ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಕಾಂಗ್ರೆಸ್ ಸೇರಿದ್ದಾರೆ. ಅವರದೇ ಪಕ್ಷ ವೈಎಸ್ ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಾಗುವುದು. ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10:30ಕ್ಕೆ ಶರ್ಮಿಳಾ ಕಾಂಗ್ರೆಸ್ ಸೇರಿದ್ದಾರೆ.
ದೆಹಲಿಗೆ ಬಂದಿಳಿದ ಶರ್ಮಿಳಾ ಕಾಂಗ್ರೆಸ್ ಸೇರುವ ಮುನ್ನ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಪಾನೀಯ ಸೇವಿಸಲಿದ್ದಾರೆ.
ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ವಿರುದ್ಧ ಶರ್ಮಿಳಾ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಶರ್ಮಿಳಾ ಅವರಿಗೆ ಪ್ರಮುಖ ಜವಾಬ್ದಾರಿ ನೀಡಬಹುದು ಎನ್ನಲಾಗಿದೆ.


