nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರಕಾರ: ಬಿ.ಸಿ.ಪಾಟೀಲ್
    ರಾಜ್ಯ ಸುದ್ದಿ October 12, 2023

    ರಾಜ್ಯದ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರಕಾರ: ಬಿ.ಸಿ.ಪಾಟೀಲ್

    By adminOctober 12, 2023No Comments3 Mins Read
    b c pateel

    ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡುವ ಕಾಂಗ್ರೆಸ್ ಸರಕಾರವಿದೆ ಎಂದು ರಾಜ್ಯದ ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಸರಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವಿದ್ಯುತ್ ಕೊಡಲು ಸಾಧ್ಯವಾಗುತ್ತಿಲ್ಲ. ಲೋಡ್ ಶೆಡ್ಡಿಂಗ್ ಇದೆ. ರಾಜ್ಯದಾದ್ಯಂತ ಬರಗಾಲದ ಛಾಯೆ ಆವರಿಸಿದೆ ಎಂದು ವಿವರಿಸಿದರು.

    ಈ ವರ್ಷ ಇದುವರೆಗೂ 11,18,527  ಹೆಕ್ಟೇರ್ ಭೂಮಿಯಲ್ಲಿ ಬೆಳೆ ಹಾನಿ ಸಂಭವಿಸಿದೆ. ಆದರೆ, ಸರಕಾರವು ಒಬ್ಬನೇ ಒಬ್ಬ ರೈತರಿಗೆ ಒಂದೇ ಒಂದು ಹೆಕ್ಟೇರ್‍ಗೆ, ಒಂದು ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ. ಕಳೆದ ವರ್ಷ ನಮ್ಮ ಬಿಜೆಪಿ ಸರಕಾರದ ಅವಧಿಯಲ್ಲಿ 39,74,741 ಹೆಕ್ಟೇರ್ ಭೂಮಿಯಲ್ಲಿ ಅತಿವೃಷ್ಟಿಯಿಂದ ಬೆಳೆ ನಷ್ಟವಾಗಿತ್ತು. ಆಗ ನಾವು ಕೇಂದ್ರದಿಂದ ಬರ ಪರಿಹಾರಕ್ಕಾಗಿ ಕಾಯಲಿಲ್ಲ. ನಿಯಮಾವಳಿ ಪ್ರಕಾರ ಒಂದು ಹೆಕ್ಟೇರ್‍ಗೆ 6,800 ರೂ ಇದ್ದರೆ, ನಮ್ಮ ಸರಕಾರ 13,600 ರೂ. ಅಂದರೆ ದ್ವಿಗುಣ ಮೊತ್ತದ ಪರಿಹಾರವನ್ನು ಕೊಟ್ಟಿದ್ದೇವೆ. ತೋಟಗಾರಿಕಾ ಬೆಳೆಗೆ 13 ಸಾವಿರದ ಬದಲು 25 ಸಾವಿರಕ್ಕೆ ಏರಿಸಲಾಗಿತ್ತು ಎಂದು ತಿಳಿಸಿದರು. ನೀರಾವರಿ ಬೆಳೆಗೆ 18 ಸಾವಿರದ ಬದಲು 28 ಸಾವಿರವನ್ನು ಕೊಟ್ಟಿದ್ದು, ಕಳೆದ ಸಾಲಿನಲ್ಲಿ ಒಟ್ಟು 2,100 ಕೋಟಿ ರೂಪಾಯಿಯನ್ನು 14,62,841 ರೈತರಿಗೆ ಪರಿಹಾರವಾಗಿ ಕೊಟ್ಟಿದ್ದೇವೆ ಎಂದರು.


    Provided by
    Provided by

    ಆಗ ನಾವು ಕೇಂದ್ರ ಸರಕಾರವನ್ನು ಕಾಯುತ್ತ ಕುಳಿತಿರಲಿಲ್ಲ. ನಮ್ಮ ರಾಜ್ಯದ ರೈತರು ಬದುಕಬೇಕು. ರೈತರು ಸಂಕಷ್ಟಕ್ಕೆ, ಅತಿವೃಷ್ಟಿಗೆ ಒಳಗಾಗಿದ್ದಾರೆ; ಬೆಳೆ ಹಾಳಾಗಿದೆ ಎಂದು ಕೂಡಲೇ ನಾವು ಸರ್ವೇ ಪ್ರಾರಂಭಿಸಿ ಅದರ ವರದಿ ಪಡೆದು 48 ಗಂಟೆಯೊಳಗೆ ಪರಿಹಾರವನ್ನು ರೈತರಿಗೆ ವಿತರಿಸಿ ರೈತರನ್ನು ಬದುಕಿಸಿದ್ದೇವೆ ಎಂದು ತಿಳಿಸಿದರು. ಅಲ್ಲದೆ ಗರಿಷ್ಠ ಬೆಳೆ ವಿಮೆ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

