ತುರುವೇಕೆರೆ: ಜಯಕರ್ನಾಟಕ ಸಂಘಟನೆಯ 9ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ತುರುವೇಕರೆ ಪಟ್ಟಣದ ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ಜರಗಿತು.
ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಿತು. ಅಶ್ವಿನಿ ನೇತ್ರಾಲಯದ ಹಿರಿಯ ನೇತ್ರ ತಂತ್ರಜ್ಞರಾದ ದಾಸೆಗೌಡ ರವರಿಂದ ಕಣ್ಣು ಪರೀಕ್ಷೆ ಹಾಗೂ ರಕ್ತದಾನ ಶಿಬಿರ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ತಾಲೂಕು ದಂಡಾದಿಕಾರಿಗಳ ಅನುಪಸ್ಥಿತಿಯಲ್ಲಿ ಜಯಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷರಾದ ಸುರೇಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಯಕರ್ನಾಟಕ ಸಂಘಟನೆಯ ಎಲ್ಲ ಘಟಕದ ಅಧ್ಯಕ್ಷರು ಪದಾಧಿಕಾರಿಗಳು, ಸಿಐಟಿಯು ಸಂಘಟನೆಯ ತಾಲೂಕು ಕಾರ್ಯದರ್ಶಿ ಸತೀಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರಾದ ಮಿಮಿಕ್ರಿ ರಮೇಶ್ ನಿರೂಪಿಸಿದರು. ಕಡಬ ಕುಮಾರ್ ಸ್ವಾಗತಿಸಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700