ಬೆಂಗಳೂರು: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ ನೀಡಿರುವ ಸಂಸದ ಡಿಕೆ ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಭಾನುವಾರ ನಡೆಯಿತು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಸುರೇಶ್ ಅವರ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು ನುಗ್ಗಿದ್ದರು. ಇದರಿಂದ ಸ್ಥಳದಲ್ಲಿ ಕೆಲ ಕಾಲ ಹೈಡ್ರಾಮಾ ನಡೆಯಿತು.
ಬಿಜೆಪಿ ಕಾರ್ಯಕರ್ತರು ಏಕಾಏಕಿ ಸುರೇಶ್ ಅವರ ನಿವಾಸಕ್ಕೆ ನುಗ್ಗಿತ್ತಿದ್ದಂತೆಯೇ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಯಿತು.


