ಕೊರಟಗೆರೆ ತಾಲೂಕಿನ ನವಿಲುಕುರಿಕೆ ಗ್ರಾಮಸ್ಥರ ಮನವಿಯಂತೆ ಕೊನೆಗೂ ಬಂತು ಸರ್ಕಾರಿ ಬಸ್ ಗ್ರಾಮಕ್ಕೆ ಬಂದಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಮಹತ್ವದ ಕಾರ್ಯಕ್ರಮದಲ್ಲಿ ಸರ್ಕಾರಿ ಬಸ್ ಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು.
ಸ್ಥಳೀಯ ಶಾಸಕರು ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮಾರ್ಗದರ್ಶನದಂತೆ ಗ್ರಾಮದ ಜನರ ದಿನನಿತ್ಯದ ಸಂಚಾರಕ್ಕೆ KSRTC ಅಧಿಕಾರಿಗಳು ಸಾರಿಗೆ ಬಸ್ ವ್ಯವಸ್ಥೆ ಮಾಡಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ನವಿಲುಕುರಿಕೆ ಗ್ರಾಮದ ಸಾರ್ವಜನಿಕರ ಮನವಿಗೆ ಅಂದಿನ ತಹಶೀಲ್ದಾರ್ ನಹೀದಾ ಜಂ ಜಂ KSRTC ಅಧಿಕಾರಿಗಳಿಗೆ ಶಾಸಕರ ಆದೇಶದಂತೆ ಪತ್ರ ಬರೆದಿದ್ದರು.
ಸರ್ಕಾರಿ ಬಸ್ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳ ಮುಖದಲ್ಲಿ ಇಂದು ಈ ನಗರ ಸಾರಿಗೆ ನಗು ತಂದಿದೆ .. ಪ್ರತಿದಿನ ತುಮಕೂರು, ಕೊರಟಗೆರೆಯತ್ತ ಶಾಲಾ ಕಾಲೇಜು ಗಳಿಗೆ ಮೈಲುಗಟ್ಟಲೆ ನಡೆದುಕೊಂಡು ಹೋಗುತ್ತಿದ್ದರು. ಇಂದು ಸರ್ಕಾರಿ ಬಸ್ ನಲ್ಲಿ ಹಾಯಾಗಿ ಪ್ರಯಾಣ ಮಾಡಿದರು.
ನವಿಲುಕುರಿಕೆ, ದಮಗಲಯ್ಯನ ಪಾಳ್ಯ ಗ್ರಾಮಸ್ಥರು ಸರ್ಕಾರಿ ಬಸ್ ಕಂಡು ಸಂತೋಷ ವ್ಯಕ್ತಪಡಿಸಿದರು. ಗ್ರಾಮಸ್ಥರೆಲ್ಲ ಸೇರಿ ಸರ್ಕಾರಿ ಬಸ್ ಗೆ ಇಂದು ಬೆಳಗ್ಗೆ ವಿಶೇಷ ಪೂಜೆ ಮಾಡಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿ KSRTC ಬಸ್ ವ್ಯವಸ್ಥೆ ಮಾಡಿಕೊಟ್ಟ ಕ್ಷೇತ್ರದ ಶಾಸಕ ಹಾಗೂ ಗೃಹ ಸಚಿವರಿಗೆ ಮತ್ತು ಎಲ್ಲ ಅಧಿಕಾರಿಗಳಿಗೆ ಗ್ರಾಮದ ಹಿರಿಯರು ಧನ್ಯವಾದಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾದ ಗೀತಾ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯೆ ಶೈಲಜಾ ರಾಮಚಂದ್ರಯ್ಯ, ನಾಗರಾಜು ಎನ್ ಸಿ, ರಂಗಶಾಮಯ್ಯ, ಗಾರೆ ಕಾಂತರಾಜು, ಪುಟ್ಟರಾಜು, ರಾಜೇಶ್ವರಿವನಜಾಕ್ಷಿ, ಕುಂಬಿನರಸಯ್ಯ, ಹನುಮಂತರಾಯಪ್ಪ, ರಂಗನಾಥ್ ಮತ್ತು ವಿದ್ಯಾರ್ಥಿಗಳು ಕಾರ್ಮಿಕರು ರೈತರು ಗ್ರಾಮದ ಸಾರ್ವಜನಿಕರು ಹಾಜರಿದ್ದರು.
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