    ಇವತ್ತು ರಾಜ್ಯ ಸರಕಾರವು ಕೇವಲ ಕೇಂದ್ರದ ಕಡೆ ಬೊಟ್ಟು ಮಾಡುತ್ತಿದೆ. ಕೇಂದ್ರವು ಹಣ ಕೊಟ್ಟಿಲ್ಲ. ಕೇಂದ್ರ ಸರಕಾರಕ್ಕೆ ಮನವಿ ಕೊಟ್ಟಿದ್ದೇವೆ ಎನ್ನುತ್ತಿದೆ. ಹಾಗಿದ್ದರೆ ನಿಮ್ಮ ಜವಾಬ್ದಾರಿ ಏನು? ಕೇವಲ ಗ್ಯಾರಂಟಿ ಅನುಷ್ಠಾನವಷ್ಟೇ ನಿಮ್ಮ ಕೆಲಸವೇ? ರಾಜ್ಯದ ರೈತರು ಬದುಕಬೇಕೇ ಬೇಡವೇ ಎಂದು ಕೇಳಿದರು.

    ಇದುವರೆಗೆ ಒಬ್ಬರೇ ಒಬ್ಬ ಸಚಿವರು ಒಬ್ಬ ರೈತರ ಹೊಲಕ್ಕೂ ಹೋಗಿಲ್ಲ. ರೈತರ ಬೆಳೆಹಾನಿ ಅಂದಾಜು ಮಾಡಿಲ್ಲ. ಎಷ್ಟು ಬೆಳೆ ನಷ್ಟ ಎಂದು ತಿಳಿಸಿಲ್ಲ. ಸುಮ್ಮನೆ ಊಹಾಪೋಹ ಮಾಡಿ, ಇವರೇ ಲೆಕ್ಕ ಬರೆದುಕೊಂಡು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದೇವೆ ಎನ್ನುತ್ತಿದ್ದಾರೆ. ರಾಜ್ಯ ಸರಕಾರಕ್ಕೆ ರೈತರ ಸಂಬಂಧ ಇಲ್ಲವೇ? ರಾಜ್ಯದ ರೈತರು ನಿಮಗೆ ಮತ ಕೊಟ್ಟಿಲ್ಲವೇ? ಅವರಿಂದಾಗಿ ನೀವು ಅಧಿಕಾರ ಮಾಡುತ್ತಿಲ್ಲವೇ? ರೈತರ ಕುರಿತು ಕಡೆಗಣನೆ ಏಕೆ? ರೈತರ ವಿಷಯದಲ್ಲಿ ಮಲತಾಯಿ ಧೋರಣೆ ಯಾಕೆ ಎಂದು ರಾಜ್ಯ ಸರಕಾರವನ್ನು ಪ್ರಶ್ನಿಸಿದರು.

    ಕಾಂಗ್ರೆಸ್ ಸರಕಾರ ಆಡಳಿತ ಇದ್ದಾಗ ಅತಿ ಹೆಚ್ಚು ಆತ್ಮಹತ್ಯೆ: ಕಾಂಗ್ರೆಸ್ ಸರಕಾರ ಆಡಳಿತ ಇದ್ದಾಗ ಅತಿ ಹೆಚ್ಚು ಆತ್ಮಹತ್ಯೆ ಆಗಿದೆ ಎಂದು ಬಿ.ಸಿ.ಪಾಟೀಲ್ ಅವರು ಅಂಕಿಅಂಶಗಳನ್ನು ಮುಂದಿಟ್ಟರು. 2015-16ರಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ಮಾಡುವಾಗ 1,525 ರೈತರು ಆತ್ಮಹತ್ಯೆ ಮಾಡಿಕೊಂಡರೆ, 16-17ರಲ್ಲಿ 1,203 ರೈತರು, 17-18ರಲ್ಲಿ 1,320 ರೈತರು ಆತ್ಮಹತ್ಯೆ ಮಾಡಿಕೊಂಡರು. 18-19ರಲ್ಲಿ ಸರಕಾರ ಬದಲಾಗಿದ್ದು, ಆತ್ಮಹತ್ಯೆ 1,085ಕ್ಕೆ ಇಳಿದಿದೆ. 2019-2020ರಲ್ಲಿ 1,091, 2020-21ರಲ್ಲಿ 855, 2021-22ರಲ್ಲಿ 963 ರೈತರು ಆತ್ಮಹತ್ಯೆ ಮಾಡಿಕೊಂಡರೆ, ಈ ವರ್ಷ ಸೆಪ್ಟೆಂಬರ್ ಅಂತ್ಯದವರೆಗೆ ಈಗಾಗಲೇ 900 ಆತ್ಮಹತ್ಯೆ ಆಗಿದೆ. ಇನ್ನೂ 3 ತಿಂಗಳು ಉಳಿದಿದೆ ಎಂದು ತಿಳಿಸಿದರು.

