nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು

    November 4, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    • ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ
    • ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು
    • ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ
    • ವಿದ್ಯುತ್ ಸ್ಪರ್ಶದಿಂದ ಆನೆಗಳು ಸಾವು: ತನಿಖೆಗೆ ಸಚಿವ ಈಶ್ವರ ಬಿ ಖಂಡ್ರೆ ಆದೇಶ
    • ಮಾತಿನ ಮಲ್ಲಿ ಮಲ್ಲಮ್ಮ ಬಿಗ್ ಬಾಸ್ ನಿಂದ ಔಟ್ ಆಗಿದ್ದು ಹೇಗೆ?
    • ಎಲ್ಲ ಆರೋಪಗಳನ್ನು ನಿರಾಕರಿಸಿದ ನಟ ದರ್ಶನ್ ಮತ್ತು ಇತರ ಆರೋಪಿಗಳು
    • ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಲಿತ ವ್ಯಕ್ತಿಯ ಮೃತದೇಹ ಹೊರತೆಗೆದು ಬೇರೆಡೆ ಶವಸಂಸ್ಕಾರ ಮಾಡಿದ ಅಧಿಕಾರಿಗಳು
    Uncategorized January 6, 2024

    ದಲಿತ ವ್ಯಕ್ತಿಯ ಮೃತದೇಹ ಹೊರತೆಗೆದು ಬೇರೆಡೆ ಶವಸಂಸ್ಕಾರ ಮಾಡಿದ ಅಧಿಕಾರಿಗಳು

    By adminJanuary 6, 2024No Comments2 Mins Read
    thumakuru

    ತುಮಕೂರು: ವಯೋಸಹಜವಾಗಿ ಮೃತಪಟ್ಟ ದಲಿತ ವ್ಯಕ್ತಿಯ ಶವವನ್ನು ಉಪದ್ರವ ನಿವಾರಣಾ ಆದೇಶ ಹೊರಡಿಸಿ ಹೊರತೆಗೆದು ಮತ್ತೊಂದು ಸ್ಥಳದಲ್ಲಿ ಶವಸಂಸ್ಕಾರ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ತುಮಕೂರು ತಾಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿಯಲ್ಲಿ ನಡೆದಿದೆ. ವೃದ್ಧ ಪೆದ್ದಯ್ಯ ವಯೋಸಹಜವಾಗಿ ಕಳೆದ ತಿಂಗಳು ಡಿಸೆಂಬರ್ನಲ್ಲಿ ಮೃತಪಟ್ಟಿದ್ದರು. ಮೃತರ ಶವ ಸಂಸ್ಕಾರ ಮಾಡಲು ಗ್ರಾಮದಲ್ಲಿ ಸ್ಮಶಾನ ಇಲ್ಲದ ಕಾರಣ ಮೃತ ಪೆದ್ದಯ್ಯನ ಮಗ ತಿಮ್ಮರಾಜು ‘ನಮ್ಮ ತಂದೆ ಮೃತಪಟ್ಟಿದ್ದಾರೆ. ಊಳಲು ಸ್ಮಶಾನ ಇಲ್ಲ. ನಮ್ಮ ತಂದೆಯ ಶವಸಂಸ್ಕಾರವನ್ನು ಎಲ್ಲಿ ಮಾಡಬೇಕು ಎಂದು ತಹಸೀಲ್ದಾರ್ ಹಾಗೂ ಪಿಡಿಒ ಅವರಿಗೆ ಕೇಳಿದ್ದಾರೆ. ಆದರೆ ಅವರಿಂದ ಸಮರ್ಪಕ ಉತ್ತರ ಬಾರದ ಹಿನ್ನೆಲೆಯಲ್ಲಿ ದುರ್ಗದ ಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿಯಲ್ಲೇ ಅಂತ್ಯ ಸಂಸ್ಕಾರ ನೆರವೇರಿಸಿದ್ದರು.


    Provided by
    Provided by

    ಘಟನೆಗೆ ಸಂಬಂಧಿಸಿದಂತೆ ಸ್ಮಶಾನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿರುವ ದುರ್ಗದ ಹಳ್ಳಿಯ ತಿಮ್ಮರಾಜು, ನಾವು ದಲಿತ ಕುಟುಂಬಕ್ಕೆ ವರ್ಗಕ್ಕೆ ಸೇರಿದವರಾಗಿದ್ದು ಭೂಮಿ ಇಲ್ಲದ ಕಾರಣ ಅಧಿಕಾರಿಗಳ ಹೇಳಿಕೆಯಂತೆ ರಸ್ತೆ ಬದಿಯಲ್ಲಿ ಅಂತ್ಯ ಸಂಸ್ಕಾರ ಮಾಡಿರುವುದಾಗಿ ಹೇಳಿದ್ದರು.

