nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ವ್ಯಕ್ತಿಯ ಮೃತದೇಹ ಹೊರತೆಗೆದು ಬೇರೆಡೆ ಶವಸಂಸ್ಕಾರ ಮಾಡಿದ ಅಧಿಕಾರಿಗಳು
    Uncategorized January 6, 2024

    ದಲಿತ ವ್ಯಕ್ತಿಯ ಮೃತದೇಹ ಹೊರತೆಗೆದು ಬೇರೆಡೆ ಶವಸಂಸ್ಕಾರ ಮಾಡಿದ ಅಧಿಕಾರಿಗಳು

    By adminJanuary 6, 2024No Comments2 Mins Read
    thumakuru

    ತುಮಕೂರು: ವಯೋಸಹಜವಾಗಿ ಮೃತಪಟ್ಟ ದಲಿತ ವ್ಯಕ್ತಿಯ ಶವವನ್ನು ಉಪದ್ರವ ನಿವಾರಣಾ ಆದೇಶ ಹೊರಡಿಸಿ ಹೊರತೆಗೆದು ಮತ್ತೊಂದು ಸ್ಥಳದಲ್ಲಿ ಶವಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿಯಲ್ಲಿ ನಡೆದಿದೆ. ವೃದ್ಧ ಪೆದ್ದಯ್ಯ ವಯೋಸಹಜವಾಗಿ ಕಳೆದ ತಿಂಗಳು ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು. ಮೃತರ ಶವ ಸಂಸ್ಕಾರ ಮಾಡಲು ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ ಮೃತ ಪೆದ್ದಯ್ಯನ ಮಗ ತಿಮ್ಮರಾಜು ‘ನಮ್ಮ ತಂದೆ ಮೃತಪಟ್ಟಿದ್ದಾರೆ. ಊಳಲು ಸ್ಮಶಾನ ಇಲ್ಲ. ನಮ್ಮ ತಂದೆಯ ಶವಸಂಸ್ಕಾರವನ್ನು ಎಲ್ಲಿ ಮಾಡಬೇಕು ಎಂದು ತಹಸೀಲ್ದಾರ್ ಹಾಗೂ ಪಿಡಿಒ ಅವರಿಗೆ ಕೇಳಿದ್ದಾರೆ. ಆದರೆ ಅವರಿಂದ ಸಮರ್ಪಕ ಉತ್ತರ ಬಾರದ ಹಿನ್ನೆಲೆಯಲ್ಲಿ ದುರ್ಗದ ಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.


    Provided by
    Provided by

    ಘಟನೆಗೆ ಸಂಬಂಧಿಸಿದಂತೆ ಸ್ಮಶಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿರುವ ದುರ್ಗದ ಹಳ್ಳಿಯ ತಿಮ್ಮರಾಜು, ನಾವು ದಲಿತ ಕುಟುಂಬಕ್ಕೆ ವರ್ಗಕ್ಕೆ ಸೇರಿದವರಾಗಿದ್ದು ಭೂಮಿ ಇಲ್ಲದ ಕಾರಣ ಅಧಿಕಾರಿಗಳ ಹೇಳಿಕೆಯಂತೆ ರಸ್ತೆ ಬದಿಯಲ್ಲಿ ಅಂತ್ಯ ಸಂಸ್ಕಾರ ಮಾಡಿರುವುದಾಗಿ ಹೇಳಿದ್ದರು.

    ಪರಮೇಶ್ವರ್ ಸಹ ಪ್ರತಿಕ್ರಿಯಿಸಿದ್ದರು. ಇಂತಹ ಅಮಾನವೀಯ ಘಟನೆ ನಡೆಯಬಾರದೆಂದು ಮುಂದೆ ಈ ರೀತಿ ಆಗದಂತೆ ಜಾಗೃತಿ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿ, ಕುಟುಂಬಸ್ಥರು ಒಪ್ಪಿದರೆ ವ್ಯಕ್ತಿಯ ಶವವನ್ನು ಬೇರೆಡೆ ಅಂತ್ಯಸಂಸ್ಕಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

    ಇದರ ಬೆನ್ನಲ್ಲೇ ತುಮಕೂರು ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಉಪದ್ರವ ನಿವಾರಣಾ ಕಾಯ್ದೆ ಅಡಿಯಲ್ಲಿ ತಹಸೀಲ್ದಾರ್ ಅವರಿಗೆ 48 ಗಂಟೆಗಳ ಒಳಗೆ ಮೃತ ಪೆದ್ದಯ್ಯನ ಶವವನ್ನು ಹೊರ ತೆಗೆದು, ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡಿ ವರದಿ ನೀಡಲು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆ ತಹಸೀಲ್ದಾರ್ ಸಿದ್ದೇಶ್ ಹಾಗೂ ಪೊಲೀಸ್ ಅಧಿಕಾರಿಗಳ ಮುಂದಾಳತ್ವದಲ್ಲಿ ಮೃತ ಪೆದ್ದಯ್ಯನ ಶವ ಹೊರತೆಗೆದಿದ್ದಾರೆ.

    ಹೊರ ತೆಗೆದ ಶವವನ್ನು ದುರ್ಗದ ಹಳ್ಳಿಯಿಂದ 2 ಕಿಮೀ ದೂರದಲ್ಲಿರುವ ಗುಡ್ಡದ ಬಳಿ ಗುರುತಿಸಿರುವ ಸ್ಮಶಾನದಲ್ಲಿ ಸಂಸ್ಕಾರ ಮಾಡಲಾಗಿದೆ.

    ಜಿಲ್ಲಾಡಳಿತದ ಈ ನಡೆಗೆ ಪ್ರಗತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಪ್ರದಾಯದಂತೆ ಒಮ್ಮೆ ಅಂತ್ಯ ಸಂಸ್ಕಾರ ಮಾಡಿದರೆ ಆ ಶವವನ್ನು ಹೊರ ತೆಗೆದು ಮತ್ತೊಂದು ಸ್ಥಳದಲ್ಲಿ ಶವ ಸಂಸ್ಕಾರ ಮಾಡಿರುವ ಯಾವುದೇ ಉದಾಹರಣೆಗಳು ಇಲ್ಲ. ಆದರೆ ಸಚಿವರ ಮಾತನ್ನು ಸಹ ಧಿಕ್ಕರಿಸಿ ಜಿಲ್ಲಾಡಳಿತವು ಏಕ ಪಕ್ಷಿಯ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    admin
    • Website

    Related Posts

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ

    January 10, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.