nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025
    Facebook Twitter Instagram
    ಟ್ರೆಂಡಿಂಗ್
    • ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ
    • ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ
    • ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ
    • ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ
    • ಶಿರಾ | ಜಮೀನು ವಿಚಾರಕ್ಕೆ ಜಗಳ: ಒಬ್ಬನ ಕೊಲೆಯಲ್ಲಿ ಅಂತ್ಯ
    • ಉತ್ತರ ಕರ್ನಾಟಕಕ್ಕೆ ₹3,450 ಕೋಟಿ ಬಂಪರ್ ಅನುದಾನ: ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು
    • ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ
    ತುಮಕೂರು November 23, 2023

    ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ: ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಅಭಿಮತ

    By adminNovember 23, 2023No Comments2 Mins Read

    ತುಮಕೂರು: ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣವನ್ನು ಕಲಿಯುತ್ತಿದ್ದು, ವಿಶೇಷವಾಗಿ ಚಿತ್ರಕಲಾ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

    ನಗರದ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಮಂಗಳವಾರ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರಿಗೆ ಸ್ವಾಗತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ಗುರು-ಶಿಷ್ಯರ ಸಂಬಂಧ ತಂದೆ ಮಕ್ಕಳಂತೆ ಹಾಗೆಯೇ ಇಲ್ಲಿಯ ವಿದ್ಯಾರ್ಥಿಗಳು ಸಹೋದರರಂತೆ ಪ್ರೀತಿ ವಾತ್ಸಲ್ಯದ ವಾತಾವರಣವನ್ನು ಕಾಪಾಡಿಟ್ಟುಕೊಂಡು ಗುರುಗಳ ಮಾರ್ಗದರ್ಶನ ಪಡೆಯುವ ಮೂಲಕ ಉತ್ತಮ ಶಿಕ್ಷಣದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ನಮ್ಮ ಕಾಲೇಜಿಗೆ ಹಳೆ ವಿದ್ಯಾರ್ಥಿಗಳ ಸಂಘ ಸದಾ ಬೆಂಬಲವಾಗಿ ನಿಂತಿದೆ. ಆ ಸಂಘದ ಪ್ರತಿಯೊಬ್ಬ ಕಾರ್ಯಕರ್ತನೂ ಅವರ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವುದು ಖುಷಿಯ ಸಂಗತಿ. ಇಂದಿನ ವಿದ್ಯಾರ್ಥಿಗಳು ಕಾಲೇಜಿನ ಉಪಾನ್ಯಾಸಕರು ಹಾಗೂ ಹಳೆಯ ವಿದ್ಯಾರ್ಥಿಗಳ ಮಾರ್ಗದರ್ಶನ ಪಡೆದು ಸಮಾಜದಲ್ಲಿ ಒಬ್ಬ ಉತ್ತಮ ಚಿತ್ರಕಲಾವಿದರಾಗಬೇಕು ಎಂದರು.

    ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಕಲಾ ಶಿಕ್ಷಕ ಎಂ.ಎನ್.ಸುಬ್ರಮಣ್ಯ ಅವರು ಮಾತನಾಡಿ, ಇಲ್ಲಿ ಹಲವು ವಿದ್ಯಾರ್ಥಿಗಳು ಚಿತ್ರಕಲಾ ಶಿಕ್ಷಣಕ್ಕೆ ಪ್ರವೇಶ ಪಡೆದು ಅಷ್ಟೇ ವೇಗದಲ್ಲಿ ತರಗತಿಯಿಂದ ದೂರ ಉಳಿಯುವ ಪ್ರಸಂಗಗಳು ಹೆಚ್ಚು ನಡೆಯುತ್ತಿವೆ. ಯಾವುದೇ ಕ್ಷೇತ್ರವಾಗಿದ್ದರೂ ಆಸಕ್ತಿ ಬಹಳ ಮುಖ್ಯವಾಗಿರುತ್ತದೆ. ಎಲ್ಲಾ ಕ್ಷೇತ್ರಗಳು ತಮ್ಮದೇ ವ್ಯಾಪ್ತಿಯಲ್ಲಿ ಸಾಧನೆ ಗೈಯುತ್ತಿರುವುದನ್ನು ನೋಡುತ್ತಿದ್ದೇವೆ. ಚಿತ್ರಕಲಾ ಕ್ಷೇತ್ರವು ಇತರೆ ಕ್ಷೇತ್ರಗಳಿಗಿಂತ ತುಸು ಭಿನ್ನವಾಗಿದ್ದು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಜನಮನ್ನಣೆ ಗಳಿಸಿದೆ ಎಂದು ಹೇಳಿದರು.

    ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಿ.ಎಲ್.ನಟರಾಜು ಮಾತನಾಡಿ, ನಾವು ಇದೇ ಕಾಲೇಜಿನಲ್ಲಿ ಕಲಿತಿದ್ದೇವೆ. ಕಾಲೇಜಿನ ಹಾಗೂ–ಹೋಗುಗಳಿಗೆ ಜೊತೆಯಾಗಿದ್ದೇವೆ. ಮುಂದೆಯೂ ನಿಮ್ಮಗಳ ಜೊತೆಯಲ್ಲಿ ಇರುತ್ತೇವೆ. ಉತ್ತಮ ಶಿಕ್ಷಣ ಕಲಿಯುವುದರತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದರು.

    ಹಳೆ ವಿದ್ಯಾರ್ಥಿಗಳ ಸಂಘದ ಖಜಾಂಚಿ ಮಹಮ್ಮದ್ ಗೌಸ್ಪೀರ್ ಮಾತನಾಡಿ, ಉತ್ತಮ ಕಲಾವಿದರಾಗಲು ಶ್ರಮ ಅತ್ಯಗತ್ಯ. ಕಾಲೇಜಿಗೆ ಸೇರುವುದು ಮುಖ್ಯವಲ್ಲ, ಸೇರಿದ ನಂತರ ತರಗತಿಗೆ ಗೈರಾಗದೆ ತಮ್ಮದೆ ಸೃಜನಶೀಲತೆಯ ಅನಾವರಣಗೊಳಿಸುವತ್ತ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.

    ಈ ಸಂದರ್ಭದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾದ ಆರ್.ರಂಗಸ್ವಾಮಿ, ಸತ್ಯನಾರಾಯಣ ಟಿ.ಎಸ್, ಡಾ.ಸುರೇಂದ್ರನಾಥ್ ಡಿ.ಅರ್, ಡಾ.ಸಂತೋಷಕುಮಾರ ನಾಗರಾಳ, ಡಾ.ಶ್ವೇತ ಡಿ.ಎಸ್ ಹಾಗೂ ವಿದ್ಯಾರ್ಥಿಗಳು ಇದ್ದರು. ಸ್ವಾಗತವನ್ನು ಧನುಷ್, ಪಲ್ಲವಿ ವಂದನಾರ್ಪಣೆ ಹಾಗೂ ವಿದ್ಯಾಭಾಯಿ ಬಿ.ಎಚ್ ನಿರೂಪಣೆ ಮಾಡಿದರು.  ಕುಮಾರಿ ಶ್ರೀವಿದ್ಯಾ ಟಿ.ಎಸ್.‌ ಪ್ರಾರ್ಥನ ಗೀತೆ ಹಾಡಿದರು. ಶ್ರೀಮತಿ ವೆಂಕಟಲಕ್ಷ್ಮೀ ಹಾಜರಿದ್ದರು.

    admin
    • Website

    Related Posts

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆಯ ಸಮಸ್ಯೆಯಿದ್ದು ಅಧಿಕಾರಿಗಳು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿದರು.…

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.