nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026
    Facebook Twitter Instagram
    ಟ್ರೆಂಡಿಂಗ್
    • ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!
    • ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ
    • ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!
    • ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
    • ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ.ಸುರೇಶ್ ವಿಶ್ವಾಸ
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ: ಕಡಿಮೆ ಸಂಖ್ಯೆಯಲ್ಲಿ ಭಾಗಿಯಾದ ರೈತರು | ಅಧಿಕಾರಿಗಳ ವಿರುದ್ಧ ಶಾಸಕ ಎಂ.ಟಿ. ಕೃಷ್ಣಪ್ಪ ಗರಂ
    ತುರುವೇಕೆರೆ January 3, 2024

    ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ: ಕಡಿಮೆ ಸಂಖ್ಯೆಯಲ್ಲಿ ಭಾಗಿಯಾದ ರೈತರು | ಅಧಿಕಾರಿಗಳ ವಿರುದ್ಧ ಶಾಸಕ ಎಂ.ಟಿ. ಕೃಷ್ಣಪ್ಪ ಗರಂ

    By adminJanuary 3, 2024No Comments2 Mins Read
    m t krishnappa

    ತುರುವೇಕೆರೆ: ತಾಲ್ಲೂಕಿನ ದಬ್ಬೇಘಟ್ಟ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ತುಮಕೂರು ಇವರ ವತಿಯಿಂದ “ರೈತರ ತಾಕುಗಳಲ್ಲಿ ಪ್ರಾತ್ಯಕ್ಷತೆ ಕಾರ್ಯಕ್ರಮ” ತೆಂಗಿನ ಬೆಳೆಗಳಿಗೆ ರೋಗನಿರ್ವಹಣೆ ವಿಚಾರ ಸಂಕೀರ್ಣ ಏರ್ಪಡಿಸಲಾಗಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಈ ಕಾರ್ಯಕ್ರಮಕ್ಕೆ ದಬ್ಬೇಘಟ್ಟ ಹೋಬಳಿಯಿಂದ ಸಾಕಷ್ಟು ರೈತರು ಬರುವ ನಿರೀಕ್ಷೆಯಿತ್ತು ತೋಟಗಾರಿಕಾ ಇಲಾಖೆಯ ಸಿಬ್ಬಂದಿಗಳಿಂದ ರೈತರಿಗೆ ಸರಿಯಾದ ಮಾಹಿತಿ ದೊರಕದೆ ರೈತರು ಕಡಿಮೆ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರಲ್ಲದೇ,   ಈ ಕಾರ್ಯಕ್ರಮ ನನಗೆ ತೃಪ್ತಿ ತಂದಿಲ್ಲ ಮುಂದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ರೈತರಿಗೆ ಸರಿಯಾಗಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.


    Provided by
    Provided by

    ದಬ್ಬೇಘಟ್ಟ ಹೋಬಳಿಯು ತೀರಾ ಹಿಂದುಳಿದಿದ್ದು ನೀರಾವರಿ ಸೌಲಭ್ಯದಿಂದ ವಂಚಿತವಾಗಿದೆ ಇದನ್ನು ಮನಗಂಡು ನಾನು ಕಳೆದ ಬಾರಿ ಶಾಸಕನಾಗಿದ್ದಾಗ ಮಲ್ಲಾಘಟ್ಟ ಹಿನ್ನೀರಿನಿಂದ  ಏತನೀರಾವರಿಗೆ ಯೋಜನೆಯನ್ನು ರೂಪಿಸಿ, ಅದನ್ನು ಜಾರಿಗೊಳಿಸಲು ಸಾಕಷ್ಟು ಶ್ರಮವಹಿಸಿದ್ದೇನೆ.  ಇದರಿಂದ ಹೋಬಳಿಯ ಸುಮಾರು ಕೆರೆಗಳಿಗೆ ನೀರು ಹರಿಯಲಿದ್ದು,  ಈ ಭಾಗದ ರೈತರಿಗೆ ಉಪಯೋಗವಾಗಲಿದೆ ಹಾಗೂ ರೈತರ ಋಣ ತೀರಿಸಲು ಸಣ್ಣ ಪ್ರಯತ್ನ ಮಾಡಿದ್ದೇನೆ   ತೋಟಗಾರಿಕೆ ಇಲಾಖೆಯ  ಅಧಿಕಾರಿಗಳು ಬರಗಾಲವಾಗಿರುವುದರಿಂದ  ಪ್ರತಿ ಮನೆಮನೆಗೂ ತೆರಳಿ ಸರ್ಕಾರದಿಂದ ದೊರೆಯುವ ಯೋಜನೆಗಳನ್ನು ರೈತರಿಗೆ ತಲುಪಿಸುವಂತ ಪ್ರಾಮಾಣಿಕ ಪ್ರಯತ್ನ ಮಾಡಿಯೆಂದು ಸೂಚಿಸಿದರು.

    ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆಂಜನೇಯ ರೆಡ್ಡಿ ಮಾತನಾಡಿ, ಈ ಹೋಬಳಿಯಲ್ಲಿ ತೆಂಗುಬೆಳೆಯ ಮತ್ತು ಅಡಿಕೆ ಬೆಳೆಯ ವಿಸ್ತೀರ್ಣ ವನ್ನು ತಿಳಿಸಿ, ರೈತರಿಗೆ ಇಲಾಖೆಯಿಂದ ದೊರೆಯುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

    ತೆಂಗು ಬೆಳೆಗಳ ನಿರ್ವಹಣೆ ಮತ್ತು ರೋಗಗಳ ಬಗ್ಗೆ ಕೆವಿಕೆ ಕೊನೇಹಳ್ಳಿ ವಿಜ್ಞಾನಿ ಡಾ.ಕೀರ್ತಿಶಂಕರ ರವರು ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ನೀಡಿದರು.

    ರೈತರಿಗೆ ತೆಂಗು, ನಿಂಬೆ ,ಲವಂಗದ ಸಸಿಗಳು ಹಾಗೂ ಟ್ರೈಕೋಡರ್ಮಾ ಜೈವಿಕ ಗೊಬ್ಬರವನ್ನು ಉಚಿತವಾಗಿ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎನ್.ಆರ್.ಜಯರಾಮ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಜಣ್ಣ, ಎ.ಪಿ.ಎಂ.ಸಿ. ಮಾಜಿಸದಸ್ಯ ವಿಜಯೇಂದ್ರ,ಬಿ.ಎಸ್ ದೇವರಾಜ್, ರಾಜ್ ಕುಮಾರ್,  ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ರೇವಣ್ಣ ಸೇರಿದಂತೆ ರೈತರು ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

    ವರದಿ: ಸುರೇಶ್‌ ಬಾಬು ಎಂ., ತುರುವೇಕೆರೆ 

    admin
    • Website

    Related Posts

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ಮಾ. 24 ರಂದು ತುರುವೇಕೆರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ: ಕುಂದು ಕೊರತೆ ಸಭೆ

    March 22, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಂಡ್ಯ: ಮಾಜಿ ಶಾಸಕ ಡಾ.ಅನ್ನದಾನಿ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪ; ಕುಮಾರಸ್ವಾಮಿ ಕಾಲಿಗೆ ಬಿದ್ದು ಪತಿಯ ಗೋಳಾಟ!

    April 7, 2026

    ಮಂಡ್ಯ: ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಅಕ್ರಮ ಸಂಬಂಧದ ಗಂಭೀರ ಆರೋಪವೊಂದು ಕೇಳಿಬಂದಿದೆ.…

    ‘ಪೆಟ್ರೋಲ್‌ ಗೆ ಬದಲಾಯಿಸಿಕೊಳ್ಳಿ’: ಆಟೋ LPG ಸಮಸ್ಯೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಲಹೆ

    April 7, 2026

    ಶಿವಣ್ಣನ ಜೊತೆ ಮದುವೆ; ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ನಟಿ ಸುಧಾರಾಣಿ ಆಕ್ರೋಶ!

    April 7, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.