nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025
    Facebook Twitter Instagram
    ಟ್ರೆಂಡಿಂಗ್
    • ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ
    • ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ
    • ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ
    • ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ
    • ಶಿರಾ | ಜಮೀನು ವಿಚಾರಕ್ಕೆ ಜಗಳ: ಒಬ್ಬನ ಕೊಲೆಯಲ್ಲಿ ಅಂತ್ಯ
    • ಉತ್ತರ ಕರ್ನಾಟಕಕ್ಕೆ ₹3,450 ಕೋಟಿ ಬಂಪರ್ ಅನುದಾನ: ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು
    • ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿರಾ ಕ್ಯಾಂಟೀನ್‌ ನಲ್ಲಿ ಹೋಳಿಗೆ ಊಟ ಹಾಕಿ ಇಂದಿರಾ ಗಾಂಧಿ ಜಯಂತಿ ಆಚರಣೆ
    ತುಮಕೂರು November 19, 2023

    ಇಂದಿರಾ ಕ್ಯಾಂಟೀನ್‌ ನಲ್ಲಿ ಹೋಳಿಗೆ ಊಟ ಹಾಕಿ ಇಂದಿರಾ ಗಾಂಧಿ ಜಯಂತಿ ಆಚರಣೆ

    By adminNovember 19, 2023No Comments2 Mins Read
    indira

    ತುಮಕೂರು: ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮ ದಿನಾಚರಣೆಯನ್ನು ವಿಭಿನ್ನವಾಗಿ ಆಚರಣೆ ಮಾಡಲಾಗಿದ್ದು ತುಮಕೂರಿನ ಇಂದಿರಾ ಕ್ಯಾಂಟೀನ್ನಲ್ಲಿ ಜನರಿಗೆ ಹೋಳಿಗೆ ಊಟ ಹಾಕಲಾಯಿತು.

    ದೇಶದ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ಅವರು ಜನ್ಮ ದಿನವನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ರಾಜಣ್ಣ ಅವರ ನೇತೃತ್ವದಲ್ಲಿ ನಗರದ ಪಾಲಿಕೆ ಆವರಣದಲ್ಲಿರುವ ಇಂದಿರಾ ಕ್ಯಾಟೀನ್‌ನಲ್ಲಿ ಆಚರಿಸಲಾಯಿತು.


    Provided by
    Provided by

    ದಿ.ಇಂದಿರಾಗಾAಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ,ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು,ಕಚೇರಿ ಕಾರ್ಯಕ್ರಮಕ್ಕೆ ಬದಲಾಗಿ,ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಟೀನ್ ಬಳಿ ಕಾರ್ಯಕ್ರಮ ಆಯೋಜಿಸಿ,ಇಂದು ಊಟಕ್ಕೆ ಬರುವ ಎಲ್ಲರಿಗೂ ಹೊಳಿಗೆ ಊಟದ ವ್ಯವಸ್ಥೆ ಮಾಡಿ,ಕಾಂಗ್ರೆಸ್ ಪಕ್ಷ ಎಂದಿಗೂ ಬಡವರ ಪರ ಎಂಬುದನ್ನು ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದರು.

    ಮಹಿಳೆ ಎಂದಿಗೂ ಅಬಲೆಯಲ್ಲ.ಸಬಲೆ, ತೊಟ್ಟಿಲು ತೂಗುವ ಕೈ ದೇಶವನ್ನು ಆಳಬಲ್ಲದು ಎಂಬುದನ್ನು ಸುಮಾರು ೧೬ಕ್ಕೂ ಹೆಚ್ಚು ವರ್ಷಗಳ ಕಾಲ ಈ ದೇಶದ ಪ್ರಧಾನಿಯಾಗಿ,ಎರಡು ಯುದ್ದಗಳನ್ನು ನಡೆಸಿ,ಅವುಗಳಲ್ಲಿ ಜಯಗಳಿಸುವ ಮೂಲಕ ಇಡೀ ವಿಶ್ವಕ್ಕೆ ಮಹಿಳಾ ಶಕ್ತಿಯನ್ನು ಪರಿಚಿಯಿಸಿದವರು ಶ್ರೀಮತಿ ಇಂದಿರಾಗಾಂಧಿ,ಉಕ್ಕಿನ ಮಹಿಳೆ ಎಂದು ವಿರೋಧಪಕ್ಷ ಗಳಿಂದಲೇ ಕರೆಯಿಸಿಕೊಂಡ ಇಂದಿರಾಗಾAಧಿಯವರನ್ನು ಸ್ಪೂರ್ತಿಯಾಗಿಟ್ಟುಕೊಂಡು ಮಹಿಳಾ ಕಾಂಗ್ರೆಸ್ ಮತ್ತಷ್ಟು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ಮುರುಳೀಧರ ಹಾಲಪ್ಪ ಸಲಹೆ ನೀಡಿದರು.

