ಪಾವಗಡ: ಪಟ್ಟಣದ ಪ್ರಮುಖ ಬೀದಿಗಳ ಅಂಗಡಿಯ ವಾಣಿಜ್ಯ ವ್ಯಾಪಾರ ಮಳಿಗೆಗಳಿಗೆ ಭೇಟಿ ನೀಡಿದ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಅನ್ಯ ಭಾಷೆಯಲ್ಲಿ ಅಳವಡಿಸಿರುವ ನಾಮಫಲಕಗಳನ್ನು ತೆರವುಗೊಳಿಸಿ ಕನ್ನಡ ನಾಮಫಲಕವನ್ನು ಕಡ್ಡಾಯವಾಗಿ ಹಾಕುವಂತೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ ಕರವೇ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಉಪಾಧ್ಯಕ್ಷರಾದ ಸಂಗಮ್ ನರಸೀ ಪಾಟೀಲ್, ಪದಾಧಿಕಾರಿಗಳಾದ ಪಾಳೇಗಾರ್ ಲೋಕೇಶ್, ಬೇಕರಿ ನಾಗರಾಜ್, ಮಲ್ಲಿ, ರಂಗಪ್ಪ, ಮಣಿ, ರಾಜು ಪ್ರಶಾಂತ್, ಮಂಜು, ಆಲ್ಕುಂದ್ ರಾಜ್, ಕುಮಾರ್, ಲಚ್ಚಿ, ಗೋಪಾಲ್, ಶ್ರೀನಿವಾಸ್, ನಾಗೇಂದ್ರ ಮುಂತಾದವರು ಭಾಗವಹಿಸಿದ್ದರು.
ವರದಿ : ನಂದೀಶ್ ನಾಯ್ಕ ಪಿ. , ಪಾವಗಡ