nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ

    May 11, 2025

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಆಪರೇಷನ್‌ ಸಿಂಧೂರ ಬೆಂಬಲಿಸಿ ತುಮಕೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

    May 11, 2025
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ
    • ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ
    • ಆಪರೇಷನ್‌ ಸಿಂಧೂರ ಬೆಂಬಲಿಸಿ ತುಮಕೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ
    • ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ
    • ಇಂತಹ ಸಂದರ್ಭದಲ್ಲಿ ನನ್ನ ಜನ್ಮದಿನಾಚರಣೆ ಮಾಡೋದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
    • ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪಿಯ ಬಂಧನ
    • ಪೊಲೀಸರಿಗೆ ರಜೆ ನೀಡುವುದಿಲ್ಲ: ಗೃಹ ಸಚಿವ ಜಿ ಪರಮೇಶ್ವರ
    • ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಸತ್ತು ಹೋಗಿದ್ದಾನೆ ಅಂದುಕೊಂಡಿದ್ದ ವ್ಯಕ್ತಿ ಜೀವಂತ ಪ್ರತ್ಯಕ್ಷ: ಗ್ರಾಮಸ್ಥರಿಗೆ ಶಾಕ್
    ಮಧುಗಿರಿ December 1, 2021

    ಮಧುಗಿರಿ: ಸತ್ತು ಹೋಗಿದ್ದಾನೆ ಅಂದುಕೊಂಡಿದ್ದ ವ್ಯಕ್ತಿ ಜೀವಂತ ಪ್ರತ್ಯಕ್ಷ: ಗ್ರಾಮಸ್ಥರಿಗೆ ಶಾಕ್

    By adminDecember 1, 2021No Comments2 Mins Read
    nagarajappa

    ಮಧುಗಿರಿ: ಮೂರು ತಿಂಗಳ ಹಿಂದೆ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಕ್ರಿಯೆ, ತಿಥಿ ಕಾರ್ಯ ಎಲ್ಲವೂ ಮುಗಿದ ಬಳಿಕ ವ್ಯಕ್ತಿ ದಿಢೀರ್ ಆಗಿ ಪ್ರತ್ಯಕ್ಷವಾಗಿ ಎಲ್ಲರಿಗೂ ಬಿಗ್ ಶಾಕ್ ನೀಡಿದ್ದಾರೆ. ತುಮಕೂರಿನ ಮಧುಗಿರಿ ತಾಲೂಕಿನ ಕೊಡಿಗೇನ ಹಳ್ಳಿಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.

    ಜಿಲ್ಲೆಯ ಮಧುಗಿರಿ ತಾಲೂಕಿನ ಚಿಕ್ಕಮಾಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿರುವ ಪ್ರೇಮಲತಾ ಅವರ ತಂದೆ ನಾಗರಾಜಪ್ಪ ಕಳೆದ 12 ವರ್ಷಗಳ ಹಿಂದೆ ಚಿಕ್ಕಮಾಲೂರನ್ನು ತೊರೆದು ಯಾರಿಗೂ ಹೇಳದೆ‌ ಹೋಗಿದ್ದರು. ಬಳಿಕ 3 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ವಾಸವಿರುವ ನಾಗರಾಜಪ್ಪನ ಎರಡನೇ ಮಗಳಾದ ನೇತ್ರಾವತಿಯ ಮನೆಗೆ ಹೋಗಿದ್ದರು ಎನ್ನಲಾಗಿದೆ.


    Provided by

    ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ‌ ನರ್ಸ್ ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ನೇತ್ರಾವತಿ ಅಂದಿನಿಂದಲೂ ತಂದೆ ನಾಗರಾಜಪ್ಪನನ್ನ ನೋಡಿಕೊಳ್ಳುತ್ತಿದ್ದರು. ಮಗಳು ಕೆಲಸ ಮಾಡುತ್ತಿದ್ದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲೇ ನಾಗರಾಜಪ್ಪ ಸಹ ಚಿಕ್ಕಪುಟ್ಟ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ.

