nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026
    Facebook Twitter Instagram
    ಟ್ರೆಂಡಿಂಗ್
    • ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ
    • ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಲವು ವಿವಾದಗಳಿಗೆ ಕಾರಣವಾಗಿದ್ದ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ವರ್ಗಾವಣೆ
    ತುಮಕೂರು December 16, 2023

    ಹಲವು ವಿವಾದಗಳಿಗೆ ಕಾರಣವಾಗಿದ್ದ ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ವರ್ಗಾವಣೆ

    By adminDecember 16, 2023No Comments2 Mins Read
    k shrinivas
    • ನೂತನ ಜಿಲ್ಲಾಧಿಕಾರಿಗಳಾಗಿ  ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ

    ತುಮಕೂರು ಜಿಲ್ಲೆಯಲ್ಲಿ ಹಲವು ವಿವಾದಗಳಿಗೆ ಕಾರಣವಾಗಿದ್ದ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರನ್ನು ವರ್ಗಾವಣೆ ಮಾಡಲಾಗಿದ್ದು,  ಇದೀಗ ತುಮಕೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ  ಶುಭ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.


    Provided by
    Provided by

    ಕಳೆದ ಸುಮಾರು 6 ತಿಂಗಳ ಹಿಂದೆ ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದ, ಶ್ರೀನಿವಾಸ್ ಕೆ. ಇವರು,  ಈ ಹಿಂದೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಇನ್ನಿತರೆ ಭಾಗದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಬೆಂಗಳೂರು ನಗರದ ಜಿಲ್ಲಾಧಿಕಾರಿಯಾಗಿದ್ದ ಸಮಯದಲ್ಲಿ, ವಿಧಾನ ಸಭಾ ಚುನಾವಣೆಗೂ ಮುನ್ನ, ಮತದಾರರ ಮಾಹಿತಿ ಸಂಗ್ರಹಿಸಿದ ಸಂಸ್ಥೆಗೆ ನೆರವು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತು ಮಾಡಲಾಗಿತ್ತು.

    ತದ ನಂತರದಲ್ಲಿ, ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಮಧ್ಯೆ ಕಳೆದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ ಆಚರಿಸುವ ನೆಪದಲ್ಲಿ ನಗರದ ಹೊರವಲಯದ ಗೆದ್ದಲಹಳ್ಳಿ ರಸ್ತೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳೊಂದಿಗೆ  ಸಿನಿಮಾದ ಅಶ್ಲೀಲ ಹಾಡುಗಳಿಗೆ  ಡಾನ್ಸ್ ಮಾಡಲಾಗಿದೆ ಎಂಬ ವಿಷಯವು ಕೆಲವು ಪತ್ರಿಕೆ, ಮುದ್ರಣ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ರಾಜ್ಯದ ನೈಜ ಹೋರಾಟಗಾರರ ವೇದಿಕೆಯವರು ಮುಖ್ಯಮಂತ್ರಿಗಳು,  ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಕಂದಾಯ ಮಂತ್ರಿಗಳು, ಡಿಪಿಎಆರ್, ರಾಜ್ಯ  ಪೊಲೀಸ್ ಮಹಾನಿರ್ದೇಶಕರು  ಮತ್ತು ರಾಜ್ಯ  ಮಕ್ಕಳ  ರಕ್ಷಣಾ ಆಯೋಗದಲ್ಲಿ ದೂರು ನೀಡಿದ್ದರು. ಹಾಗೂ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೂಡ ದೂರು ನೀಡಲಾಗಿತ್ತು.

    ಅಲ್ಲದೇ,  ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಈ ಬಗ್ಗೆ  ಸುಮೋಟೋ ಕೇಸು( ಕೇಸ್ ನಂಬರ್: 103/2023) ದಾಖಲಿಸಿಕೊಳ್ಳುವುದರೊಂದಿಗೆ  ತನಿಖೆ ಮತ್ತು ವಿಚಾರಣೆ ನಡೆಸಲು ತ್ರಿಸದಸ್ಯತ್ವ ತನಿಖಾ ಸಮಿತಿಯನ್ನು ನೇಮಿಸಲಾಗಿತ್ತು. ಹಾಗೂ ದಿನಾಂಕ: 15-12-2023ರಂದು  ತುಮಕೂರು ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯಲ್ಲಿ ಸಾಮಾಜಿಕ ಹೋರಾಟಗಾರರಾದ ಹಂದ್ರಾಳ್ ನಾಗಭೂಷಣ್ ಅವರ ತಂಡವು ದೂರನ್ನು ಕೂಡ ದಾಖಲಿಸಲಾಗಿದೆ.

    ಈ ಎಲ್ಲ ವಿದ್ಯಮಾನಗಳ ಮೇರೆಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಇವರನ್ನು ಸರ್ಕಾರವು ವರ್ಗಾವಣೆ ಮಾಡಿ, ಆದೇಶ ಹೊರಡಿಸಲಾಗಿದೆ. ಪ್ರಸ್ತುತ ಈ ಹಿಂದೆ ತುಮಕೂರು ಜಿಲ್ಲೆಯ ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾಗಿದ್ದ ಶುಭಕಲ್ಯಾಣ್ ಐಎಎಸ್  ಇವರನ್ನು ತುಮಕೂರು  ಜಿಲ್ಲಾಧಿಕಾರಿಯಾಗಿ ಸರ್ಕಾರವು ನೇಮಿಸಿದ್ದು,  ನೂತನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ  ಯಾವ ರೀತಿ ಕೆಲಸ ಮಾಡುತ್ತಾರೆಂದು  ಜನರು ನಿರೀಕ್ಷೆಯಲ್ಲಿದ್ದಾರೆ.

    ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಆಗಿದ್ದ ಶುಭ ಕಲ್ಯಾಣ್:

    shubha kalyan ias

    ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್  2014ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಾರೆ. ಇಂಜಿನಿಯರಿಂಗ್ ಪದವಿಧರೆ ಆಗಿರುವ ಇವರು, ಈ ಹಿಂದೆ 2020ರ ಜನವರಿಯಿಂದ ಎರಡು ವರ್ಷಗಳ ಕಾಲ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಿಸಿದ್ದರು.

    ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಈ ಆಡಳಿತ ವಿಭಾಗದಲ್ಲಿ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಇವರು ಕೆಲಸ ಮಾಡುತ್ತಿದ್ದರು.

    ಇಂದು ಸಹಕಾರ ಸಚಿವ ರಾಜಣ್ಣ ಅವರು ನೂತನ ಜಿಲ್ಲಾಧಿಕಾರಿ ಶುಭ ಕಲ್ಯಾಣ್   ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿದರು.

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಕೆಂಚಮ್ಮನಹಳ್ಳಿ ಗ್ರಾಮದ ನವೀನ್ ಕೆ. ಅವರಿಗೆ ದಾವಣಗೆರೆ ವಿವಿಯಿಂದ ಪಿಎಚ್.ಡಿ ಪದವಿ ಪ್ರದಾನ

    June 12, 2026

    ಪಾವಗಡ: ತಾಲ್ಲೂಕಿನ ಕೆಂಚಮ್ಮನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿ ಸಾವಿತ್ರಮ್ಮ ಹಾಗೂ ಕರಿಯಣ್ಣ ಕೆ.ಟಿ. ಅವರ ಪುತ್ರ…

    ಮರಿದಾಸನಹಳ್ಳಿ ಗ್ರಾಮಕ್ಕೆ ಕೆಪಿಎಸ್ ಶಾಲೆ ಮಂಜೂರು: ಹೆಚ್.ವಿ.ವೆಂಕಟೇಶ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

    June 12, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.