nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ: ಡಿ.ಕೆ. ಶಿವಕುಮಾರ್
    ರಾಜ್ಯ ಸುದ್ದಿ November 22, 2023

    ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ: ಡಿ.ಕೆ. ಶಿವಕುಮಾರ್

    By adminNovember 22, 2023No Comments3 Mins Read
    dk shivakumar

    ನಾನು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಕಡೆ ಹೆಚ್ಚು ಗಮನ ಕೊಡಲಿಲ್ಲ. ನನ್ನ 48ನೇ ವಯಸ್ಸಿಗೆ ನಾನು ಪದವೀಧರನಾದೆ. ಮಂತ್ರಿಯಾಗಿದಕ್ಕಿಂತ ನನಗೆ ಪದವೀಧರನಾದಾಗ ಹೆಚ್ಚು ಸಂತೋಷವಾಯಿತು.

    ನೀವುಗಳು ರಾಷ್ಟ್ರ ಮಟ್ಟದಲ್ಲಿ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವವರು. ಕೆಲವು ಶಾಲೆಗಳಲ್ಲಿ ಕೇವಲ ಹೆಚ್ಚು ಅಂಕಗಳಿಸಿದವರನ್ನು ಮಾತ್ರ ಸೇರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಎಲ್ಲರನ್ನು ಸೇರಿಸಿಕೊಳ್ಳುತ್ತಾರೆ. ಕುದುರೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದಲ್ಲ, ಕತ್ತೆಯನ್ನು ರೇಸ್ ನಲ್ಲಿ ಓಡುವಂತೆ ಮಾಡುವುದು ನಿಜವಾದ ಶಿಕ್ಷಣ. ಈ ಸಂಸ್ಥೆ ಈ ಪ್ರಯತ್ನ ಮಾಡುತ್ತಿದೆ.


    Provided by
    Provided by

    ನಾನು ಈ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಲ್ಲಿ ಒಂದು ಮನವಿ ಇದೆ. ಈ ಕಾರ್ಯಕ್ರಮ ಸ್ವಾಗತ, ಪರಿಚಯವನ್ನು ಶಿಕ್ಷಕರ ಬದಲಿಗೆ ಮಕ್ಕಳಿಂದ ಮಾಡಿಸಿ. ಅವರು ಭವಿಷ್ಯದ ನಾಯಕರು. ನಾಯಕನಾದವನು ಮತ್ತೊಬ್ಬ ನಾಯಕನನ್ನು ತಯಾರು ಮಾಡಬೇಕು. ನಮ್ಮ ಮಕ್ಕಳಲ್ಲಿ ಪ್ರತಿಭೆ ಇದೆ.

    ಈ ಹಿಂದೆ ಇದ್ದ ಗುರು ಶಿಷ್ಯರ ಸಂಬಂಧವೇ ಬೇರೆ, ಈಗಿರುವ ಗುರು ಶಿಷ್ಯರ ಸಂಬಂಧವೇ ಬೇರೆ. “ತ್ರೇತದೊಳ ಗುರುವು ಶಿಷ್ಯಗೆ ಜಂಗಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ, ದ್ವಾಪರದೊಳ್ ಗುರುವು ಶಿಷ್ಯಗೆ ದಂಡಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ, ಆದರೆ ಕಲಿಯುಗದೊಳ್ ಗುರುವು ಶಿಷ್ಯಂಗೆ ವಂದಿಸಿ ವಿದ್ಯೆ ಕಲಿಸಿ ಮಹಾಪ್ರಸಾದಂಗೆ” ಎಂಬ ಮಾತಿದೆ.

    ಅಂದರೆ, ತ್ರೇತಾಯುಗದಲ್ಲಿ ಗುರುಗಳು ಶಿಷ್ಯರನ್ನು ಚಚ್ಚಿ ಪಾಠ ಕಲಿಸಿದರೂ ಅದನ್ನು ಪ್ರಸಾದವೆಂದು ಸ್ವೀಕಾರ ಮಾಡುತ್ತಿದ್ದರು. ದ್ವಾಪರ ಯುಗದಲ್ಲಿ ಗುರುಗಳು ದಂಡಿಸಿದರೆ ಅದನ್ನೇ ಮಹಾಪ್ರಸಾದವೆಂದು ಸ್ವೀಕರಿಸುತ್ತಿದ್ದರು. ಆದರೆ ಈಗ ಕಲಿಯುಗದಲ್ಲಿ ಗುರುಗಳು ವಿದ್ಯಾರ್ಥಿಗಳಿಗೆ ಮನವಿ ಮಾಡಿ ಕಲಿಸಬೇಕಾದ ಪರಿಸ್ಥಿತಿ ಇದೆ. ನಾವು ಈ ಸಂದರ್ಭದಲ್ಲಿ ಇದ್ದೇವೆ.