    ಮೂರು ತಿಂಗಳ ಹಿಂದೆ ಇದ್ದಕ್ಕಿದಂತೆ ನಾಗರಾಜಪ್ಪ ನಾಪತ್ತೆಯಾಗಿದ್ದು, ಸಾಕಷ್ಟು ಹುಡುಕಾಡಿದರೂ ಸಿಕ್ಕಿರಲಿಲ್ಲ. ಆದರೆ, ಕಾಣೆಯಾದ 8 ದಿನಗಳ ಬಳಿಕ ಅಂದರೆ ಸೆಪ್ಟೆಂಬರ್ 18 ರಂದು ಸೆಂಟ್ ಜಾನ್ಸ್ ಆಸ್ಪತ್ರೆಯ ಕಾಂಪೌಂಡ್ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಆಸ್ಪತ್ರೆಯ ಸಿಬ್ಬಂದಿ ನೇತ್ರಾವತಿಗೆ ಈ‌ ವಿಷಯ ತಿಳಿಸಿದ್ದು, ನಾಗರಾಜಪ್ಪನೇ ಸಾವನ್ನಪ್ಪಿರ ಬಹುದೆಂದು ಸಂಶಯ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪರ ರೀತಿಯಲ್ಲೇ ಹೋಲಿಕೆ ಇದ್ದ ಕಾರಣ ನೇತ್ರಾವತಿ ಸಹ ಶವ ತನ್ನ ತಂದೆಯದ್ದೇ ಎಂದು ಒಪ್ಪಿ, ಕಾನೂನು ರೀತಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಮರಣ್ಣೋತ್ತರ ಪರೀಕ್ಷೆ ನಡೆಸಿ ಬಳಿಕ ಚಿಕ್ಕಮಾಲೂರಿಗೆ ಶವ ತಂದು ಸ್ಮಶಾನದಲ್ಲಿ ಸಂಸ್ಕಾರ ಮಾಡಿದ್ದಾರೆ ಎಂದು ವರದಿಯಾಗಿದೆ.

    ಅಂತ್ಯಕ್ರಿಯೆ ತಿಥಿ ಕಾರ್ಯ ಎಲ್ಲವೂ ಮುಗಿದ ಬಳಿಕ ಇಂದು ಬೆಳಗ್ಗೆ ನಾಗರಾಜಪ್ಪ ಚಿಕ್ಕಮಾಲೂರಿಗೆ ಬಂದಿದ್ದು, ನಾಗರಾಜಪ್ಪರನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದು, ಸತ್ತ ವ್ಯಕ್ತಿ ಹೇಗೆ ಜೀವಂತವಾಗಿ ಇಲ್ಲಿಗೆ ಬಂದ ಎಂದು ಗಾಬರಿಗೊಳಗಾಗಿದ್ದಾರೆ.

    ಕುಡಿತದ ಚಟಕ್ಕೆ ದಾಸನಾಗಿದ್ದ ನಾಗರಾಜಪ್ಪ, ಈ ಹಿಂದಿನಿಂದಲೂ ಹೆಚ್ಚಾಗಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದರು. ಮಗಳ‌ ಮನೆಯಿಂದ ಯಾರಿಗೂ ಹೇಳದೇ ಹೋಗಿ ಸಿಕ್ಕ ಕಡೆಗಳಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮೂರು ತಿಂಗಳು ಬೇರೆ ಬೇರೆ ಊರುಗಳಲ್ಲಿ ತಿರುಗಾಡಿದ್ದು, ಬಳಿಕ ಇಂದು ಊರಿಗೆ ಬರಬೇಕೆಂದುಕೊಂಡು ವಾಪಸ್ ಬಂದಿದ್ದಾರೆ ಎನ್ನಲಾಗಿದೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025

    ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್

    April 17, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ: ಗೃಹ ಸಚಿವರ ತವರಿನಲ್ಲಿ ಪೊಲೀಸ್ ಠಾಣೆಯಲ್ಲೇ ಕಟ್ಟಳೆ ಪೂಜೆ

    May 11, 2025

    ತುಮಕೂರು:  ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ  ಗ್ರಾಮ ದೇವತೆಗಳಿಗೆ ಪೊಲೀಸ್ ಠಾಣೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಸಿರುವ ಅಪರೂಪದ…

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಆಪರೇಷನ್‌ ಸಿಂಧೂರ ಬೆಂಬಲಿಸಿ ತುಮಕೂರಿನ ಶ್ರೀ ಸೋಮೇಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜೆ

    May 11, 2025

    ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಾಲಯದ ಟ್ರಸ್ಟ್ ಸೀಜ್! | ಕೋಟ್ಯಾಂತರ ಹಣ ಗೋಲ್‌ ಮಾಲ್, ತನಿಖೆಗೆ ಆದೇಶ

    May 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.