ಬೀದರ್: ಜಿಲ್ಲೆಯ ಕೌಡಗಾಂವ ಗ್ರಾಮದ ಮೈನ್ ರೋಡ್ ನಲ್ಲಿ ಸುಮಾರು 42 ವರ್ಷಗಳಿಂದ ಇದ್ದ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಹೈವೆ ರಸ್ತೆ ನಿರ್ಮಾಣಕ್ಕಾಗಿ 2 ವರ್ಷಗಳ ಹಿಂದೆ ತೆರವುಗೊಳಿಸಲಾಗಿತ್ತು. ತೆರವುಗೊಳಿಸುವ ವೇಳೆ ಮತ್ತೆ ಮೂರ್ತಿ ನಿರ್ಮಿಸುವ ಭರವಸೆ ನೀಡಲಾಗಿತ್ತು.
ಆದರೆ, ಈವರೆಗೂ ಪ್ರತಿಮೆ ನಿರ್ಮಾಣ ಮಾಡದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಮೇಲ್ಜಾತಿಯವರ ಮುಲಾಜಿಗೊಳಪಟ್ಟು ಅಧಿಕಾರಿಗಳು ಪ್ರತಿಮೆ ನಿರ್ಮಾಣದಿಂದ ಹಿಂದೆ ಸರಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಪ್ರತಿಮೆ ತೆರವು ನಡೆಸುವ ವೇಳೆ ಔರಾದ್ ತಹಶೀಲ್ದಾರ್ ಮತ್ತೆ ಪ್ರತಿಮೆಯನ್ನ ಸ್ಥಾಪನೆ ಮಾಡೋದಾಗಿ ಹೇಳಿದ್ದರು. ಆದ್ರೆ ಇದೀಗ ಪ್ರತಿಮೆ ನಿರ್ಮಾಣ ಮಾಡದೇ ಇಲ್ಲಿನ ಜನತೆಯ ಭಾವನೆಗಳ ಜೊತೆಗೆ ಆಟವಾಡಿದ್ದಾರೆ. ಈ ಹಿನ್ನೆಲೆಯಲ್ಲಿ 20/01/2024 ಎಂದು ಸಮಾಜದ ಹಿರಿಯರು ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯನ್ನು ಈ ಸ್ಥಳದಲ್ಲಿ ಸ್ಥಾಪಿಸಿದ್ದು, ಇದಕ್ಕೆ ಇಲ್ಲಿನ ಸವರ್ಣೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಬೀದರ್ ಜಿಲ್ಲೆಯ A C, DSP ಔರಾದ ತಾಲೂಕಿನ ತಹಸೀಲ್ದಾರ್ ಮಲ್ ಶೆಟ್ಟಿ, ಔರಾದ CPI, ಸರ್ಕಲ್ ಪಿಎಸ್ ಐ ಆಗಮಿಸಿದ್ದು, ಪ್ರತಿಭಟನಾಕಾರರ ಮನವೊಲಿಕೆಗೆ ಮುಂದಾಗಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಧಿಕಾರಿಗಳ ಭೇಟಿಯ ಬಳಿಕವೂ ಪ್ರತಿಭಟನೆ ಮುಂದುವರಿದಿದ್ದು, ಅಂಬೇಡ್ಕರ್ ಪ್ರತಿಮೆ ಮತ್ತೆ ಸ್ಥಾಪನೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಸಲಾಗುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಡಿ ಎಸ್ ಎಸ್ ಜಿಲ್ಲಾಧ್ಯಕ್ಷರಾದ ಧನರಾಜ್ ಮುಸ್ತಾಪುರ್, ಡಿ ಎಸ್ ಎಸ್ ಜಿಲ್ಲಾಧ್ಯಕ್ಷರಾದ ಸತೀಶ್ ಬಗ್ಗೆ, ಕರ್ನಾಟಕ ಪ್ರಜಾ ಶಕ್ತಿ ಜಿಲ್ಲಾಧ್ಯಕ್ಷರಾದ ಸಾಯಿ ಶಿಂದೆ, ಸುನಿಲ್ ಮಿತ್ರ, ಕೌಠ ಗ್ರಾಮ ಪಂಚಾಯತ್ ಅಧ್ಯಕ್ಷ ಗೌತಮ ಮೆತ್ರೆ , ಗೌಡಗಾಂವ ಗ್ರಾಮಸ್ಥರಾದ ಸುಭಾಸ್ ಲಾಧಾ, ರಾಹುಲ್ ಖಂಡರೆ, ಸುನಿಲ್ ಮಿತ್ರಾ, ಸಾಯಿ ಸಿಂದೆ, ಧನರಾಜ ಮುತ್ತಾಪುರ, ತುಕಾರಾಮ್ ಹಸನ್ ನ್ಮುಖಿ, ಅಂಬರೀಶ್ ಕುದುರೆ, ಸತೀಶ್ ವಗ್ಗೆ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್