    ಶಾಲೆಯಲ್ಲಿ ವಿದ್ಯೆ ಕಲಿಸುವವರು ಮಾತ್ರ ಶಿಕ್ಷಕರಲ್ಲ. ನಮ್ಮ ತಪ್ಪುಗಳನ್ನು ಗುರುತಿಸಿ ಬುದ್ಧಿ ಹೇಳುವವರು ಶಿಕ್ಷಕರು. ಹೀಗಾಗಿ ನಮಗೆ ಸಹಾಯ ಮಾಡುವವರನ್ನು ನಾವು ಮರೆಯಬಾರದು. ನಾವು ನಮ್ಮ ಮೂಲ ಮರೆತರೆ ಯಶಸ್ಸು ಸಾಧಿಸಲು ಆಗುವುದಿಲ್ಲ. ತಾಯಿಯೆ ನಮಗೆ ಮೊದಲ ಗುರು. ಹೀಗಾಗಿ ನಾವು ಸದಾ ಅವಳನ್ನು ನೆನೆಯುತ್ತೇವೆ. ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವಕ್ಕೆ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದರಂತೆ ನೀವು ಇವರನ್ನು ನೆನೆದು ಬದುಕಬೇಕು.

    ಇಲ್ಲಿ ಅನೇಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಿದ್ದಾರೆ. ನಾನು ಕೂಡ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. “By Birth I am an Agriculturist, By Profession I am a Businessman, By Choice I am an Educationist, By Passion I am a Politician, ಕಳೆದ ನಾಲ್ಕೈದು ವರ್ಷಗಳಿಂದ ನಾನು ನಡೆಸುತ್ತಿರುವ ಶಿಕ್ಷಣ ಸಂಸ್ಥೆ ಗೆ ನಾನು ಹೋಗಲು ಆಗಿಲ್ಲ. ನಿಮ್ಮ ಅಧ್ಯಕ್ಷರು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ ನಾನು ಸಂತೋಷದಿಂದ ಒಪ್ಪಿ ನಿಮ್ಮನ್ನು ನೋಡಲು ಬಂದಿದ್ದೇನೆ.

    ಇಲ್ಲಿ ನನ್ನಿಂದ ದೀಪ ಹಚ್ಚಿಸಲಾಗಿದೆ. ನಮಗೆ ದೀಪದ ಬೆಳಕು ಕಾಣುತ್ತಿದೆ. “ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ!”” ಎಂಬ ಶ್ಲೋಕದಂತೆ ನಿಮಗೆ ಮಂಗಳವಾಗಲಿ. ವಿದ್ಯೆ, ಜ್ಞಾನ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿ ಈ ದೀಪ ಬೆಳಗಿಸಿದ್ದೇವೆ.

    ತೇಜಸ್ವಿ ಸೂರ್ಯ ಅವರು ಮಾತನಾಡುತ್ತಾ ಈಗಿನ ಕಟುಸತ್ಯ ಹಾಗೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ನಿಮ್ಮನ್ನು ಹೇಗೆ ತಯಾರು ಮಾಡಬೇಕು ಎಂಬ ವಿಚಾರ ಪ್ರಸ್ತಾಪಿಸಿದರು. ನಿಮ್ಮ ಕೈಗೆ ಮೊಬೈಲ್ ಮತ್ತು ಇಂಟರ್ ನೆಟ್ ಸಿಕ್ಕಿದ್ದು, ನಿಮ್ಮ ಶಿಕ್ಷಕರಿಗೆ ನೀವು ಪಾಠ ಮಾಡುವ ಶಕ್ತಿ ಬಂದಿದೆ.

