ಇಂದು, ನಾಳೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ ಕಂಬಳ ನಡೆಯಲಿದೆ. ‘ಬೆಂಗಳೂರು ಕಂಬಳ ನಮ್ಮ ಕಂಬಳ’ ಎಂಬ ಹೆಸರಿನಲ್ಲಿ ಕಂಬಳ ನಡೆಯುತ್ತಿದ್ದು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇಂದು ಬೆಳಗ್ಗೆ 10.30ಕ್ಕೆ ಐತಿಹಾಸಿಕ ಕಂಬಳದ ಜೋಡು ಕರೆ ಉದ್ಘಾಟನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಸಂಜೆ 6 ಗಂಟೆಗೆ ಕಂಬಳ ಉದ್ಘಾಟನೆ ಮಾಡಲಿದ್ದಾರೆ.
ಅರಮನೆ ಮೈದಾನದ ಗೇಟ್ ನಂ.1, 2, 3,4ರಲ್ಲಿ ಸಾರ್ವಜನಿಕರಿಗೆ ಪ್ರವೇಶ ಇರಲಿದೆ. ಕಂಬಳ ವೀಕ್ಷಿಸಲು ಬರುವ ವಿವಿಐಪಿಗಳಿಗೆ ಪ್ರತ್ಯೇಕವಾಗಿ ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ.


