nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026
    Facebook Twitter Instagram
    ಟ್ರೆಂಡಿಂಗ್
    • ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    • ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
    • ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    • ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯ ಸರ್ಕಾರ ಬರಗಾಲ ಘೋಷಣೆ ವಿಳಂಬ: ಕಾರಣ ನೀಡಿದ ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ September 16, 2023

    ರಾಜ್ಯ ಸರ್ಕಾರ ಬರಗಾಲ ಘೋಷಣೆ ವಿಳಂಬ: ಕಾರಣ ನೀಡಿದ ಸಿಎಂ ಸಿದ್ದರಾಮಯ್ಯ

    By adminSeptember 16, 2023No Comments2 Mins Read
    siddharamayya 3

    ಬರಗಾಲದ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಬರನಿರ್ವಹಣೆ ಕೈಪಿಡಿ 2020 ಮಾನದಂಡಗಳಲ್ಲಿನ ಸಮಸ್ಯೆಗಳ ಕಾರಣದಿಂದಾಗಿಯೇ ಬರಗಾಲ ಘೋಷಣೆ ವಿಳಂಬವಾಗಿದೆ. ಈ ಮಾನದಂಡಗಳನ್ನು ಬದಲಾವಣೆ ಮಾಡದಿದ್ದರೆ ಬರಪೀಡಿತ ಪ್ರದೇಶದದಲ್ಲಿ ಪರಿಹಾರ ಕಾರ್ಯಗಳನ್ನು ನಡೆಸಿ ನೊಂದ ಜನರಿಗೆ ನೆರವಾಗಲು ಸಾಧ್ಯವಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

    ಪತ್ರಿಕಾ ಪ್ರಕಟಣೆ ಮೂಲಕ ಕಾರಣ ನೀಡಿರುವ ಅವರು, ಬರ ಘೋಷಣೆಗೆ ಅಗತ್ಯವಾಗಿರುವ ಮಾನದಂಡಗಳನ್ನು ಮರುಪರಿಶೀಲಿಸಬೇಕಾದ ಅನಿವಾರ್ಯತೆಯನ್ನು ವಿವರಿಸಿ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರಿಗೆ ಹಿಂದೆಯೇ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯ ವರೆಗೆ ಉತ್ತರ ಬಂದಿಲ್ಲ. ಮಾನದಂಡಗಳಲ್ಲಿನ ಬದಲಾವಣೆ ಕೇವಲ ಕರ್ನಾಟಕ ರಾಜ್ಯದ ದೃಷ್ಟಿಯಿಂದ ಮಾತ್ರವೇ ಅಲ್ಲ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಒಕ್ಕೂಟವಾದ ಭಾರತ ಗಣರಾಜ್ಯದ ಹಿತದೃಷ್ಟಿಯಿಂದಲೂ ಅತ್ಯಗತ್ಯವಾಗಿರುತ್ತದೆ.

    ಬರ ಘೋಷಣೆಯ ಮಾನದಂಡಗಳ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿರುವ ರಾಜ್ಯದ ಬಿಜೆಪಿ ನಾಯಕರು ಆ ಕೆಲಸವನ್ನು ಮಾಡದೆ ರಾಜ್ಯದ ಬರ ಪರಿಸ್ಥಿತಿಯ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಸರ್ಕಾರದ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ.

    ಕರ್ನಾಟಕವು ವೈವಿಧ್ಯಮಯವಾದ 14 ಕೃಷಿ-ಹವಾಮಾನ ವಲಯಗಳನ್ನು ಹೊಂದಿದ್ದು, ಪ್ರತಿಯೊಂದು ವಲಯವೂ ತನ್ನದೇ ಆದ ಸವಾಲುಗಳನ್ನು ಹೊಂದಿದೆ. ಪ್ರಸಕ್ತ ಇರುವ ಮಾನದಂಡಗಳು ಎಲ್ಲ ವಲಯಗಳಿಗೂ ಏಕರೂಪವಾಗಿದ್ದು, ಇದು ಬರ ಘೋಷಣೆಗೆ ಅಗತ್ಯವಾದ ಸೂಕ್ಷ್ಮಗಳು ಮತ್ತು ಬದಲಾವಣೆಗಳನ್ನು ಒಳಗೊಳ್ಳುವುದಿಲ್ಲ. ಹಾಗಾಗಿ, ವಲಯವಾರು ನಿರ್ದಿಷ್ಟವಾದ ಸೂಚ್ಯಂಕಗಳನ್ನು ಬರ ಘೋಷಣೆಗೆ ರೂಪಿಸುವುದು ಅಗತ್ಯವಾಗಿರುತ್ತದೆ.

