ತುಮಕೂರು: ಜಮೀನು ಪೋಡಿ ಮಾಡಿಕೊಡಲು 15000 ರೂ. ಲಂಚ ಪಡೆಯುವ ವೇಳೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿ ಲೋಕಾ ಬಲೆಗೆ ಬಿದ್ದಿದ್ದಾರೆ.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಕಾಶಿ ವಿಶ್ವನಾಥ ಎಂಬುವರು, ಲಕ್ಷ್ಮಿ ನಾರಾಯಣ್ ಎಂಬುವರ ಬಳಿ ಲಂಚ ಪಡೆಯುತ್ತಿದ್ದ ರು. ಲಕ್ಷ್ಮೀ ನಾರಾಯಣ್ ಅವರ 1 ಎಕರೆ 7 ಗುಂಟೆ ಜಮೀನ ಪೈಕಿ 4 ಗುಂಟೆ ಒಳ ಚರಂಡಿ ಮಂಡಳಿ ಗೆ ಸೇರಿತ್ತು. ಜಮೀನು ಪೋಡಿ ಮಾಡಲು ಇಲಾಖೆಯಿಂದ ಪತ್ರ ನೀಡಬೇಕಿತ್ತು.
ಪತ್ರ ನೀಡಲು ಕಾಶಿ ವಿಶ್ವನಾಥ್ 15 ಸಾವಿರ ರೂ ಲಂಚಕ್ಕೆ ಬೇಡಿಕೆ. ಖಚಿತ ಮಾಹಿತಿ ಮೇರೆಗೆ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ಪಿ ವಲ್ಲಿ ಬಾಷಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಡಿವೈಎಸ್ಪಿ ಗಳಾದ ಮಂಜುನಾಥ್, ಹರೀಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದರು.