ಉತ್ತರ ಪ್ರದೇಶದಲ್ಲಿ ಶನಿವಾರದಂದು ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಡಿಸಿಪಿ ರಾಕೇಶ್ ಬರೋಟ್ ಮಾಹಿತಿ ನೀಡಿದ್ದು, ‘ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಬಳಿ ಸೂಸೈಡ್ ನೋಟ್ ಪತ್ತೆಯಾಗಿದೆ.
ಆರ್ಥಿಕ ಸಮಸ್ಯೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮುಂದಿನ ತನಿಖೆಯನ್ನು ಮುಂದುವರಿಸುತ್ತಿದ್ದೇವೆ’ ಎಂಡಿದ್ದಾರೆ. ಮೃತರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.


