ಕಾವೇರಿ ನೀರಿನ ವಿಚಾರವಾಗಿ ಪ್ರಧಾನಮಂತ್ರಿಗಳ ಕಚೇರಿಗೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ಪತ್ರ ಬರೆಯುತ್ತಲೇ ಇದ್ದೇವೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂದಿನ ವಾರ ಅವಕಾಶ ಸಿಗಬಹುದೆಂದು ನಂಬಿದ್ದೇವೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
“ವಿಧಾನಸೌಧದಲ್ಲಿ ಮಂಗಳವಾರ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಬಳಿ ಕೇವಲ ಕುಡಿಯಲು ಮತ್ತು ನಮ್ಮ ರೈತರ ಬೆಳೆಗಳಿಗೆ ಸಾಕಾಗುವಷ್ಟು ಮಾತ್ರ ನೀರಿದೆ. ಕಾವೇರಿ ಅಚ್ಚುಕಟ್ಟು ಪ್ರದೇಶದ ಅಣೆಕಟ್ಟುಗಳಲ್ಲಿ ನೀರಿಲ್ಲ ಎಂದು ಸ್ಪಷ್ಟವಾಗಿ ಕಾವೇರಿ ಪ್ರಾಧಿಕಾರಕ್ಕೆ ಮಾಹಿತಿ ನೀಡಿದ್ದೇವೆ” ಎಂದು ತಿಳಿಸಿದರು.
ಬಿಜೆಪಿ ನಿಮ್ಮ ಮೇಲೆ ಪದೇ, ಪದೇ ಆರೋಪ ಮಾಡಲು ಕಾರಣವೇನು ಎನ್ನುವ ಪ್ರಶ್ನೆಗೆ “ಅಧಿಕಾರ ಕೈ ಬಿಟ್ಟು ಹೋಗಿರುವುದು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಉತ್ತರಿಸಿದರು.