    ಪ್ರಸಕ್ತ ಬರ ಘೋಷಣೆಯ ಮಾನದಂಡಗಳು ಹವಾಮಾನ ಶಾಸ್ತ್ರೀಯ, ಕೃಷಿ ಹಾಗೂ ಜಲಶಾಸ್ತ್ರೀಯ ಬರಗಳ ಸೂಚ್ಯಂಕಗಳನ್ನು ತನ್ನ ಮಾನದಂಡಗಳಲ್ಲಿ ಕ್ರೋಢೀಕರಿಸಿಕೊಂಡಿದೆ. ಆದರೆ, ಸದಾಕಾಲವೂ ಇದು ಅನ್ವಯ ಯೋಗ್ಯವೆಂದೇನೂ ಅಲ್ಲ. ಹವಾಮಾನ ಶಾಸ್ತ್ರೀಯ ಬರವನ್ನು ಪರಿಗಣಿಸಿಯೇ ನೋಡುವುದಾದರೆ, ಮುಂಗಾರಿನಲ್ಲಿ ಆರಂಭದಲ್ಲಿ ಮಳೆ ಕೊರತೆ ಇದ್ದದ್ದು ಆನಂತರ ಪ್ರಬಲ ಮಾರುತಗಳ ಪರಿಣಾಮ ಸುದಾರಿಸಬಹುದು.

    ಇತ್ತೀಚಿನ ವರ್ಷಗಳಲ್ಲಿ ಇದು ಹೆಚ್ಚು ಘಟಿಸಿದೆ. ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಮಳೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ, ಮುಂಗಾರು ಆರಂಭದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬಿತ್ತನೆ ಪ್ರಮಾಣ ಇಳಿಕೆಯಾಗಿರುತ್ತದೆ. ಪರಿಣಾಮ ಬೆಳೆಯಲ್ಲಿ ಕೊರತೆಯುಂಟಾಗಿ ಕೃಷಿ ಆಧರಿತ ಬರದ ಸನ್ನಿವೇಶ ಉದ್ಭವಿಸುತ್ತದೆ. ಅದರೆ, ಇದೇ ವೇಳೆ ಸುಧಾರಿಸಿದ ಮಳೆಯ ಮಾರುತಗಳಿಂದಾಗಿ ಹವಾಮಾನ ಮತ್ತು ಜಲಶಾಸ್ತ್ರೀಯ ಬರ ಕಾಣದೆ ಹೋಗಬಹುದು. ಈ ಸೂಕ್ಷ್ಮವನ್ನು ಬರ ಘೋಷಣೆಗೆ ಕಡ್ಡಾಯವಾಗಿರುವ ಮಾನದಂಡಗಳು ಒಳಗೊಳ್ಳಬೇಕಾಗಿದೆ.

    ಭಾರತೀಯ ಹವಾಮಾನ ಇಲಾಖೆಯು ದೇಶಾದ್ಯಂತ ಶೇ.10 ಮಳೆಯ ಕೊರತೆಯನ್ನೂ ಸಹ ಬರದ ವರ್ಷ ಎಂದು ತೀರ್ಮಾನಿಸಿ ಘೋಷಿಸುತ್ತದೆ. ಆದರೆ, ಮಾನದಂಡಗಳ ಪ್ರಕಾರ ರಾಜ್ಯಗಳು ಬರ ಘೋಷಣೆಯನ್ನು ಮಾಡಬೇಕಾದರೆ ಮಳೆಯ ವ್ಯತ್ಯಯ ಸೂಚ್ಯಂಕವು ಶೇ.60ಕ್ಕಿಂತ ಹೆಚ್ಚಿರಬೇಕು ಎನ್ನಲಾಗಿದೆ. ನಾವು ಈ ಎರಡರ ನಡುವಿನ ಅಂತರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿದೆ. ಮಳೆಯ ವ್ಯತ್ಯಯ ಸೂಚ್ಯಂಕವು ಶೇ.20ರಿಂದ ಶೇ.59ರವರೆಗೆ ಇದ್ದರೂ ಅದು ಬರ ಘೋಷಣೆಗೆ ಅಗತ್ಯವಾದ ಕ್ರಿಯಾಕಾರಣ (ಟ್ರಿಗರ್) ಅಂಶವೆಂದು ಪರಿಗಣಿಸಬೇಕು.