    ರೈತರು ಬೀದಿಗೆ ಬಿದ್ದಿದ್ದಾರೆ. ಆಗಸದತ್ತ ನೋಡುವ ಸ್ಥಿತಿ ಬಂದಿದೆ. ಸರಕಾರದತ್ತ ನೋಡಿದರೂ ಅಲ್ಲಿಂದ ಪರಿಹಾರ ಸಿಗುತ್ತಿಲ್ಲ ಎಂದ ಅವರು, ಸರಕಾರ ಕೇವಲ ಕೇಂದ್ರ ಸರಕಾರದತ್ತ ತೋರಿಸುತ್ತಿದೆ. ಇದು ರೈತವಿರೋಧಿ ಸರಕಾರ ಎಂದು ದೂರಿದರು.

    ಬರ ವೀಕ್ಷಣೆ ವರದಿ ಸಂಬಂಧ ತಂಡ ಬಂದಿದೆ. ಅವರ ವರದಿ ಸಿಕ್ಕಿದ ಬಳಿಕ ಕೇಂದ್ರವು ತನ್ನ ಪಾಲಿನ ಹಣ ಕೊಡುತ್ತದೆ. ಕಳೆದ ವರ್ಷ ನಾವು ಕೇಂದ್ರದ ಪರಿಹಾರ ಮೊತ್ತ ಬರುವ ಮೊದಲೇ ದ್ವಿಗುಣ ಮೊತ್ತವನ್ನು ಕೊಟ್ಟಿದ್ದೇವೆ. ಈ ವರ್ಷ ಯಾಕೆ ಆಗುತ್ತಿಲ್ಲ? ನೀವು ಮಾಡಬೇಕಲ್ಲ? ಎಂದು ಕೇಳಿದರು. ನಮ್ಮದು ರೈತರನ್ನು ಬದುಕಿಸುವ ಧ್ಯೇಯವಾಗಿತ್ತು ಎಂದರು.

    ರಾಜ್ಯ ಸರಕಾರ ದಿವಾಳಿ ಆಗಿದೆ. ರಾಜ್ಯ ಸರಕಾರದ ಬಳಿ ಹಣ ಇಲ್ಲ. ಇದ್ದ ಬದ್ದ ಹಣವನ್ನೆಲ್ಲ ಕೇವಲ ಭಾಗ್ಯಗಳಿಗೆ ಕೊಡುತ್ತಿದ್ದಾರೆ. ಭಾಗ್ಯಗಳಿಗೆ ಕೊಡಬೇಡಿ ಎನ್ನುತ್ತಿಲ್ಲ. ಅಕ್ಕಿಯ ದುಡ್ಡನ್ನು ಒಂದು ತಿಂಗಳಿಗಷ್ಟೇ ಕೊಟ್ಟಿದ್ದಾರೆ. ಎರಡನೇ ತಿಂಗಳು ಅರ್ಧಕ್ಕರ್ಧ ಕೊಟ್ಟಿದ್ದಾರೆ. ಭಾಗ್ಯಗಳಿಗೆ ಹಣ ಕೊಡಲು ಆಗುತ್ತಿಲ್ಲ. ಪಡಿತರ ಚೀಟಿಗಳನ್ನು ಒಂದಲ್ಲ ಒಂದು ನೆವ ಇಟ್ಟುಕೊಂಡು ರದ್ದು ಮಾಡುತ್ತಿದ್ದಾರೆ. ಕಂಡಿಷನ್ ಹಾಕಿ, ಸರ್ವರ್ ಬಂದ್ ಮಾಡುತ್ತಿದ್ದಾರೆ. ಇದರಿಂದ ನೋಂದಣಿ ಸಾಧ್ಯವಾಗುತ್ತಿಲ್ಲ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

    ಶಾಸಕ ಸಿ.ಕೆ.ರಾಮಮೂರ್ತಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಅವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿಸದ್ದರು.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡಿರುವ ವಾಗ್ದಾನವಾಗಿದ್ದು, ಆರ್ಥಿಕ ಹೊರೆಯಾದರೂ ಸಹ ಕೊಟ್ಟ…

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.