nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕ್ಯಾಬಿನೆಟ್ ನಿರ್ಧಾರದ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಿ.ಟಿ. ರವಿ ಮನವಿ
    ರಾಜ್ಯ ಸುದ್ದಿ November 24, 2023

    ಕ್ಯಾಬಿನೆಟ್ ನಿರ್ಧಾರದ ವಿಚಾರದಲ್ಲಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಸಿ.ಟಿ. ರವಿ ಮನವಿ

    By adminNovember 24, 2023No Comments2 Mins Read
    c t ravi

    ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸಚಿವಸಂಪುಟ ಹಿಂದಕ್ಕೆ ಪಡೆದಿದೆ. ಇದು ಸಂವಿಧಾನ ವಿರೋಧಿ ಕ್ರಮ. ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ. ರವಿ ಅವರು ಮನವಿ ಮಾಡಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿ ಬ್ಲ್ಯಾಕ್‍ಮೇಲ್ ಪಾಲಿಟಿಕ್ಸ್ ನಡೆದಿದೆ. ಅದರ ಅಂಗವಾಗಿ ಇಡೀ ಸಂಪುಟ, ಜನ ಏನೆಂದುಕೊಳ್ಳುವರೋ ಎಂಬುದನ್ನು ಯೋಚಿಸದೆ ಕೆಟ್ಟ ಪರಂಪರೆಗೆ ನಾಂದಿ ಹಾಡಿದೆ ಎಂದು ಆರೋಪಿಸಿದರು.

    ಇಲ್ಲಿ ಬಿಜೆಪಿ, ಕಾಂಗ್ರೆಸ್ ಪ್ರಶ್ನೆ ಬರುವುದಿಲ್ಲ. ತನಿಖೆ ರದ್ದು ಎಂದರೆ ನ್ಯಾಯಾಂಗ ವ್ಯವಸ್ಥೆ ತಿರಸ್ಕರಿಸಿದಂತೆ ಎಂದ ಅವರು, ಇದು ಆಲಿಬಾಬಾ ಔರ್ ಚಾಲೀಸ್ ಚೋರ್ ಎಂಬಂತಿದೆ. ಒಬ್ಬ ಭ್ರಷ್ಟ ಆರೋಪಿಯ ಸಮರ್ಥನೆಗೆ ಇಡೀ ಕ್ಯಾಬಿನೆಟ್ ನಿಂತದ್ದು ಕರ್ನಾಟಕದ ಘನತೆಗೆ ಕಪ್ಪು ಚುಕ್ಕಿ ಇಟ್ಟಂತೆ. ಇದು ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಟ್ಟ ಜನರು ಮಾಡುವ ಕೆಲಸ ಅಲ್ಲ ಎಂದು ವಿಶ್ಲೇಷಿಸಿದರು.

    ಮುಖ್ಯಮಂತ್ರಿ, ಚೀಫ್ ಸೆಕ್ರೆಟರಿ ಯಾರ ಮನವಿ ಮೇರೆಗೆ ಈ ವಿಷಯ ಕೈಗೆತ್ತಿಕೊಂಡಿದ್ದಾರೆ? ಇಲ್ಲಿ ಸಂವಿಧಾನ ಇದೆ. ರಾಕ್ಷಸ ನ್ಯಾಯ ಇಲ್ಲ ಎಂದು ಮನವರಿಕೆ ಮಾಡಿಕೊಳ್ಳಬೇಕಿತ್ತು. ನಮ್ಮ ಮುಖಂಡರ ಮೇಲೆ ಆರೋಪ ಬಂದಾಗ ಅವರು ನ್ಯಾಯಾಲಯದ ಮೂಲಕ ನ್ಯಾಯ ಪಡೆದರು. ಕೇಸು ಹಿಂಪಡೆಯುವ ಭಂಡತನ ಮಾಡಿಲ್ಲ. ಇದು ಆರೋಪಗಳನ್ನು ಸಾಕ್ಷೀಕರಿಸಿದಂತೆ. ನ್ಯಾಯಾಲಯದ ಮೇಲೆ ವಿಶ್ವಾಸ ಇಲ್ಲ ಎಂದು ದೃಢಪಡಿಸಿದ್ದೀರಿ. ಸರಕಾರವು ಸಂಪುಟವನ್ನು ದುರುಪಯೋಗಪಡಿಸಿದೆ ಎಂದು ಟೀಕಿಸಿದರು.

