nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ
    ತುಮಕೂರು November 23, 2023

    ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ

    By adminNovember 23, 2023No Comments2 Mins Read

    ತುಮಕೂರು: ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣವನ್ನು ಕಲಿಯುತ್ತಿದ್ದು, ವಿಶೇಷವಾಗಿ ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಗುರು-ಶಿಷ್ಯರ ಸಂಬಂಧ ತಂದೆ ಮಕ್ಕಳಂತೆ ಹಾಗೆಯೇ ಇಲ್ಲಿಯ ವಿದ್ಯಾರ್ಥಿಗಳು ಸಹೋದರರಂತೆ ಪ್ರೀತಿ ವಾತ್ಸಲ್ಯದ ವಾತಾವರಣವನ್ನು ಕಾಪಾಡಿಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆಯುವ ಮೂಲಕ ಉತ್ತಮ ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ನಮ್ಮ ಕಾಲೇಜಿಗೆ ಹಳೆ ವಿದ್ಯಾರ್ಥಿಗಳ ಸಂಘ ಸದಾ ಬೆಂಬಲವಾಗಿ ನಿಂತಿದೆ. ಆ ಸಂಘದ ಪ್ರತಿಯೊಬ್ಬ ಕಾರ್ಯಕರ್ತನೂ ಅವರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವುದು ಖುಷಿಯ ಸಂಗತಿ. ಇಂದಿನ ವಿದ್ಯಾರ್ಥಿಗಳು ಕಾಲೇಜಿನ ಉಪಾನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿಗಳ ಮಾರ್ಗದರ್ಶನ ಪಡೆದು ಸಮಾಜದಲ್ಲಿ ಒಬ್ಬ ಉತ್ತಮ ಚಿತ್ರಕಲಾವಿದರಾಗಬೇಕು ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಕಲಾ ಶಿಕ್ಷಕ ಎಂ.ಎನ್.ಸುಬ್ರಮಣ್ಯ ಅವರು ಮಾತನಾಡಿ, ಇಲ್ಲಿ ಹಲವು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣಕ್ಕೆ ಪ್ರವೇಶ ಪಡೆದು ಅಷ್ಟೇ ವೇಗದಲ್ಲಿ ತರಗತಿಯಿಂದ ದೂರ ಉಳಿಯುವ ಪ್ರಸಂಗಗಳು ಹೆಚ್ಚು ನಡೆಯುತ್ತಿವೆ. ಯಾವುದೇ ಕ್ಷೇತ್ರವಾಗಿದ್ದರೂ ಆಸಕ್ತಿ ಬಹಳ ಮುಖ್ಯವಾಗಿರುತ್ತದೆ. ಎಲ್ಲಾ ಕ್ಷೇತ್ರಗಳು ತಮ್ಮದೇ ವ್ಯಾಪ್ತಿಯಲ್ಲಿ ಸಾಧನೆ ಗೈಯುತ್ತಿರುವುದನ್ನು ನೋಡುತ್ತಿದ್ದೇವೆ. ಚಿತ್ರಕಲಾ ಕ್ಷೇತ್ರವು ಇತರೆ ಕ್ಷೇತ್ರಗಳಿಗಿಂತ ತುಸು ಭಿನ್ನವಾಗಿದ್ದು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಜನಮನ್ನಣೆ ಗಳಿಸಿದೆ ಎಂದು ಹೇಳಿದರು.

    ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಿ.ಎಲ್.ನಟರಾಜು ಮಾತನಾಡಿ, ನಾವು ಇದೇ ಕಾಲೇಜಿನಲ್ಲಿ ಕಲಿತಿದ್ದೇವೆ. ಕಾಲೇಜಿನ ಹಾಗೂ–ಹೋಗುಗಳಿಗೆ ಜೊತೆಯಾಗಿದ್ದೇವೆ. ಮುಂದೆಯೂ ನಿಮ್ಮಗಳ ಜೊತೆಯಲ್ಲಿ ಇರುತ್ತೇವೆ. ಉತ್ತಮ ಶಿಕ್ಷಣ ಕಲಿಯುವುದರತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.

    ಹಳೆ ವಿದ್ಯಾರ್ಥಿಗಳ ಸಂಘದ ಖಜಾಂಚಿ ಮಹಮ್ಮದ್ ಗೌಸ್ಪೀರ್ ಮಾತನಾಡಿ, ಉತ್ತಮ ಕಲಾವಿದರಾಗಲು ಶ್ರಮ ಅತ್ಯಗತ್ಯ. ಕಾಲೇಜಿಗೆ ಸೇರುವುದು ಮುಖ್ಯವಲ್ಲ, ಸೇರಿದ ನಂತರ ತರಗತಿಗೆ ಗೈರಾಗದೆ ತಮ್ಮದೆ ಸೃಜನಶೀಲತೆಯ ಅನಾವರಣಗೊಳಿಸುವತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಆರ್.ರಂಗಸ್ವಾಮಿ, ಸತ್ಯನಾರಾಯಣ ಟಿ.ಎಸ್, ಡಾ.ಸುರೇಂದ್ರನಾಥ್ ಡಿ.ಅರ್, ಡಾ.ಸಂತೋಷಕುಮಾರ ನಾಗರಾಳ, ಡಾ.ಶ್ವೇತ ಡಿ.ಎಸ್ ಹಾಗೂ ವಿದ್ಯಾರ್ಥಿಗಳು ಇದ್ದರು. ಸ್ವಾಗತವನ್ನು ಧನುಷ್, ಪಲ್ಲವಿ ವಂದನಾರ್ಪಣೆ ಹಾಗೂ ವಿದ್ಯಾಭಾಯಿ ಬಿ.ಎಚ್ ನಿರೂಪಣೆ ಮಾಡಿದರು.  ಕುಮಾರಿ ಶ್ರೀವಿದ್ಯಾ ಟಿ.ಎಸ್.‌ ಪ್ರಾರ್ಥನ ಗೀತೆ ಹಾಡಿದರು. ಶ್ರೀಮತಿ ವೆಂಕಟಲಕ್ಷ್ಮೀ ಹಾಜರಿದ್ದರು.

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ತುಮಕೂರು: ಜಿಲ್ಲೆಯಲ್ಲಿ ಆರಂಭವಾಗಿರುವ ಜನಗಣತಿ (ಮನೆ ಗಣತಿ) ಕಾರ್ಯಕ್ಕೆ ಆರಂಭದಲ್ಲೇ ತಾಂತ್ರಿಕ ವಿಘ್ನ ಎದುರಾಗಿದೆ. ಗಣತಿಗಾಗಿ ಬಳಸಬೇಕಾದ ‘ಹೌಸ್ ಲಿಸ್ಟಿಂಗ್…

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.