nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ: ಛಲವಾದಿ ನಾರಾಯಣಸ್ವಾಮಿ ಟೀಕೆ
    ರಾಜ್ಯ ಸುದ್ದಿ November 22, 2023

    ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ: ಛಲವಾದಿ ನಾರಾಯಣಸ್ವಾಮಿ ಟೀಕೆ

    By adminNovember 22, 2023No Comments2 Mins Read
    narayanaswami

    ಬೆಂಗಳೂರು: ಕಾಂಗ್ರೆಸ್ ನವರದ್ದು ನುಡಿದಂತೆ ನಡೆದ ಸರಕಾರ ಅಲ್ಲ. ಕಾಂಗ್ರೆಸ್ ಸರಕಾರವು 6 ತಿಂಗಳ ಆಡಳಿತ ಸಂಬಂಧ ಕೊಟ್ಟಿರುವ ಅಂಕಿಅಂಶಗಳು ಪ್ರಶ್ನಾರ್ಥಕವಾಗಿವೆ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣೆ ಸಂದರ್ಭದಲ್ಲಿ ಜನರಿಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಕೊಟ್ಟ ಮಾತಿನಂತೆ ಅಥವಾ ನುಡಿದಂತೆ ನಡೆದಿದ್ದೇವೆ ಎಂದು ನಿನ್ನೆ ದೊಡ್ಡ ದೊಡ್ಡ ಜಾಹೀರಾತು ನೀಡಿದ್ದಾರೆ. ಅಂಕಿಅಂಶಗಳನ್ನೂ ಕೊಟ್ಟಿದ್ದಾರೆ. ಆದರೆ, ಎಷ್ಟೋ ಜನರಿಗೆ ಅಕ್ಕಿಗೆ ಕೊಡುವ ಹಣ ಸಿಕ್ಕಿಲ್ಲ. ಮಹಿಳೆಯರಿಗೆ 2 ಸಾವಿರ ರೂಪಾಯಿ ಒಂದು ಕಂತು ಮಾತ್ರ ಸಿಕ್ಕಿದೆ. ಇನ್ನೂ 3 ತಿಂಗಳು ಬಂದಿಲ್ಲ. ವಿದ್ಯುತ್ 200 ಯೂನಿಟ್ ಎಂದಿದ್ದರು. 200 ಯೂನಿಟ್ ಬದಲು ವರ್ಷದ ಸರಾಸರಿ ಯೂನಿಟ್ ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಯುವನೀತಿ ಇನ್ನೂ ಪ್ರಾರಂಭಿಸಿಲ್ಲ. ಎಂದು ಎಂದು ಆರೋಪಿಸಿದರು.


    Provided by
    Provided by

    ಕಾಂಗ್ರೆಸ್ ಪಕ್ಷದ ಆಶ್ವಾಸನೆಗಳು ಜನರಿಗೆ ತಲುಪುತ್ತಿಲ್ಲ. ಕಾಂಗ್ರೆಸ್ ವೈಫಲ್ಯಗಳನ್ನು ನಾವು ತಿಳಿಸುತ್ತಿದ್ದೇವೆ ಎಂದ ಅವರು, ಬಿಜೆಪಿಯವರು ಕಾಂಗ್ರೆಸ್ ಯೋಜನೆಗಳನ್ನು ನಕಲು ಮಾಡಿಲ್ಲ. ಬದಲಾಗಿ ಕಾಂಗ್ರೆಸ್ಸೇ ನಮ್ಮ ಯೋಜನೆಗಳ ನಕಲು ಮಾಡಿದೆ. ನಾವು 12 ಕೋಟಿ ಶೌಚಾಲಯಗಳನ್ನು ಕಟ್ಟಿಸಿಕೊಟ್ಟಿದ್ದೇವೆ. ಇದು ಸಾಂದರ್ಭಿಕವಾಗಿ ಮಾಡಬೇಕಾದ ಕೆಲಸ. 1.25 ಲಕ್ಷ ಕಿಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಿದ್ದೇವೆ. ಅನೇಕ ಟನೆಲ್ ಮಾಡಿದ್ದೇವೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ 6 ಸಾವಿರವನ್ನು ಪ್ರಧಾನಿಯವರು ವರ್ಗಾಯಿಸುತ್ತಿದ್ದಾರೆ. ರಾಜ್ಯದಲ್ಲೂ 4 ಸಾವಿರವನ್ನು ಹಾಕುತ್ತಿದ್ದು, ಅದನ್ನು ನೀವು ಬಂದ್ ಮಾಡಿದ್ದೀರಿ. ಅದು ಗ್ಯಾರಂಟಿ ಎಂದಿಲ್ಲ ಎಂದು ವಿಶ್ಲೇಷಿಸಿದರು.

