nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ
    ರಾಜ್ಯ ಸುದ್ದಿ January 14, 2024

    ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಿಲ್ಲ: ಮುಖ್ಯಮಂತ್ರಿ  ಸಿದ್ದರಾಮಯ್ಯ

    By adminJanuary 14, 2024No Comments2 Mins Read
    siddaramaiah

    ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು. ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

    ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ  2024 ಸಮಾವೇಶದಲ್ಲಿ  ಮಾತನಾಡಿದರು.


    Provided by
    Provided by

    ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ  ವ್ಯವಸ್ಥೆಯನ್ನು  ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು ಶೂದ್ರರಾದರು.  ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.

    ಮೇಲು, ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯ ವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ  ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು.

    ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆಯಡಿ 130.28 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1.17 ಕೋಟಿ ಕುಟುಂಬದ ಯಜಮಾನಿಗೆ ತಲಾ 2000 ರೂ.  ಗೃಹಲಕ್ಷ್ಮಿ ಯೋಜನೆ, 200 ಯೂನಿಟ್ ಉಚಿತ ವಿದ್ಯುತ್ , 5 ಕೆಜಿ ಅಕ್ಕಿ  ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಕಾಲಮಾನದಲ್ಲಿ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆದ್ದರಿಂದ ಸಾರ್ವತ್ರಿಕ ಮೂಲ ಆದಾಯ ತತ್ವವನ್ನಾಧರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇಂತಹ ಜನಪರ ಯೋಜನೆಗಳಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಶೋಷಿತರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು, ದುರ್ಬಲವರ್ಗದವರ ಪರ ನಾನು ಸದಾ ನಿಂತಿರುತ್ತೇನೆ ಎಂದರು.

    ಇತಿಹಾಸ ತಿಳಿಯದವರು ಭವಿಷ್ಯ ವನ್ನು ರೂಪಿಸಲು ಸಾಧ್ಯವಿಲ್ಲ. ಇತಿಹಾಸ ತಿಳಿದವರು ಮಾತ್ರ ಅವರ  ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು.  ಹಿಂದೆ ಏನಾಗಿದ್ದೆವು, ಮುಂದೇನಾಗಬೇಕು ಎಂದು ಚರ್ಚೆಗಳಾಗಲು ಇಂಥ ಸಮಾವೇಶಗಳು ಅಗತ್ಯ. ಜಾತಿ ಮಾಡಿದವರೇ ಜಾತಿ ಸಮಾವೇಶ ಮಾಡಬಾರದು ಎನ್ನುತ್ತಾರೆ. ಅಂಥವರ ಬಗ್ಗೆ ಎಚ್ಚರಿಕೆ ಅಗತ್ಯ. ರಾಜಕೀಯ ಚಿಂತಕ ಲೋಹಿಯಾ  ಅವರು ‘ಮುಂದುವರೆದ ಜಾತಿ , ಜಾತಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶವಾಗುತ್ತದೆ. ಹಿಂದುಳಿದವರು, ಶೋಷಣೆಗೆ ಒಳಪಟ್ಟವರು ಸಂಘಟನೆಗಾಗಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶ ಅಲ್ಲ’ ಎಂದಿದ್ದಾರೆ ಎಂದರು.

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು

    May 5, 2026

    ತುಮಕೂರು: ದೇವರಾಯ ಪಟ್ಟಣದ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ದೇವರ ಹುಂಡಿ ಹೊಡೆದು ಕಳ್ಳತನ ಮಾಡಿರುವ ಘಟನೆ ಕ್ಯಾತಸಂದ್ರ ಪೊಲೀಸ್ ಠಾಣಾ…

    ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ

    May 5, 2026

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.