ತೂಕ ಮತ್ತು ಸಕ್ಕರೆಯನ್ನು ನಿಯಂತ್ರಣದಲ್ಲಿಡುವ ಕಪ್ಪು ಎಳ್ಳಿನ ಔಷಧೀಯ ಗುಣ ಬಲ್ಲೀರಾ..?
ಕಪ್ಪು ಎಳ್ಳನ್ನು ವಿವಿಧ ಭಕ್ಷ್ಯಗಳಲ್ಲಿ ಮಸಾಲೆಯಾಗಿ ಬಳಸಲಾಗುತ್ತದೆ. ಅವುಗಳ ರುಚಿಯೂ ವಿಭಿನ್ನವಾಗಿರುತ್ತದೆ. ಇದು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಹಲವಾರು ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಇದನ್ನು ಪ್ರಾಚೀನ ಕಾಲದಿಂದಲೂ ಬಳಸಲಾಗುತ್ತದೆ. ಈ ಬೀಜಗಳು ಕ್ಯಾನ್ಸರ್, ತೂಕ ಹೆಚ್ಚಾಗುವುದು, ಮಧುಮೇಹ, ಬೊಜ್ಜು, ಹೃದ್ರೋಗ ಮತ್ತು ಸ್ಕೂಲಕಾಯತೆಯಂತಹ ಅನೇಕ ದೀರ್ಘಕಾಲದ ಪರಿಸ್ಥಿತಿಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ರಕ್ತದಲ್ಲಿನ ಹಿಮೋಗ್ಲೋಬಿನ್ ಪ್ರಮಾಣ ಹೆಚ್ಚಿಲಸು ಖರ್ಜೂರ ಸೇವಿಸಿ
ರಕ್ತಹೀನತೆಯ ಸಮಸ್ಯೆ ಬಹುತೇಕ ಮಹಿಳೆಯರಲ್ಲಿ ಕಂಡುಬರುತ್ತದೆ. ರಕ್ತಹೀನತೆ ಎಂದರೆ ದೇಹದಲ್ಲಿ ರಕ್ತದ ಕೊರತೆ ಇರುವುದು. ಖರ್ಜೂರವು ದೇಹದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸುವ ಮೂಲಕ ರಕ್ತಹೀನತೆಯ ಸಮಸ್ಯೆ ನಿವಾರಿಸುತ್ತದೆ. ಖರ್ಜೂರದಲ್ಲಿ ಕಬ್ಬಿಣಾಂಶವು ಕಂಡುಬರುತ್ತದೆ. ಇದು ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಿಸುತ್ತದೆ. ದೇಹಕ್ಕೆ ರಕ್ತವನ್ನು ಪೂರೈಸುತ್ತದೆ. ಖಾಲಿ ಹೊಟ್ಟೆಯಲ್ಲಿ ಖರ್ಜೂರವನ್ನು ತಿನ್ನುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ.