ತುರುವೇಕೆರೆ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗುಡ್ಡೇನಹಳ್ಳಿ ಹಾಗೂ ಹಾಲಪ್ಪ ಪ್ರತಿಷ್ಠಾನ ಇವರ ವತಿಯಿಂದ ಯುವ ಸಬಲೀಕರಣದ ಅಂಗವಾಗಿ ಕೌಶಲ್ಯ ಪಥ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ವೇದಿಕೆಯ ಮೇಲಿದ್ದ ಗಣ್ಯರು ಗಿಡಕ್ಕೆ ನೀರರೆಯುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳ ಕುರಿತಂತೆ ಮಾಹಿತಿಯನ್ನು ನೀಡಿ ವಿದೇಶಗಳಲ್ಲಿ ಉನ್ನತ ವ್ಯಾಸಂಗ ಕೌಶಲ್ಯಾಧಾರಿತ ತರಬೇತಿಗಳು ಸ್ವಯಂ ಉದ್ಯೋಗ ಮಾರ್ಗದರ್ಶನಂತಹ ಲಭ್ಯವಿರುವ ಯೋಜನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರುಳಿಧರ್ ಹಾಲಪ್ಪ ನೀಡಿದರು.
ನಿಮ್ಮ ಕಾಲೇಜಿಗೆ ಉನ್ನತ ಶಿಕ್ಷಣ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡುವಂತಾಗಬೇಕು, ಅವರನ್ನು ಕರೆಸಿ ಕಾಲೇಜಿನ ಮೂಲಭೂತ ಸೌಕರ್ಯ ಒಳಗೊಂಡಂತೆ ಬೇಕಾಗಿರುವ ಕಟ್ಟಡ ಸೌಕರ್ಯ ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಇದರಲ್ಲಿ ಸುಸಜ್ಜಿತ ಗ್ರಂಥಾಲಯ ಕಂಪ್ಯೂಟರ್ ಲ್ಯಾಬ್ ಇತರೆ ಸೌಲಭ್ಯಗಳು ಕಾಲೇಜಿನಲ್ಲಿ ಸಿಗುವಂತಾಗಬೇಕು. ಬೇರೆ ತಾಲೂಕಿಗಿಂತ ಇಲ್ಲಿಉತ್ತಮ ರೀತಿಯ ವ್ಯವಸ್ಥೆ ಮಾಡಲು ನೀವುಗಳು ಮನವಿ ಪತ್ರವನ್ನು ಬರೆಯಬೇಕು. ಖಾಸಗಿ ಕಾಲೇಜುಗಳಿಗಿಂತ ಯಾವುದರಲ್ಲೂ ನಮ್ಮ ಸರ್ಕಾರಿ ಕಾಲೇಜು ಕಡಿಮೆ ಇರಬಾರದು ಎಂದರು.
ನಮ್ಮ ತಾಲೂಕಿನಲ್ಲಿ ಎಷ್ಟು ಜನ ಐಎಎಸ್ ಐಪಿಎಸ್ ಅಧಿಕಾರಿಗಳಿದ್ದಾರೆ, ಅವರುಗಳ ಸಂಖ್ಯೆ ದುಪ್ಪಟ್ಟಾಗಬೇಕು ಅದಕ್ಕೆ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತಾಗಬೇಕು ನಮ್ಮ ತಾಲೂಕಿನ ಐಎಎಸ್, ಐಪಿಎಸ್ ಮಾಡಿರುವ ಹಾಗೂ ಸರ್ಕಾರಿ ಹಿರಿಯ ಅಧಿಕಾರಿಗಳನ್ನು ನಮ್ಮ ಕಾಲೇಜಿಗೆ ಕರೆಸಿ ಅವರಿಂದ ಸೌಲಭ್ಯಗಳು ದೊರಕುವ ಹಾಗೆ ಹಾಗೂ ಅವರಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕು ನಾವುಗಳೆಲ್ಲ ಸರ್ಕಾರಿ ಕಾಲೇಜುಗಳಲ್ಲಿ ಕಲಿತಂತಹ ವಿದ್ಯಾರ್ಥಿಗಳು ಇಲ್ಲಿ ಕಲಿತು , ಉನ್ನತ ಹುದ್ದೆಯಲ್ಲಿರುವಂತ ಅಧಿಕಾರಿಗಳನ್ನು ಕರೆಸಿ ಅವರಿಂದ ಸಲಹೆ ಸೂಚನೆ ಪಡೆದು ಸಹಕಾರ ನೀಡಲು ಮನವಿ ಮಾಡಿ ಕಾಲೇಜನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.
ಇಲ್ಲಿಗೆ ಜಿಲ್ಲಾ ಮಟ್ಟದ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿಗಳು ಆಗಮಿಸಿದ್ದಾರೆ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಅಧಿಕಾರಿಗಳು ಕೂಡ ಆಗಮಿಸಿದ್ದಾರೆ. ಅವರಿಂದ ನಿಮಗೆ ಮಾಹಿತಿ ಮತ್ತು ಸಲಹೆ ಸೂಚನೆಗಳು ಸಿಗಲಿವೆ ನೀವುಗಳು ಶಿಕ್ಷಣದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಿ ಎಂದು ಹೇಳಿ ಕೆಲವು ವಿದ್ಯಾರ್ಥಿಗಳು ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಇರುವುದರಿಂದ ಕಾಲೇಜಿಗೆ ಬರಲು ಅನಾನುಕೂಲ ಆಗುತ್ತಿರುವುದರಿಂದ ಇದನ್ನು ಸರಿಪಡಿಸಿ ಎಂದು ವಿದ್ಯಾರ್ಥಿಗಳು ಅವಲತ್ತು ಕೊಂಡರು ಇದಕ್ಕೆ ಉತ್ತರಿಸಿದಅವರು ಸ್ಥಳದಲ್ಲೇ ಕೆಎಸ್ಆರ್ಟಿಸಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ತಿಪ್ಪೇಸ್ವಾಮಿ ,ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆಬಿ ಹನುಮಂತಯ್ಯ ,ಗುಡ್ದೆನಹಳ್ಳಿ ನಂಜುಂಡಪ್ಪ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ , ಪ್ರಾಂಶುಪಾಲರಾದ ಈಶ್ವರಪ್ಪ ಹಾಗೂ ಕಾಲೇಜಿನ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ: ಸುರೇಶ ಬಾಬು ಎಂ. ತುರುವೇಕೆರೆ


