nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.25 ರ ನಂತರ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 23, 2023

    ಅ.25 ರ ನಂತರ ನಿಗಮ ಮಂಡಳಿ, ನೂತನ ಕಾರ್ಯಾಧ್ಯಕ್ಷರ ನೇಮಕ: ಡಿಸಿಎಂ ಡಿ.ಕೆ.ಶಿವಕುಮಾರ್

    By adminOctober 23, 2023No Comments2 Mins Read
    dk shivakumar

    ಬೆಂಗಳೂರು: ಅ. 25 ರ ನಂತರ ಸಭೆ ನಡೆಸಿ ನಿಗಮ ಮಂಡಳಿ ಹಾಗೂ ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಕುರಿತು ಸಭೆ ನಡೆಸಲಾಗುವುದು ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

    ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಶಾಸಕರಿಗೆ, ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು ಎನ್ನುವ  ಹಂಬಲ ತೀವ್ರವಾಗಿ ನಮಗೂ ಇದೆ. ನಾನೂ ಒಬ್ಬ ಕಾರ್ಯಕರ್ತನಾಗಿ ಈ ಮಾತನ್ನು ಹೇಳುತ್ತಿದ್ದೇನೆ ಎಂದು ದಸರಾ ಆದ ನಂತರ ಕಾರ್ಯಾಧ್ಯಕ್ಷರ, ನಿಗಮ ಮಂಡಳಿಗಳ ನೇಮಕದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ನಂತರ ಹೇಳಿದ್ದಿಷ್ಟು.


    Provided by
    Provided by

    “20 ನೇ ತಾರೀಕಿನಂದು ಸಿಎಂ ಜೊತೆ ಮೊದಲ ಸುತ್ತಿನ ಮಾತುಕತೆ ನಡೆಸಬೇಕು ಎಂದು ಸಮಯ ನಿಗಧಿಯಾಗಿತ್ತು. ಆದರೆ ಆ ದಿನ ಬೇರೆ ಕೆಲಸಗಳ ನಿಮಿತ್ತ ಚರ್ಚೆ ನಡೆಯಲಿಲ್ಲ. ಹಬ್ಬ ಮುಗಿದ ನಂತರ ನಾವಿಬ್ಬರು ಕುಳಿತು ಚರ್ಚೆ ನಡೆಸುತ್ತೇವೆ.

    ದೆಹಲಿಯಿಂದ ಹೈಕಮಾಂಡಿನವರು ಬರುತ್ತಾರೆ. ನಮ್ಮ ರಾಜ್ಯದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳು ರಾಜಸ್ಥಾನ ಸೇರಿದಂತೆ ಇತರೇ ರಾಜ್ಯಗಳ ಟಿಕೆಟ್ ಹಂಚಿಕೆಯಲ್ಲಿ ಇದ್ದಾರೆ. ನಾಳೆ ಟಿಕೆಟ್ ಘೋಷಣೆ ಆಗುವ ಸಾಧ್ಯತೆಯಿದ್ದು, ಅಷ್ಟರಲ್ಲಿ ನಾವು ಸಭೆ ನಡೆಸಿ ಮಾತುಕತೆ ನಡೆಸಿರುತ್ತೇವೆ.

    ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಜನರ ಸೇವೆ ಮಾಡುವಂತಹ ಭಾಗ್ಯವನ್ನ ಕೊಟ್ಟು, ನಮ್ಮ ಮೇಲೆ ವಿಶ್ವಾಸವನ್ನಿಟ್ಟಿದ್ದಾರೆ.

    ಅಧಿಕಾರವನ್ನ ಬಹಳ ಜವಾಬ್ದಾರಿಯಿಂದ ನಿರ್ವಹಿಸಿ, ನುಡಿದಂತೆ ನಡೆದು, ಉತ್ತಮವಾದ ಆಡಳಿತ ನೀಡುತ್ತಿದ್ದೇವೆ. ರಾಜ್ಯದ ಮುಖ್ಯಮಂತ್ರಿಗಳ, ಶಾಸಕರ, ಸಂಪುಟ ಸಹೋದ್ಯೋಗಿಗಳ ಪರವಾಗಿ ನಾನು ವಿಜಯದಶಮಿಯ ದಿನ ರಾಜ್ಯದ ಜನರಿಗೆ ಉತ್ತಮ‌ ಆಡಳಿತದ ಆಶ್ವಾಸನೆ ನೀಡುತ್ತೇನೆ.