    ಶುಷ್ಕ ಅಥವಾ ಒಣ ಹವೆಯ ವಿಚಾರದಲ್ಲಿಯೂ ಕೈಪಿಡಿಯಲ್ಲಿ ಕಠಿಣವಾದ ನಿಯಮಾವಳಿ ಇದೆ. ಬರ ಘೋಷಿಸಲು ಮೂರು ವಾರಗಳ ಒಣಹವೆಯನ್ನು ಸೂಚ್ಯಂಕವಾಗಿ ಪರಿಗಣಿಸಲಾಗಿದೆ. ವಿಪರ್ಯಾಸವೆಂದರೆ, ಎರಡು ಮೂರು ವಾರಗಳ ಒಣಹವೆ ಕೂಡ ಬೆಳೆಯ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡಿ ಸರಿಪಡಿಸಲಾಗದ ಬೆಳೆಹಾನಿಗೆ ಕಾರಣವಾಗುತ್ತದೆ. ಹಾಗಾಗಿ ಮಳೆ ಕುರಿತಾದ ಸೂಚ್ಯಂಕದಲ್ಲಿ ಒಣ ಹವೆಯ ಅವಧಿಯನ್ನು ಎರಡು ವಾರಗಳಿಗಿಂತ ಕಡಿಮೆ ಎಂದು ಪರಿಗಣಿಸಬೇಕು. ಬರ ಘೋಷಣೆಯ ವಿಳಂಬಕ್ಕೆ ಕಾರಣವಾಗುವ ಕೈಪಿಡಿಯಲ್ಲಿರುವ ಮತ್ತೊಂದು ಪ್ರಮುಖ ಮಾನದಂಡವೆಂದರೆ ಅದು ರಾಜ್ಯ ಸರ್ಕಾರವು ‘ಇನ್ನು ಯಾವುದೇ ಬಿತ್ತನೆ ಚಟುವಟಿಕೆ’ ನಡೆಯುವುದಿಲ್ಲ ಎಂದು ಬೆಳೆ ಹಂಗಾಮಿನ ವೇಳೆ ಕೇಂದ್ರ ಸರ್ಕಾರಕ್ಕೆ ಕಡ್ಡಾಯವಾಗಿ ಪ್ರಮಾಣಪತ್ರ ಸಲ್ಲಿಸಬೇಕಿರುವುದು. ಇದು ಇನ್ಪುಟ್ ಸಬ್ಸಿಡಿ ಪರಿಕಲ್ಪನೆಗೆ ವ್ಯತಿರಿಕ್ತವಾಗಿದೆ. ಇನ್ಪುಟ್ ಸಬ್ಸಿಡಿ ಪರಿಕಲ್ಪನೆಯು ತಕ್ಷಣದ ಪರಿಹಾರ ನೀಡುವ ಮೂಲಕ ಆರ್ಥಿಕ ಚಟುವಟಿಕೆಯನ್ನು ಪುನರಾರಂಭಿಸಬೇಕು ಎನ್ನುತ್ತದೆ. ಆದರೆ, ಮೇಲೆ ಹೇಳಿದ ಕೇಂದ್ರದ ನಿಯಮಾವಳಿಯಿಂದಾಗಿ ರಾಜ್ಯ ಸರ್ಕಾರವು ಬರ ಘೋಷಣೆ ಮಾಡಿ ತಕ್ಷಣ ಪರಿಹಾರಕ್ಕೆ ಮುಂದಾಗಲು ಸಾಧ್ಯವಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.


    Provided by
    Provided by
    admin
    • Website

    Related Posts

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ ಪರಿಸ್ಥಿತಿಯ ಆತಂಕ ಎದುರಾಗಿದ್ದರೂ, ತಕ್ಷಣವೇ ಬರಗಾಲ ಘೋಷಿಸಲು ಸಾಧ್ಯವಿಲ್ಲ.…

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    ಗರ್ಭಕಂಠದ ಕ್ಯಾನ್ಸರ್ ತಡೆಯಬಹುದಾದ ಏಕೈಕ ಕ್ಯಾನ್ಸರ್: ಎಚ್‌ ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ  ಡಾ.ಜ್ಯೋತ್ಸ್ನಾ ರೆಡ್ಡಿ

    July 7, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘ ಆಗ್ರಹ: ಸಿಎಂಗೆ ಮನವಿ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.