    ಕೃಷ್ಣ ಅವರ ಕಾಲದಲ್ಲಿ ಸಚಿವನಾಗಿದ್ದಾಗ, ಪ್ಯಾರೀಸ್ ನಲ್ಲಿ ಸಮಾವೇಶಕ್ಕೆ ಅತಿಥಿಯಾಗಿ ಹೋಗಿದ್ದೆ. ಅಂದು ನನ್ನ ಹುಟ್ಟುಹಬ್ಬದ ದಿನವಾಗಿತ್ತು. ಅದನ್ನು ತಿಳಿದ ಅವರು ವೇದಿಕೆ ಮೇಲೆ ಕರೆದು ಕೇಕ್ ಕತ್ತರಿಸಲು ಹೇಳಿದರು. ಈ ಸಂದರ್ಭದಲ್ಲಿ ಮೇಣದಬತ್ತಿ ಆರಿಸಲು ಹೇಳಿದರು. ಆಗ ಆ ಸಮಾವೇಶದಲ್ಲಿದ್ದ ವ್ಯಕ್ತಿಯೊಬ್ಬ ಆತ ಭಾರತದಿಂದ ಬಂದಿದ್ದು, ಭಾರತೀಯರ ಸಂಸ್ಕೃತಿ ದೀಪ ಬೆಳಗುವುದೇ ಹೊರತು ದೀಪ ಆರಿಸುವುದಲ್ಲ ಎಂದು ಹೇಳಿದರು.

    ಈ ರೀತಿ ದೀಪ ಬೆಳಗುವುದು ನಮ್ಮ ದೇಶದ ಸಂಸ್ಕೃತಿ. ನಿಮ್ಮ ಮನೆಯಲ್ಲಿ ಹುಟ್ಟುಹಬ್ಬ ಆಚರಿಸುವಾಗಲೂ ಈ ದೇಶದ ಆಸ್ತಿಯಾದ ನಮ್ಮ ಸಂಸ್ಕೃತಿಯನ್ನು ಬೆಳೆಸಿಕೊಂಡು ಹೋಗಿ ಎಂದು ಮನವಿ ಮಾಡುತ್ತೇವೆ. ನಾವು ದೀಪ ಹಚ್ಚಿದಾಗ ಕೇವಲ ಬೆಳಕು ಕಾಣುತ್ತದೆ. ಅದರಲ್ಲಿ ಉರಿಯುವ ಬತ್ತಿಯಾಗಲಿ, ಎಣ್ಣೆಯಾಗಲಿ ಕಾಣುವುದಿಲ್ಲ.  ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ನಿಮ್ಮ ಶಿಕ್ಷಕರು ಹಾಗೂ ಪೋಷಕರ ಶ್ರಮವನ್ನು ಗಮನದಲ್ಲಿಟ್ಟುಕೊಳ್ಳಿ. ನೀವು ಭವಿಷ್ಯದಲ್ಲಿ ದೊಡ್ಡ ನಾಯಕರಾಗಿ ಬೆಳೆಯಬೇಕು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗ ಎಂಬ ಆಧಆರಸ್ತಂಭಗಳಿವೆ. ಅದೇ ರೀತಿ ನಮ್ಮ ಸಮಾಜದಲ್ಲಿ ಕೃಷಿಕ, ಶಿಕ್ಷಕ, ಸೈನಿಕ ಹಾಗೂ ಶ್ರಮಿಕ ಬಹಳ ಮುಖ್ಯವಾದ ಅಂಗಗಳು. ನೀವು ನಿಮ್ಮ ಜೀವನದಲ್ಲಿ ನಾಲ್ಕು ಡಿ ಗಳನ್ನು ಅಳವಡಿಸಿಕೊಳ್ಳಬೇಕು. ನೀವು ಕನಸು ಕಾಣಬೇಕು (Dream), ಕನಸು ಸಾಕಾರಗೊಳಿಸಲು ಆಸೆ (Desire)ಪಡಬೇಕು. ಆ ಕನಸಿಗಾಗಿ ಬದ್ಧತೆ (Dedicate) ಇರಬೇಕು. ಆ ಕನಸಿನ ಸಾಕಾರಕ್ಕೆ ಶಿಸ್ತು (Discipline) ಹೊಂದಿರಬೇಕು. ಆಗ ನೀವು ದೇಶಕ್ಕೆ ಆಸ್ತಿಯಾಗಿ ಬೆಳೆಯಲು ಸಾಧ್ಯ.

    ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯಾ, ಪದುಮನಾಭನ ಪಾದ ಭಜನೆ ಪರಮಸುಖವಯ್ಯಾ ಎಂಬ ಪುರಂದರ ದಾಸರ ಕೀರ್ತನೆಯಂತೆ ನಿಮ್ಮಂತಹ ಮಕ್ಕಳ ಭೇಟಿ ಮಾಡುವ ಅವಕಾಶ ಸಿಕ್ಕಿದ್ದೆ ನನ್ನ ಭಾಗ್ಯ.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.