nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆ ಪರಿಹಾರದ ಭರವಸೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 14, 2023

    ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆ ಪರಿಹಾರದ ಭರವಸೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

    By adminOctober 14, 2023No Comments2 Mins Read
    dk shivakumar

    ಬೆಂಗಳೂರು: ಕೋಳಿ ಉದ್ಯಮ ಸಂಕಷ್ಟದಲ್ಲಿದ್ದು, ಮೊಟ್ಟೆ ಹಾಗೂ ಕೋಳಿಯ ಬೆಲೆ ಸಾಕಷ್ಟು ಏರಿಳಿತ ಕಾಣುತ್ತಿದೆ. ಜೊತೆಗೆ ಪಶುವೈದ್ಯಕೀಯ ಕಾಲೇಜುಗಳ ಸಮಸ್ಯೆ ಪರಿಹಾರ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

    ಬೆಂಗಳೂರಿನ ಹೆಬ್ಬಾಳದ ಪಶುವೈದ್ಯಕೀಯ ಪರಿಷತ್ ನಲ್ಲಿ ಶುಕ್ರವಾರ ನಡೆದ ವಿಶ್ವ ಮೊಟ್ಟೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು “ನಮ್ಮ ರಾಜ್ಯದಲ್ಲಿ ಪಶು ವೈದ್ಯರ ಸಂಖ್ಯೆ ಕಡಿಮೆ ಇದೆ. ಆದ ಕಾರಣ ಪಶುವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಿ ಎಂದು ಖಾಸಗಿಯವರ ಬಳಿ ಮನವಿ ಮಾಡಿದ್ದೆ, ಅವರು ನೂರಾರು ಕೋಟಿ ಬೇಕಾಗುತ್ತದೆ ಎಂದರು. ಈ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು. ಪಶುವೈದ್ಯರಿಗೆ ಸಾಕಷ್ಟು ಬೇಡಿಕೆ ಇದ್ದು, ನೀವು ಭರವಸೆ ಕಳೆದುಕೊಳ್ಳಬಾರದು ಎಂದು ವಿದ್ಯಾರ್ಥಿಗಳಿಗೆ ಭರವಸೆಯ ಮಾತುಗಳನ್ನಾಡಿದರು.


    Provided by
    Provided by

    ಇಲ್ಲಿಗೆ ಬಂದ ಒಂದಷ್ಟು ಜನ ರೈತರನ್ನು ಮಾತನಾಡಿಸಿದೆ. ಅನೇಕರು 20,000 ದಿಂದ 50,000 ತನಕ ಕೋಳಿ ಸಾಕಾಣಿಕೆ ಮಾಡುತ್ತಿರುವುದಾಗಿ ತಿಳಿಸಿದರು. ಕೋಳಿ ಆಹಾರದ ಬೆಲೆಯು ಈಗ ಹೆಚ್ಚಳವಾಗುತ್ತಿದೆ, ಒಂದೆರಡು ದಿನ ಆರೈಕೆ ಕಡಿಮೆಯಾದರೆ ತೂಕದಲ್ಲಿ ವ್ಯತ್ಯಾಸವಾಗುತ್ತದೆ, ಈ ಕ್ಷೇತ್ರದ ಬಗ್ಗೆ ನನಗೆ ಅರಿವಿರುವ ಕಾರಣ ಇಷ್ಟೆಲ್ಲಾ ಅಂಶಗಳನ್ನು ನಾನು ಉಲ್ಲೇಖಿಸುತ್ತಿದ್ದೇನೆ. ರೈತರಿಗೆ ಕೃಷಿಯ ಜೊತೆಗೆ ಉಪ ಕಸುಬಾಗಿ ಇದು ಬೆಳೆಯುವ ರೀತಿ ಯೋಜನೆ ರೂಪಿಸೋಣ ಎಂದರು.