    ಇವತ್ತಿನ ಡಿಸಿಎಂ 2017ರಲ್ಲಿ ರಾಜ್ಯದಲ್ಲಿ ಸಚಿವರಾಗಿದ್ದರು. ಪ್ರಾಮಾಣಿಕರ ಮನೆಯಲ್ಲಿ ಕೋಟಿ ಕೋಟಿ ಹಣ ಸಿಗುತ್ತದೆಯೇ? ಆದರೆ, ಅಕ್ರಮ ಸಂಪತ್ತು ಪತ್ತೆಯಾಯಿತು. 2019ರಲ್ಲಿ ಯಡಿಯೂರಪ್ಪ ಅವರು ಇದನ್ನು ಸಿಬಿಐ ತನಿಖೆಗೆ ವಹಿಸಿದ್ದರು. ಆದಾಯದ ಮೂಲ ಇಲ್ಲದೇ 200 ಕೋಟಿಗೂ ಹೆಚ್ಚು ಸಂಪತ್ತು ಪತ್ತೆಯಾಗಿದೆ ಎಂದು ಇಡಿ ತಿಳಿಸಿತ್ತು ಎಂದು ವಿವರಿಸಿದರು.
    ‘ಆಲೂ ಡಾಲ್‍ನ, ದೂಸ್ರೆ ತರಫ್‍ಸೆ ಸೋನಾ..’ ಎಂದು ರಾಹುಲ್ ಗಾಂಧಿ ಹೇಳಿದ್ದರು. ಆ ಮಾಹಿತಿಯನ್ನು ಸಿಬಿಐ ಕೇಳಿದರೆ ಹೇಳಬಹುದೆಂದು ಯೋಚಿಸಿ ಅದನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಪ್ರಾಥಮಿಕ ವರದಿಯನ್ನೂ ಕೊಟ್ಟಿದೆ. ಪ್ರಕರಣ ರದ್ದು ಮಾಡುವ ಅವರ ಕೇಳಿಕೆಯನ್ನು ಹೈಕೋರ್ಟ್ ತಿರಸ್ಕರಿಸಿದೆ. 3 ತಿಂಗಳಲ್ಲಿ ಸಿಬಿಐ ಅಂತಿಮ ವರದಿ ಕೊಡಬೇಕಿತ್ತು. ಜನವರಿಯಲ್ಲಿ ಅಂತಿಮ ವರದಿ ನಿರೀಕ್ಷೆ ಇರುವಾಗ ಈ ಸಂವಿಧಾನ ವಿರೋಧಿ ನಿರ್ಧಾರ ಮಾಡಿರುವುದಾಗಿ ಆಕ್ಷೇಪಿಸಿದರು.

    ಹಿಂದಿನ ಕಾಂಗ್ರೆಸ್ ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಚುನಾವಣೆ ಅಕ್ರಮ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದಾಗ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಅಂಥ ಕೆಟ್ಟ ಪರಂಪರೆಗೆ ರಾಜ್ಯದ ಸಚಿವಸಂಪುಟ ಮುಂದಾಗಿದೆ. ಎಲ್ಲ ಭ್ರಷ್ಟರಿಗೂ ಮಾದರಿ ಆಗುವಂಥ ನಿರ್ಧಾರ ಇದು. ಲಲ್ಲೂ ಪ್ರಸಾದ್ ಮೀರಿಸಿದ ಕೆಲಸ ಇದೆಂದು ಟೀಕಿಸಿದರು.

    ಇದು ತಪ್ಪು ನಿರ್ಧಾರ. ತಲೆತಗ್ಗಿಸುವ ನಿರ್ಣಯ. ಕಾನೂನು ಪದವೀಧರನಲ್ಲದ ನಾನು ಕೂಡ ಈ ಶಿಫಾರಸನ್ನು ಸಂಪುಟದಲ್ಲಿಡುತ್ತಿರಲಿಲ್ಲ. ನಿಮಗೆ ನಾಚಿಕೆ ಆಗುವುದಿಲ್ಲವೇ? ಇದು ಭಂಡತನದ ಪರಮಾವಧಿ ಎಂದು ಆಕ್ಷೇಪಿಸಿದರು.

    ಸಂವಿಧಾನ ಬಾಹಿರವಾಗಿ ನಡೆದಾಗ ರಾಜ್ಯಪಾಲರು ಮೂಕಪ್ರೇಕ್ಷಕರಾಗಿ ಕುಳಿತಿರಬಾರದು. ನಾವು ಯಾವ ಪದ್ಧತಿಯನ್ನು ರಾಜ್ಯದಲ್ಲಿ ಹುಟ್ಟು ಹಾಕುತ್ತಿದ್ದೇವೆ? ಸಮರ್ಥಿಸಲಾಗದ, ಉತ್ತರಿಸಲಾಗದ ಕ್ರಮ ಇದು ಎಂದು ತಿಳಿಸಿದರು. ಸಿಎಂ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕ್ರಮ ಇದು ಎಂದು ಟೀಕಿಸಿದರು.

    ಸಿಬಿಐ ತನಿಖೆ ವಿಚಾರದಲ್ಲಿ ಭಯ ಯಾಕೆ? ಸಿಬಿಐ ಸಾಕ್ಷ್ಯಾಧಾರ ಇಲ್ಲದ ವರದಿ ಕೊಟ್ಟರೆ ಅದು ನ್ಯಾಯಾಲಯದ ಎದುರು ಸಾಬೀತಾಗುತ್ತದೆಯೇ? ಬಡವರಿಗೊಂದು ನ್ಯಾಯ, ಬಲಾಢ್ಯರಿಗೊಂದು ನ್ಯಾಯವೇ? ಎಂದು ಪ್ರಶ್ನಿಸಿದರು. ಕಾಯಲು ನಿಮಗೇನು ಸಮಸ್ಯೆ ಎಂದರು. ಆ ಭಯ ಇಡೀ ಕ್ಯಾಬಿನೆಟ್ ಅನ್ನು ಕಾಡುತ್ತಿದೆಯೇ? ಎಂದರು.

    ವಿಧಾನಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರು, ಚಿದಾನಂದ ಗೌಡ, ಅ. ದೇವೇಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.