nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025
    Facebook Twitter Instagram
    ಟ್ರೆಂಡಿಂಗ್
    • ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್
    • ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ
    • ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ
    • ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ
    • ನವೆಂಬರ್ 7ರಂದು ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ
    • ಡಿಸೆಂಬರ್ 2ರವರೆಗೆ ಕಾಲುಬಾಯಿ ಜ್ವರದ ವಿರುದ್ಧ ಸಾಮೂಹಿಕ ಲಸಿಕಾ ಅಭಿಯಾನ
    • ನವೆಂಬರ್ 16ರಂದು ನವೋದಯ ಶಾಲೆ ಮಾಕ್ ಪರೀಕ್ಷೆ
    • ಖ್ಯಾತ ಖಳನಟ ಹರೀಶ್ ರಾಯ್  ನಿಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಶಿ ಕೆ. ಅವರಿಂದ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನ: ಪ್ರತಿಭೆಗೆ ಬೆಲೆಯನ್ನು ನೀಡೋಣ | ಶಾಸಕ ಜ್ಯೋತಿಗಣೇಶ್
    ಸ್ಪೆಷಲ್ ನ್ಯೂಸ್ November 28, 2021

    ಶಶಿ ಕೆ. ಅವರಿಂದ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನ: ಪ್ರತಿಭೆಗೆ ಬೆಲೆಯನ್ನು ನೀಡೋಣ | ಶಾಸಕ ಜ್ಯೋತಿಗಣೇಶ್

    By adminNovember 28, 2021No Comments2 Mins Read
    shashi k

    ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ವತಿಯಿಂದ ಶಶಿ ಕೆ. ತುಮಕೂರು ಇವರಿಂದ ಏಕ ವ್ಯಕ್ತಿ ಚಿತ್ರಕಲಾ ಪ್ರದರ್ಶನ ತುಮಕೂರಿನ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಡೆಯಿತು.

     


    Provided by
    Provided by

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ತುಮಕೂರು ನಗರ ಶಾಸಕ ಜ್ಯೋತಿಗಣೇಶ್,  ಶಶಿ ಕೆ. ಇವರ ಚಿತ್ರಕಲೆಯು ತುಂಬಾ ಅತ್ಯುತ್ತಮವಾಗಿದೆ. ಈ ಪ್ರತಿಭೆಯು ತನ್ನ ಕಲೆಯನ್ನು ಇನ್ನೂ ಹೆಚ್ಚಾಗಿ ಮತ್ತು ಉತ್ತಮವಾಗಿ ಬೆಳೆಸಿಕೊಳ್ಳಲಿ. ಹಣಕ್ಕೆ ಬೆಲೆ ಇಲ್ಲ. ಪ್ರತಿಭೆಗೆ ಬೆಲೆಯನ್ನು ನೀಡೋಣ. ಭಾವನೆಗಳನ್ನು ಗೆರೆಗಳಾಗಿ ಬರೆದು, ಬಣ್ಣಗಳನ್ನು ಚೆಲ್ಲಿ ಭಾವನೆಗಳನ್ನು ವ್ಯಕ್ತಪಡಿಸುವುದಾದರೆ, ಗುಡಿಸಿಲಲ್ಲಿ ಅರಳಿದ ಹೂವು ಎಂದು ಹೇಳಿ ಕಲಾವಿದರನ್ನು ಪ್ರೋತ್ಸಾಹಿಸಿದರು.

     

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಶ್ರೀನಿವಾಸ್ ಮಾತನಾಡಿ, ಶಶಿ ಕೆ. ಅವರು ಬಿಡಿಸಿರುವ ಚಿತ್ರಗಳಲ್ಲಿ ಅವರ ಬಡತನ ಅವರ ಭಾವನೆಗಳು ವ್ಯಕ್ತವಾಗುತ್ತಿದೆ. ಜಾನಪದ ಶೈಲಿಯನ್ನು ಕೂಡ ನೋಡಬಹುದಾಗಿದೆ.  ಚಿತ್ರಕಲಾವಿದರು ನಿರಾಶರಾಗಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ನಿಮಗೆ ಒಳ್ಳೆಯದಾಗಲಿ ಎಂದು ಅವರು ಆಶೀರ್ವಾದಿಸಿದರು.

     

    ಚಿತ್ರಕಲಾ ಶಿಕ್ಷಕ ಡಿ.ಭೂತಯ್ಯನವರು ಮಾತನಾಡಿ,  ಗುಡಿಸಲಿನಲ್ಲಿದ್ದರೂ, ಇನ್ನೂ ದೊಡ್ಡದಾಗಿ ಈ ಪ್ರತಿಭೆಯು ಬೆಳೆಯಲಿ. ನನ್ನ ವಿದ್ಯಾರ್ಥಿಗಳಾದ ಶಶಿ ಕೆ., ನಾಗೇಶ್ ವಿ., ಜೈಲಕಾ ಮತ್ತು ಸತ್ಯ ಇಂತಹ ಪ್ರತಿಭೆಗಳಿಗೆ ಇನ್ನೂ ಹೆಚ್ಚು ಅವಕಾಶಗಳನ್ನು ಮಾಡಿಕೊಡಬೇಕು. ಇನ್ನೂ ಹೆಚ್ಚು ಕಲೆಗಳನ್ನು ಬೆಳೆಸೋಣ ಎಂದು ಪ್ರೋತ್ಸಾಹಿಸಿದರು.