    “ನಾನು ನಂಬಿದ ದೈವ ನೀವು ಸಸ್ಯಹಾರಿಯಾಗಿರಬೇಕು ಎಂದು ಹೇಳಿದ ಕಾರಣ ಮಾಂಸ ತಿನ್ನುವುದನ್ನು ಬಿಟ್ಟಿದ್ದೇನೆ. ಆದರೆ ಈ ದೇಶದ ಬಹುತೇಕ ಜನರ ಆಹಾರ ಕ್ರಮವನ್ನು ಗೌರವಿಸುತ್ತೇನೆ” ಎಂದು ಹೇಳಿದರು.

    “ನನ್ನ ವ್ಯವಹಾರಿಕ ಜೀವನ ಪ್ರಾರಂಭವಾಗಿದ್ದೇ ಕೋಳಿ ಫಾರಂನಿಂದ. ಪಿಯು ರಜೆ ವೇಳೆಯಲ್ಲಿ ಇದೇ ಸಂಸ್ಥೆಯಲ್ಲಿ 15 ದಿನಗಳ ಕಾಲ ಕೋಳಿ ಸಾಕಾಣಿಕೆಯ ಬಗ್ಗೆ ತರಬೇತಿ ಪಡೆದಿದ್ದೆ” ಎಂದು ಹಳೆಯ ನೆನಪಿಗೆ ಜಾರಿದರು.

    ತರಬೇತಿ ಪಡೆದ ನಂತರ ಬ್ಯಾಂಕ್‌ನಲ್ಲಿ ಸಾಲ ಪಡೆದು ಸುಂಕದಕಟ್ಟೆ- ಹೆಗ್ಗನಹಳ್ಳಿಯಲ್ಲಿ ಕೋಳಿ ಫಾರಂ ಸ್ಥಾಪಿಸಿದೆ. ನಷ್ಟವಾಯಿತು ಅದಕ್ಕೆ ಆ ವ್ಯವಹಾರ ಬಿಟ್ಟುಬಿಟ್ಟೆ. ಆನಂತರ ನಮ್ಮ ತಂದೆ- ತಾಯಿ ಊರಿನ ಜಮೀನಿನಲ್ಲಿ ಐದು ಶೆಡ್‌ಗಳನ್ನ ನಿರ್ಮಾಣ ಮಾಡಿದ್ದರು, ನಾನು ನನ್ನ ತಮ್ಮ ಕೆಲಸದ ಒತ್ತಡದ ನಡುವೆ ನೋಡಿಕೊಳ್ಳಲು ಹೋಗಲಿಲ್ಲ. ನನಗೂ ಹಾಗೂ ಈ ಕೋಳಿ ವ್ಯವಹಾರಕ್ಕೂ ಅವಿನಾಭಾವ ಸಂಬಂಧವಿದೆ ಜೀವನದ ಘಟನೆಗಳನ್ನು ಸ್ಮರಿಸಿಕೊಂಡರು.

    ಹಿಟ್ಟನ್ನು (ಮುದ್ದೆ) ಉಂಬುವನು ಬೆಟ್ಟವನು ಎತ್ತುವನು, ಜೋಳವನು ತಿನ್ನುವವನು, ತೋಳದಂತಾಗುವನು ಅದೇರೀತಿ ಮೊಟ್ಟೆಯನು ತಿನ್ನುವವನು ಜಟ್ಟಿಯಂತಾಗುವನು ಎಂದು ಹಿರಿಯರು ಹೇಳುತ್ತಾ ಇದ್ದರು. ಅಂದರೆ ನಮ್ಮ ಆಹಾರದಂತೆ ಆರೋಗ್ಯ ಇರುತ್ತದೆ. ಒಂದೇ ನಾಣ್ಯದ ಎರಡು ಮುಖಗಳು ಇವು, ಯಾವುದನ್ನು ಕಡೆಗಣನೆ ಮಾಡಬಾರದು ಎಂದರು.