    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಅಹಮದ್ ಮಾತನಾಡಿ,ಈ ದೇಶದಲ್ಲಿ ಬಡವರು,ದೀನ ದಲಿತರು,ಅಸ್ಪೃಷ್ಯರ ಪರವಾಗಿ ಕಾನೂನುಗಳು ರಚನೆಯಾಗಿದ್ದರೆ ಅದು ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಮಾತ್ರ.ಉಳುವವನೇ ಭೂಮಿಯ ಒಡೆಯ,೨೦ ಅಂಶಗಳ ಕಾರ್ಯಕ್ರಮ,ವಿಧವಾ ವೇತನ,ವಯೋವೃದ್ದರಿಗೆ ಮಾಶಾಸನ,ಅನ್ನಭಾಗ್ಯ, ಕ್ಷೀರಭಾಗ್ಯ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ತಂದಿದೆ.ಆದರೆ ಅವುಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವಲ್ಲಿ ಇಂದಿಗೂ ಕಾಂಗ್ರೆಸ್ ಕಾರ್ಯಕರ್ತರು ಎಡವುತಿದ್ದಾರೆ.ಆದರೆ ಏನು ಮಾಡದ ಬಿಜೆಪಿ ಧರ್ಮ,ಜಾತಿ, ವರ್ಗಗಳ ಹೆಸರಿನಲ್ಲಿ ಜನರನ್ನು ಕೋಮು ದಳ್ಳುರಿ ಉಂಟು ಮಾಡಿ,ದೇಶವನ್ನು ಮತ್ತಷ್ಟು ಕತ್ತಲೆಯ ಕೂಪಕ್ಕೆ ತಳ್ಳಲು ಹೊರಟಿದೆ.ಚುನಾವಣೆ ಸಂದರ್ಭದಲ್ಲಿಯಾದರೂ ನಾವು ಕಾಂಗ್ರೆಸ್ ಕಾರ್ಯಕ್ರಮಗಳು ಯಾವುವು,ಅವುಗಳ ಉಪಯೋಗವೇನು ಎಂಬುದನ್ನು ಜನತೆಯ ಮುಂದಿಡಿದ್ದರೆ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ.ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು. ಅದರಲ್ಲಿಯೂ ಮಹಿಳಾ ಕಾರ್ಯಕರ್ತರು ಪದಾಧಿಕಾರಿಗಳು, ಗೃಹಲಕ್ಷ್ಮೀ, ಗೃಹ ಜ್ಯೋತಿ, ಶಕ್ತಿ ಯೋಜನೆಗಳನ್ನು ಜನರಿಗೆ ಮನವರಿಗೆ ಮಾಡಿಕೊಡಬೇಕೆಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾರಾಜಣ್ಣ ಮಾತನಾಡಿ, ೨೦೧೩ರಲ್ಲಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ತೆರೆದು ಅತಿ ಕಡಿಮೆ ದರದಲ್ಲಿ ಬಡವರಿಗೆ ಬೆಳಗಿನ ತಿಂಡಿ, ಮಧ್ಯಾಹ್ನದ ಊಟ ದೊರೆಯುವಂತೆ ಮಾಡಿದ್ದರು. ಇದೇ ರೀತಿಯ ಕ್ಯಾಂಟೀನ್‌ಗಳು ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿಯೂ ತೆರೆದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

    ಕಾರ್ಯಕ್ರಮದಲ್ಲಿ ಮಹಿಳಾ ಮುಖಂಡರಾದ ವಸುಂಧರ, ಸೌಭಾಗ್ಯ, ಸವಿತಾ, ನಾಗಮಣಿ, ಯಶೋಧ, ಹನುಮಕ್ಕ, ಮಂಜಮ್ಮ, ಪಾರ್ವತಮ್ಮ, ವಿಜಯ. ಯಶೋಧ, ಮಂಜುಳ ಸೇರಿದಂತೆ ಹಲವರು ಭಾಗವಹಿಸಿದ್ದರು.ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಇಂದು ಇಂದಿರಾ ಕ್ಯಾಟೀನ್‌ನಲ್ಲಿ ಊಟ ಮಾಡುವ ಎಲ್ಲರಿಗೂ ಹೊಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

    admin
    • Website

    Related Posts

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆಯ ಸಮಸ್ಯೆಯಿದ್ದು ಅಧಿಕಾರಿಗಳು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿದರು.…

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.