ಮಧುಗಿರಿ: ತಾಲೂಕಿನ ಕಸಬಾ ಸಿದ್ದಾಪುರ ಗೇಟ್ ಬಳಿ ಇರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನದ ಹುಂಡಿ ಹಣವನ್ನು ತಡರಾತ್ರಿ ಕಳ್ಳರು ದೋಚಿ ಪರಾರಿಯಾಗಿರುವ ಘಟನೆಯು ಮಧುಗಿರಿ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ.
ಮಧ್ಯರಾತ್ರಿ 12:50 ಆಸು ಪಾಸು ಕಳ್ಳರು ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿ ದೇವಸ್ಥಾನದ ಹುಂಡಿಯಲ್ಲಿದ್ದ ಸಂಪೂರ್ಣ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದೇವಸ್ಥಾನದಲ್ಲಿ ಭವ್ಯ ಬೆಳೆಬಾಳುವ ಮೂರ್ತಿಗಳಿದ್ದು, ಕಳ್ಳರು ಕೇವಲ ಹುಂಡಿಯಲ್ಲಿದ್ದ ಹಣವನ್ನು ಮಾತ್ರ ದೋಚಿದ್ದಾರೆ. ಇಂದು ಸೇರಿ ಮೂರನೇ ಬಾರಿ ದೇವಸ್ಥಾನದಲ್ಲಿ ಕಳ್ಳತನ ಆಗಿರುವುದು, ಇದೇ ದಿನ ಗ್ರಾಮದ ನಾಲ್ಕು ಮನೆಗಳಲ್ಲಿ ಕಳ್ಳತನಕ್ಕೆ ಪ್ರಯತ್ನಿಸಿ ಕಳ್ಳರು ಮನೆಗಳ ಬಾಗಿಲು ಕಿಟಕಿಗಳನ್ನು ಹೊಡೆದಿರುವುದು ಕಂಡು ಬಂದಿದೆ ಈ ವಿಚಾರವಾಗಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಲು ಸಾಲಾಗಿ ಕಳ್ಳತನ ಆಗುತ್ತಿದ್ದು ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಪೊಲೀಸರು ಸೂಕ್ತ ಕ್ರಮ ವಹಿಸಿ ರಕ್ಷಣೆ ನೀಡಬೇಕೆಂದು ಗ್ರಾಮಸ್ಥರು ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಿದ್ದಾಪುರ ಗ್ರಾಮದ ವಾಸಿ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುವರ್ಣಮ್ಮ ಮಾತನಾಡಿ, ಮದುಗಿರಿ ಸಿರಾ ಹೆದ್ದಾರಿಯಲ್ಲಿರುವ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ ಪೋಲಿಸ್ ಇಲಾಖೆಯಿಂದ ದೇವಸ್ಥಾನಗಳಿಗೆ ಗಸ್ತಿನ ರೂಪದಲ್ಲಿ ಸೂಕ್ತ ಬಂದೋಬಸ್ತ್ ನೀಡಬೇಕು, ಈಗಾಗಲೇ ಇದು ಸೇರಿ ದೇವಸ್ಥಾನದಲ್ಲಿ ಮೂರನೇ ಬಾರಿ ಕಳ್ಳತನವಾಗಿದ್ದು ಪೊಲೀಸ್ ಇಲಾಖೆಯವರು ಸೂಕ್ತ ಕಾರ್ಯಾಚರಣೆ ನಡೆಸಿ ಕಳ್ಳರನ್ನು ಸೆರೆಹಿಡಿದು ದೇವಸ್ಥಾನಕ್ಕೆ ನ್ಯಾಯ ಒದಗಿಸಿ ಕೊಡಬೇಕು ಎಂದು ತಿಳಿಸಿದರು.