    ಪರಮೇಶ್ವರ್ ಸಹ ಪ್ರತಿಕ್ರಿಯಿಸಿದ್ದರು. ಇಂತಹ ಅಮಾನವೀಯ ಘಟನೆ ನಡೆಯಬಾರದೆಂದು ಮುಂದೆ ಈ ರೀತಿ ಆಗದಂತೆ ಜಾಗೃತಿ ವಹಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿ, ಕುಟುಂಬಸ್ಥರು ಒಪ್ಪಿದರೆ ವ್ಯಕ್ತಿಯ ಶವವನ್ನು ಬೇರೆಡೆ ಅಂತ್ಯಸಂಸ್ಕಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.

    ಇದರ ಬೆನ್ನಲ್ಲೇ ತುಮಕೂರು ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರು ಉಪದ್ರವ ನಿವಾರಣಾ ಕಾಯ್ದೆ ಅಡಿಯಲ್ಲಿ ತಹಸೀಲ್ದಾರ್ ಅವರಿಗೆ 48 ಗಂಟೆಗಳ ಒಳಗೆ ಮೃತ ಪೆದ್ದಯ್ಯನ ಶವವನ್ನು ಹೊರ ತೆಗೆದು, ಬೇರೆ ಕಡೆ ಅಂತ್ಯ ಸಂಸ್ಕಾರ ಮಾಡಿ ವರದಿ ನೀಡಲು ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಮುಂಜಾನೆ ತಹಸೀಲ್ದಾರ್ ಸಿದ್ದೇಶ್ ಹಾಗೂ ಪೊಲೀಸ್ ಅಧಿಕಾರಿಗಳ ಮುಂದಾಳತ್ವದಲ್ಲಿ ಮೃತ ಪೆದ್ದಯ್ಯನ ಶವ ಹೊರತೆಗೆದಿದ್ದಾರೆ.

    ಹೊರ ತೆಗೆದ ಶವವನ್ನು ದುರ್ಗದ ಹಳ್ಳಿಯಿಂದ 2 ಕಿಮೀ ದೂರದಲ್ಲಿರುವ ಗುಡ್ಡದ ಬಳಿ ಗುರುತಿಸಿರುವ ಸ್ಮಶಾನದಲ್ಲಿ ಸಂಸ್ಕಾರ ಮಾಡಲಾಗಿದೆ.

    ಜಿಲ್ಲಾಡಳಿತದ ಈ ನಡೆಗೆ ಪ್ರಗತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಪ್ರದಾಯದಂತೆ ಒಮ್ಮೆ ಅಂತ್ಯ ಸಂಸ್ಕಾರ ಮಾಡಿದರೆ ಆ ಶವವನ್ನು ಹೊರ ತೆಗೆದು ಮತ್ತೊಂದು ಸ್ಥಳದಲ್ಲಿ ಶವ ಸಂಸ್ಕಾರ ಮಾಡಿರುವ ಯಾವುದೇ ಉದಾಹರಣೆಗಳು ಇಲ್ಲ. ಆದರೆ ಸಚಿವರ ಮಾತನ್ನು ಸಹ ಧಿಕ್ಕರಿಸಿ ಜಿಲ್ಲಾಡಳಿತವು ಏಕ ಪಕ್ಷಿಯ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    admin
    • Website

    Related Posts

    ಬಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜಾನಸನ್ ಘೋಡೆ ಪ್ರಚಾರ

    November 3, 2025

    ಬೀದರ್ | ಕೆಟಿಪಿಪಿ ನಿಯಮ ಉಲ್ಲಂಘನೆ: ಹುಲಸೂರ ಪಿಡಿಒ ಅಮಾನತು

    November 3, 2025

    ಕನ್ನಡ ಭಾಷೆಗೆ ದೇವರ ಸ್ಥಾನ ಕೊಟ್ಟಿದ್ದೇವೆ: ಡಾ.ಪೂರ್ಣಿಮ ಅಭಿಮತ

    November 2, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ : ಬೀದಿ ಬದಿ ವ್ಯಾಪಾರಿಗಳು ಸುರಕ್ಷಿತ ಸ್ಥಳದಲ್ಲಿ ಕುಳಿತು ವ್ಯಾಪಾರ ಮಾಡದೇ ನಡು ರಸ್ತೆಯಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ವ್ಯಾಪಾರದ…

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಸ್ಪರ್ಶ:  ರೈತ ಸಾವು

    November 4, 2025

    ತೆಲಂಗಾಣ | ಭೀಕರ ರಸ್ತೆ ಅಪಘಾತ: 24 ಸಾವು, ಎಂಟು ಮಂದಿಗೆ ಗಾಯ

    November 3, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.