    ಕೋಳಿ, ಕುರಿ, ಮೇಕೆ ಸೇರಿದಂತೆ ಮಾಂಸಹಾರಕ್ಕೆ ನಮ್ಮ ಪ್ರೋತ್ಸಾಹ ಇದ್ದೇ ಇರುತ್ತದೆ‌. ಇದೆಲ್ಲಾ ಇರದೆ ಇದ್ದರೆ ಸಮೂಹತನ ಇರುವುದಕ್ಕೆ ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು.

    “ಸಣ್ಣ ರೋಗದ ಸುದ್ದಿ ಹಬ್ಬಿದರೂ ಮೊದಲು ನಾಶ ಮಾಡುವುದೇ ಕೋಳಿಗಳನ್ನ, ಸರ್ಕಾರಕ್ಕೆ ಇದರ ಬಗ್ಗೆ ಅರಿವಿದೆ, ಎಲ್ಲರ ಜೊತೆ ಚರ್ಚೆ ಮಾಡಿ ಪರಿಹಾರ ಸೂತ್ರ ಕಂಡುಹಿಡಿಯಲಾಗುವುದು ಎಂದರು.

    ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಕೊಬ್ಬು ಹೆಚ್ಚಿಲ್ಲದ ಮೊಟ್ಟೆ ಪ್ರಯೋಗ ನಡೆದಿತ್ತು. ಅದನ್ನು ಪರಿಚಯಿಸುವ ಸಭೆಯನ್ನು ಕರೆಯಲಾಗಿತ್ತು, ಆದರೆ ನನಗೆ ಆಗ ಅದರ ಬಗ್ಗೆ ಹೆಚ್ಚು ಜ್ಞಾನವಿರಲಿಲ್ಲ. ಇತ್ತೀಚೆಗೆ ನನ್ನ ಮಕ್ಕಳು ಗಿಡದಲ್ಲಿ ಮೊಟ್ಟೆ ಬೆಳೆಯುತ್ತಿದ್ದಾರೆ ಎಂದು ಒಂದು ವಿಡಿಯೋ ತೋರಿಸಿದರು‌. ಅದನ್ನು ನೋಡಿದ ನನಗೆ ಮನುಷ್ಯ ಪ್ರಕೃತಿಯ ವಿರುದ್ದ ಹೋಗುತ್ತಿದ್ದಾನಲ್ಲ ಎಂದು ಆಶ್ಚರ್ಯವಾಯಿತು. ಅದು ಎಷ್ಟು ನಿಜವೋ, ಸುಳ್ಳೋ ಗೊತ್ತಿಲ್ಲ ಎಂದರು.

    ಅಶ್ವಂ ನೈವ ಗಜಂ ನೈವ, ವ್ಯಾಘ್ರಂ ನೈವ ಚ ನೈವ ಚ. ಅಜಾ ಪುತ್ರಂ ಬಲಿಂ ದದ್ಯಾತ್, ದೇವೋ ದುರ್ಬಲ ಘಾತಕಃ ಅಂದರೆ ನಮ್ಮ ಊರಿನಲ್ಲಿ ಕಬ್ಬಾಳಮ್ಮ, ಬೇರೆ ಕಡೆ ಮಾರಮ್ಮ ದೇವರಿದ್ದಾವೆ. ಈ ದೇವರುಗಳು ಬಲಿ ತೆಗೆದುಕೊಳ್ಳುವಾಗ, ಹೆಚ್ಚು ದುರ್ಬಲ ಪ್ರಾಣಿಗಳನ್ನ ತೆಗೆದುಕೊಳ್ಳುತ್ತದೆಯೇ ಹೊರತು, ಆನೆಯಂತಹ ಶಕ್ತಿಶಾಲಿ ಪ್ರಾಣಿಗಳನ್ನು ಮುಟ್ಟುವುದಿಲ್ಲ ಎಂಬುದು ಇದರ ಅರ್ಥ ಎಂದು ತಿಳಿಸಿದರು.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.