     

    ನಿವೃತ್ತ ಶಿಕ್ಷಕ ಎಂ.ಎನ್.ಸುಬ್ರಹ್ಮಣ್ಯ ಅವರು ಮಾತನಾಡಿ, ಕಲಾವಿದರು ಮೊದಲು ತಮ್ಮ  ಅಭಿಪ್ರಾಯಗಳನ್ನು ಗಮನಿಸಬೇಕು ಆಗ ಮಾತ್ರ ಬೇರೆಯವರು ಗೌರವಿಸುತ್ತಾರೆ ಎಂದು ಉತ್ತೇಜಿಸಿದರು.

     

    ಸರ್ಕಾರಿ ಚಿತ್ರಕಲಾ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಭಾರಕೇರ ಮಾತನಾಡಿ,  ಪ್ರತಿಭೆಯು ಯಾರ ಸ್ವತ್ತಲ್ಲ. ಪ್ರತಿಭೆ ಗುಡಿಸಲಿನಲ್ಲಿ ಹುಟ್ಟುತ್ತದೆ. ಅರಮನೆಯಲ್ಲಿ ಸಾಯುತ್ತದೆ ಎಂದು ಉದಾಹರಣೆಗಳೊಂದಿಗೆ ವಿವರಿಸಿದರು. ಹೆಣ್ಣು ಪ್ರಕೃತಿ ಮಾತೆ ನಮಗೆ ಮಾರ್ಗದರ್ಶಕ. ಇವರಿಗೆ ಪ್ರಾಣಿ ಪಕ್ಷಿಗಳ ಬಗ್ಗೆ ಎಷ್ಟೋ ಪ್ರೀತಿಯಿಂದ ಈ ಕಲೆಯಲ್ಲಿ ನೋಡಬಹುದು ಎಂದು ತಿಳಿಸಿದರು.

     

    ರವೀಂದ್ರ ಕಲಾನಿಕೇತನದ ಉಪನ್ಯಾಸಕ ಪ್ರಭು ಅರಸೂರು ಮಾತನಾಡಿ,  ಅವಳು ಬದುಕನ್ನು ನೋಡಬಹುದು, ಸಂಗೀತ ಹಾಡಿನ ಮೂಲಕ ವ್ಯಕ್ತಪಡಿಸುತ್ತಾರೆ. ಕಲಾವಿದರು ಗೆರೆಗಳ ಮುಖಾಂತರ ವ್ಯಕ್ತಪಡಿಸುತ್ತಾರೆ. ನಮ್ಮ ಬದುಕು ನಿಮ್ಮ ಕೈಯಲ್ಲಿದೆ ಪ್ರಯತ್ನವಿಲ್ಲದೆ, ಫಲವಿಲ್ಲವೆಂದು ಇನ್ನೂ ಹೆಚ್ಚಾಗಿ ಕಲಾವಿದೆಯಾಗಿ ಬೆಳೆಯಲು ಪ್ರೋತ್ಸಾಹಿಸಿದರು.

     

    ಶಶಿ ಕೆ. ಅವರು ಮಾತನಾಡಿ, ಪ್ರಕೃತಿ ಮತ್ತು ನಾನು ಎಂಬ ವಿಷಯದಲ್ಲಿ ಇಷ್ಟು ಚಿತ್ರಕಲೆ ಮಾಡಿದ್ದೇನೆ ಮತ್ತು ಪ್ರಕೃತಿಯಲ್ಲಿ ಹೆಣ್ಣಿಗೆ ಯಾವ ಸ್ಥಾನವಿದೆ ಎಂಬುದರ ಬಗ್ಗೆ ಚಿತ್ರಕಲೆ ಮಾಡಿದ್ದೇನೆ. ಹುಳವು ಹೇಗೆ ಹಂತ ಹಂತವಾಗಿ ಬೆಳೆದು ಬಣ್ಣದ ಚಿಟ್ಟೆಯಾಗಿ ಪ್ರಕೃತಿಯಿಂದ ಹೊರ ಬರುತ್ತದೆಯೋ ಹಾಗೆ ನನ್ನ ಭಾವನೆಗಳೂ ಕೂಡ ಬಣ್ಣಗಳ ಮುಖಾಂತರ ಕಲೆಯಾಗಿ ಹೊರ ಬಂದಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

     

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ: ಲಾಡು ಪ್ರಸಾದ ಟೆಂಡರ್

    November 6, 2025

    ಸರಗೂರು:  ಬೇಲದಕುಪ್ಪೆ ಶ್ರೀ ಮಹದೇಶ್ವರ ಜಾತ್ರಾ ಹಾಲಹರವಿ ಕೊಂಡೋತ್ಸವ  ನ.16 ರಿಂದ 18 ವರೆಗೆ ನಡೆಯಲಿದ್ದು, ಜಾತ್ರಾ  ಲಾಡು ಪ್ರಸಾದ…

    ಜೈ ಭೀಮ್ ದಮನಿತರ ಸೇವಾ ಸಮಿತಿ: ನೂತನ ಪದಾಧಿಕಾರಿಗಳ ಆಯ್ಕೆ

    November 6, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ನ.20: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಲಕ್ಷದೀಪೋತ್ಸವ

    November 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.