ಜಾರ್ಖಂಡ್: ಜಾರ್ಖಂಡ್ ನ ಜಮ್ ಶೆಡ್ ಪುರ ನಗರದಲ್ಲಿ ಸೋಮವಾರ ಬೆಳಗ್ಗೆ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಜಾನೆ 5 ಗಂಟೆ ಸುಮಾರಿಗೆ ಬಿಸ್ತುಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕ್ಯೂಟ್ ಹೌಸ್ ಸ್ಕ್ವೇರ್ ಬಳಿ ಅಪಘಾತ ಸಂಭವಿಸಿದೆ. ಐದು ಆಸನಗಳ ಕಾರಿನಲ್ಲಿ ಎಂಟು ಜನರು ಪ್ರಯಾಣಿಸುತ್ತಿದ್ದರು. ಕಾರು ಮೊದಲು ರಸ್ತೆ ವಿಭಜಕಕ್ಕೆ ಮತ್ತು ನಂತರ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅವರಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡು ಸಾವನ್ನಪ್ಪಿದ್ದರೆ, ಉಳಿದ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.


