ಕೆ ಬಂದು ಆ ಮಹಾಲಕ್ಷ್ಮಿ ದೇವಿಯ ದರ್ಶನ ಪಡೆಯುತ್ತಿದ್ದಾರೆ. ಹಬ್ಬದ ಪ್ರಯುಕ್ತ ಹೆಚ್ಚಿನ ಭಕ್ತಾಧಿಗಳು ಬರುತ್ತಿದ್ದಾರೆ. ಮಹಿಳೆಯರ ಹಾಗು ಸಾರ್ವಜನಿಕರ ಭದ್ರತೆಗೆ ಹೆಚ್ಚಿನ ಕೆಲಸವನ್ನು ತಾಲ್ಲೂಕು ಆಡಳಿತ ನಿರ್ವಸುತ್ತಿದ್ದು, ದೇವಾಲಯದ ಟ್ರಸ್ಟ್ ಸಹ ಅತ್ಯಂತ ಅನುಕೂಲವನ್ನು ನೀಡುತ್ತಿದೆ. ಮತ್ತೋಮ್ಮೆ ಎಲ್ಲಾರಿಗೂ ವರಮಹಾಲಕ್ಷ್ಮೀ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು.

    ಜಿ.ಪಂ ಸಿಇಓ ಪ್ರಭು ಜಿ ಮಾತನಾಡಿ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ ಶುಭಾಶಯ ತಿಳಿಸುತ್ತಾ ತುಮಕೂರು ಜಿಲ್ಲೆಯ ಸುಪ್ರಸಿದ್ಧ ಶ್ರೀ ಗೊರವನಹಳ್ಳಿ ಮಹಾಲಕ್ಷ್ಮೀ ದೇವಿ ಸನ್ನಿಧಿಯಲ್ಲಿ ಹಬ್ಬವನ್ನು ಆಚರಿಸಲು ಭಕ್ತಾಧಿಗಳೊಂದಿಗೆ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ದೇವಿಯ ದರ್ಶನ ಪಡೆದುಕೊಂಡಿದ್ದೇವೆ.ಜಿಲ್ಲಾ ಹಾಗೂ ತಾಲ್ಲೂಕು ಆಡಳಿತ, ದೇವಾಲಯದ ಟ್ರಸ್ಟ್ ಅತ್ಯಂತ ವ್ಯವಸ್ಥಿತವಾಗಿ ಎಲ್ಲಾ ಭಕ್ತರಿಗೆ, ಪ್ರಯಾಣಿಕರಿಗೆ ಅನುಕೂಲವನ್ನು ಕಲ್ಪಿಸಿದ್ದಾರೆ, ಭಕ್ತರು ದರ್ಶನ ಪಡೆದು ಆ ತಾಯಿಯ ಕೃಪೆಗೆ ಪಾತ್ರರಾಗಿ ಎಂದರು…

    ಜಿಲ್ಲಾಧಿಕಾರಿಗಳಾದ ಕೆ.ಶ್ರೀನಿವಾಸ್, ಪೋಲೀಸ್ ವರಿಷ್ಟಾಧಿಕಾರಿಗಳಾದ ರಾಹುಲ್ ಶಹಪೂರ್ ವಾಡ, ಜಿ.ಪಂ ಸಿಇಓ ಪ್ರಭು .ಜಿ, ತಹಸೀಲ್ದಾರ್ ಮುನಿಶಾಮಿರೆಡ್ಡಿ, ಪಿಎಸ್ ಐ ಚೇತನ್ ಕುಮಾರ್, ಟ್ರಸ್ಟ್ ನ ನಿರ್ವಹಣಾಧಿಕಾರಿ ಕೇಶವಮೂರ್ತಿ, ಅಧ್ಯಕ್ಷ ವಾಸುದೇವ, ಕಾರ್ಯದರ್ಶಿ ಮುರುಳಿಕೃಷ್ಣ, ಖಜಾಂಚಿ ಜಗದೀಶ್, ಧರ್ಮದರ್ಶಿಗಳು, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಸೇರಿದಂತೆ ಸಾವಿರಾರು ಭಕ್ತಾಧಿಗಳು ದೇವಿದರ್ಶನ ಪಡೆದರು.

    ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ


    Provided by
    Provided by
    admin
    • Website

    Related Posts

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.