    ವಿದ್ಯುತ್ ಖರೀದಿ ಮಾಡಲು, ಈ ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮ ಜನರನ್ನು ಕಾಪಾಡುತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು, ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತಿದ್ದೇವೆ.

    ಈ ವರ್ಷ ಬರಗಾಲ ಬಂದು 200 ಕ್ಕೂ ಹೆಚ್ಚು ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಮಳೆ ಜಾಸ್ತಿಯಾದರೆ ವಿದ್ಯುತ್ಚಕ್ತಿ ಉತ್ಪಾದನೆ ಹೆಚ್ಚಿರುತ್ತದೆ, ಮಳೆ ಕಡಿಮೆ ಇರುವ ಕಾರಣ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ.

    ಈ ಮೊದಲು 6 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು, 2013 ರಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ 7 ಗಂಟೆ ನೀಡಲು ತೀರ್ಮಾನ ಮಾಡಿತು. ಆದರೆ ನಂತರ ಸರ್ಕಾರಗಳು ಇದಕ್ಕೆ ಪೂರಕವಾಗಿ ಕೆಲಸ ಮಾಡಲಿಲ್ಲ. ನಾವು ಏನೇ ತೊಂದರೆಯಾದರೂ ರೈತರಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲೇಬೇಕು ಎಂದು ಸೂಚನೆ ನೀಡಿದ್ದೇವೆ.

    ವಿರೋಧ ಪಕ್ಷದವರು ಏನೇ ಮಾತನಾಡಲಿ, ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಅಧಿಕಾರಕ್ಕೆ ಬಂದ ತಕ್ಷಣ ‘ಇವರ ಕೈಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಆಗವುದಿಲ್ಲ’ ಎನ್ನುತ್ತಿದ್ದರು. ಗೃಹಲಕ್ಷ್ಮಿ ಯೋಜನೆಯಿಂದ ಮನೆಗಳಲ್ಲಿ ಗಲಾಟೆ, ಅತ್ತೆ- ಸೊಸೆ ಗಲಾಟೆ ಎಂದು ಪುಕಾರು ಹಬ್ಬಿಸಿದ್ದರು. ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹೀಗೆ ಪ್ರತಿಯೊಂದು ಕಾರ್ಯಕ್ರಮಕ್ಕೂ ಟೀಕೆ ಮಾಡುತ್ತಲೇ ಇದ್ದರು. ಆದರೂ ನಾವು ನಮ್ಮ ಕೆಲಸ ಮಾಡಿಕೊಂಡು ಬರುತ್ತಲೇ ಇದ್ದೇವೆ. ಅವರುಗಳು ಇರುವುದೇ ನಮ್ಮನ್ನು ಟೀಕೆ ಮಾಡಲು, ಎಚ್ಚರಿಸಲು.

    ಇಡೀ ದೇಶ ಕರ್ನಾಟಕದ ಕಡೆ ತಿರುಗಿ ನೋಡುತ್ತಿದೆ. ನಮ್ಮ ಸರ್ಕಾರ ಉದ್ಯೋಗ ಹೆಚ್ಚಳ ಮಾಡಲು ಅನೇಕ ಕಾರ್ಯಗಳನ್ನು ರೂಪಿಸುತ್ತಿದೆ. ಅದಕ್ಕೆ ಎಲ್ಲರೂ ಒಟ್ಟಿಗೆ ಶಕ್ತಿಮೀರಿ ಕೆಲಸ ಮಾಡುತ್ತಿದ್ದೇವೆ.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    ತುಮಕೂರು: ನಗರದ ಕನ್ನಡ ಭವನದಲ್ಲಿ ಕನ್ನಡ ಪರ ಸಂಘಟನೆಯಾದ ವಿಜಯ ಸೇನೆ ವತಿಯಿಂದ ಆಯೋಜಿಸಲಾಗಿದ್ದ ವೀರ ರಾಣಿ ಬೆಳವಾಡಿ ಮಲ್ಲಮ್ಮ…

    ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ

    April 30, 2026

    ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ

    April 30, 2026

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.