ತುರುವೇಕೆರೆ: ಎಡೆಯೂರು ಶ್ರೀ ಕ್ಷೇತ್ರದಲ್ಲಿ ಶುಕ್ರವಾರ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುವ ಭಕ್ತಾದಿಗಳಿಗೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿರುವ ಮೆಟ್ರೋ ಪಾಲಿಟನ್ ಕ್ಲಬ್ ವತಿಯಿಂದ ನೀರು ಮತ್ತು ಹಾಳೆ ಹಣ್ಣು ವಿತರಿಸಲಾಯಿತು.
46 ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಗದಗ, ನವಲಗುಂದ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತೀ ವರ್ಷ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸುತ್ತಿರುತ್ತಾರೆ. ಹೀಗಾಗಿ ದಣಿದು ಬರುವ ಭಕ್ತಾದಿಗಳಿಗಾಗಿ ಮೆಟ್ರೋ ಪಾಲಿಟನ್ ಕ್ಲಬ್ ಈ ವ್ಯವಸ್ಥೆ ಮಾಡಿಸಿತ್ತು.
ಇನ್ನೂ ಮೆಟ್ರೋ ಪಾಲಿಟನ್ ಕ್ಲಬ್ ನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಸೇವೆ ಇದೇ ರೀತಿಯಾಗಿ ಮುಂದುವರಿಯಲಿ ಎಂದು ಶುಭಹಾರೈಸಿದ್ದಾರೆ.
ವರದಿ: ಸುರೇಶ್ ಬಾಬು.ಎಂ., ತುರುವೇಕೆರೆ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700