    ಗರೀಬ್ ಅನ್ನ ಯೋಜನೆಯಡಿ 80 ಕೋಟಿ ಜನರಿಗೆ ಪಡಿತರ ಕೊಡಲಾಗಿದೆ. ಅದೇನೂ ಗ್ಯಾರಂಟಿ ಅಲ್ಲ; ಪ್ರಣಾಳಿಕೆಯಲ್ಲೂ ಇರಲಿಲ್ಲ. 220 ಕೋಟಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ಕೊಡಲಾಯಿತು. ಅದೇನೂ ಗ್ಯಾರಂಟಿ ಯೋಜನೆ ಅಲ್ಲ. ಉಜ್ವಲ ಯೋಜನೆಯಡಿ 9.6 ಕೋಟಿ ಸಿಲಿಂಡರ್ ಗಳನ್ನು ಉಚಿತವಾಗಿ ಬಡವರಿಗೆ ನೀಡಿದ್ದೇವೆ. ಅದನ್ನು ಗ್ಯಾರಂಟಿ ಎನ್ನಲಿಲ್ಲ ಎಂದು ವಿವರಿಸಿದರು.

    ಮುಖ್ಯಮಂತ್ರಿಗಳು ದೇಶದ ಪ್ರಧಾನಿಯವರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ನಾಲಿಗೆ ಬಿಗಿಹಿಡಿದು ಮಾತನಾಡಬೇಕು ಎಂದು ಆಗ್ರಹಿಸಿದರು. ಪ್ರಧಾನಿ ಮೋದಿಯವರ ಆಡಳಿತದಡಿ ದೇಶ ಸುಭದ್ರವಾಗಿದೆ. ಅವರ ಕಾರ್ಯಕ್ಕೆ ದೇಶ, ವಿಶ್ವದಲ್ಲೇ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ನುಡಿದರು.

    ಎಸ್ಸಿಎಸ್ಪಿ–ಟಿಎಸ್ಪಿ ಬಜೆಟ್ನ ಶೇ 24ರಷ್ಟು ಕೊಡುವುದಾಗಿ ಹೇಳಿದ್ದೀರಿ. 3.25 ಲಕ್ಷ ಕೋಟಿಯ ಬಜೆಟ್ನಡಿ ನೀವೇ ಘೋಷಿಸಿದಂತೆ ಕೊಡುವುದಾದರೆ 72 ಸಾವಿರ ಕೋಟಿ ಕೊಡಬೇಕಿತ್ತು. ಬರಿಯ 34 ಸಾವಿರ ಕೋಟಿ ಕೊಟ್ಟಿದ್ದೀರಿ. ದಲಿತರ ಹಣ ಬೇರೆ ಕಡೆ ವರ್ಗಾವಣೆ ಮಾಡುವುದಿಲ್ಲ; 7 ಡಿ ರದ್ದು ಮಾಡುವುದಾಗಿ ಮಹದೇವಪ್ಪ ಹೇಳಿದ್ದರು. ಆದರೆ, ಗ್ಯಾರಂಟಿ ಸ್ಕೀಮಿಗೆ 11,700 ಕೋಟಿಯನ್ನು ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಆಕ್ಷೇಪಿಸಿದರು.

    7 ಡಿ ರದ್ದು ಮಾಡುವ ಮನಸ್ಸಿದ್ದರೆ 11 ಸಾವಿರ ಕೋಟಿಗೂ ಹೆಚ್ಚು ಹಣವನ್ನು ವರ್ಗಾವಣೆ ಮಾಡಿ ದಲಿತರಿಗೆ ಮೋಸ ಮಾಡಿದ್ದೇಕೆ? ಇದಕ್ಕೆ ಮೊದಲು ಉತ್ತರ ಕೊಡಿ ಎಂದು ಸರಕಾರ ಮತ್ತು ಸಚಿವರನ್ನು ಒತ್ತಾಯಿಸಿದರು. ದಲಿತರಿಗೆ ಮಾಡಿದ ಮೋಸವನ್ನು ಸಹಿಸಲಾಗದು. ನೀವು ಹೇಳಿದಂತೆ ನಡೆಯುವುದಾದರೆ ನಿಗದಿತ ಯೋಜನೆಗೆ 11,700 ಕೋಟಿ ವಾಪಸ್ ಕೊಡಿ ಎಂದು ಆಗ್ರಹಿಸಿದರು. ನಾವು ಜನರನ್ನು ಎಚ್ಚರಿಸುತ್ತೇವೆ. ನಾವು ಹೋರಾಟ ಮುಂದುವರೆಸುತ್ತೇವೆ. ದಲಿತರಿಗೆ ಕಾಂಗ್ರೆಸ್ ಸರಕಾರ ಬಹಳಷ್ಟು ಅನ್ಯಾಯ ಮಾಡಿದೆ ಎಂದು ತಿಳಿಸಿದರು.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.