ಭಾರತ ದೇಶವನ್ನು ಬ್ರಿಟಿಷ್ ಬಂಧನದಿಂದ ಸ್ವತಂತ್ರಗೊಳಿಸಲು ಅತಿ ಚಿಕ್ಕ ವಯಸ್ಸಿನಲ್ಲಿ ದೇಶಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಹುತಾತ್ಮ ಭಗತ್ ಸಿಂಗ್ ರವರು ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.
ಸಂತಪುರ್ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹುತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಮತ್ತು ಲಾಲಾ ಲಜಪತ್ ರಾಯ್ ರವರ ಜೊತೆಗಿನ ಘಟನೆಯನ್ನು ತನ್ನ ಹೋರಾಟದ ಸ್ಪೂರ್ತಿಯಾಗಿಸಿಕೊಂಡು ಹೋರಾಡಿದವರು ಮತ್ತು ಯುವಕರಲ್ಲಿ ಹೊಸ ಜಾಗೃತಿಯ ಸಂಕೇತವಾದವರು ಕ್ರಾಂತಿಕಾರಿ ವೀರ ಹುತಾತ್ಮ ಭಗತ್ ಸಿಂಗ್ ರವರು ಎಂದು ಅವರು ತಿಳಿಸಿದರು.
ಉಪನ್ಯಾಸಕರಾದ ಶಿವಪುತ್ರ ಧರಣಿ ಮಾತನಾಡಿ ಇಂದಿನ ಯುವಕರು ಭಗತ್ ಸಿಂಗ್ ರವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಉಪನ್ಯಾಸಕರಾದ ಕಲ್ಲಪ್ಪ ಬುಟ್ಟೆ, ವನದೇವಿ ಎಕ್ಕಳೆ, ಅಂಬಿಕಾ ವಿಶ್ವಕರ್ಮ, ಮೀರಾತಾಯಿ ಕಾಂಬಳೆ ಇದ್ದರು. ಇದೇ ಸಂದರ್ಭದಲ್ಲಿ ಹುತ್ತಾತ್ಮರಾದ ಭಗತ್ ಸಿಂಗ್ ರವರ ಜನ್ಮ ದಿನಾಚರಣೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ಅಂಜಲಿ ರಾಜಕುಮಾರ, ಜಗದೇವಿ ಶೆಶಿನಾಥ ಮತ್ತು ಶೃತಿ ಸಂಜೀವಕುಮಾರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್


