ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನ ಭೇಟಿ ಆಗುವ ಮೊದಲು ಹೋಂ ಮಿನಿಸ್ಟರ್ ಬಳಿ ನಾನು ಚರ್ಚೆ ಮಾಡಿದ್ದೇನೆ.
ಕದ್ದು ಮುಚ್ಚಿ ಮಾತನಾಡುವ ಅಗತ್ಯ ಇಲ್ಲ. ಕರ್ನಾಟಕ ಪರಿಸ್ಥಿತಿ ಏನಿದೆ ಅಂತ ಶಾ ಅವರತ್ರ ಎಲ್ಲಾ ವಿಚಾರ ಮಾತಾಡಿದ್ದೇನೆ. ಇದನ್ನು ಮೊದಲು ಸರಿ ಮಾಡಿ ನಂತರ ಕುಮಾರಸ್ವಾಮಿ ಅವರು ಬಂದು ಮಾತಾಡ್ತಾರೆ ಎಂದೆ. ಯಾವುದೇ ಸಮುದಾಯಕ್ಕೆ ಈ ಪಕ್ಷದಿಂದ ಅನ್ಯಾಯ ಆಗಲು ಬಿಟ್ಟಿಲ್ಲ. ಇವತ್ತು ಯಾಕೆ ಹೀಗಾಯ್ತು, ಯಾರು ಇದಕ್ಕೆ ಕಾರಣ. ಕರ್ನಾಟಕದಲ್ಲಿ ಕುಮಾರಸ್ವಾಮಿ ಅವರ ಸರ್ಕಾರ ತೆಗೆದದ್ದು ಯಾರು? ಎಂದು ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.


