ಶಾಲೆಗೆ ತೆರಳುತ್ತಿದ್ದ ವೇಳೆ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದ ಸೃಷ್ಠಿ(13) ಮೃತಪಟ್ಟ ವಿದ್ಯಾರ್ಥಿನಿ.
ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಸೃಷ್ಠಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಈ ನಡುವೆ ಶಾಲೆಗೆ ತೆರಳುತ್ತಿದ್ದ ವೇಳೆ ಸೃಷ್ಠಿ ದಿಢೀರ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಸೃಷ್ಠಿಯನ್ನ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಆದರೆ, ಆಸ್ಪತ್ರೆಗೆ ಕರೆದೊಯ್ಯುವಾಗ ವಿದ್ಯಾರ್ಥಿನಿ ಸೃಷ್ಠಿ ಸಾವನ್ನಪ್ಪಿದ್ದು, ಮೃತದೇಹ ಪರೀಕ್ಷೆ ನಡೆಸಿದ ವೈದ್ಯರು, ಆಕೆ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಬಾಳಿ ಬದುಕ ಬೇಕಾದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


