nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 
    ತಾಲೂಕು ಸುದ್ದಿ February 7, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    By adminFebruary 7, 2024No Comments2 Mins Read
    siddarameshwara

    Provided by
    Provided by

    ಸರಗೂರು: ನಾವೆಲ್ಲರೂ ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡಬೇಕಿದೆ ಎಂದರು. ಮಹಾ ಸಂಸ್ಥಾನ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ ಆಶೀರ್ವಚನ ನೀಡಿದರು.

    ತಾಲ್ಲೂಕಿನ ಪಟ್ಟಣದ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ವತಿಯಿಂದ  ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ  ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಂಡಿದ್ದು  ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.

    ಒಬ್ಬ ನೇಯ್ಗೆ ಕಾಯಕದವ, ಇನ್ನೊಬ್ಬ ಕನ್ನಡಿ (ಕ್ಷೌರದ) ಕಾಯಕದವ. ಇವರಿಬ್ಬರಲ್ಲದೆ ಅಮುಗೇಶ್ವರಲಿಂಗ ಎಂಬ ಅಂಕಿತದ ಒಬ್ಬ ವಚನಕಾರನನ್ನು ಕವಿಚರಿತೆಕಾರರು ಹೇಳಿ ಒಂದು ವಚನವನ್ನು ಉದಾಹರಿಸಿ ಆತ ಇನ್ನೊಬ್ಬ ಆಮುಗಿದೇವಯ್ಯನೆಂದು ಅಭಿಪ್ರಾಯಪಟ್ಟಿದ್ದಾರೆ.


    Provided by
    Provided by

    ಸಿದ್ದರಾಮೇಶ್ವರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಹಾಗೂ ಜಂಗಲ್ ಲಾಡ್ಜ್ ಹಾಗೂ ರೆಸಾರ್ಟ್‌ ಗಳ ನಿಗಮದ ಅಧ್ಯಕ್ಷ ಅನಿಲ್ ಚಿಕ್ಕಮಾದು ಮಾತನಾಡಿ, ನದಿ, ಕೆರೆ ಕಟ್ಟೆಗಳನ್ನು ನಿರ್ಮಿಸಿ ಶ್ರಮಿಕ ವರ್ಗದ ಆರಾಧ್ಯ ದೈವವಾಗಿ ಗುರುತಿಸಿಕೊಂಡಿರುವ ಶಿವಯೋಗಿ ಸಿದ್ಧರಾಮೇಶ್ವರರು ವಚನದ ಮೂಲಕ ನಾಡಿಗೆ ನೀಡಿದ ಸಂದೇಶ ಅನುಕರಣೀಯವಾದದ್ದು, 12ನೇ ಶತಮಾನದ ಮಹಾಶರಣ ಸಿದ್ಧರಾಮೇಶ್ವರರು ಸಮಾಜದ ಒಳಿತಿಗಾಗಿ ಬದುಕಿದ ನಿಜವಾದ ಕಾಯಕ ಯೋಗಿ. ಹೀಗಾಗಿ ಜಾತಿ, ಮತ, ಪಂಥಗಳೆನ್ನದೆ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಎಲ್ಲರೂ ಆಚರಿಸಬೇಕು. ಅಲ್ಲದೇ, ಅವರ ಆದರ್ಶವನ್ನು ಪಾಲಿಸಬೇಕು ಎಂದರು.

    12ನೇ ಶತಮಾನದಲ್ಲಿದ್ದ ಬಹಳಷ್ಟು ಪಿಡುಗುಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನ ಚಳುವಳಿಕಾರರಲ್ಲಿ ಸಿದ್ದರಾಮೇಶ್ವರರು ಕೂಡ ಪ್ರಮುಖರು .ಇಂತಹ ಮಹಾನ್ ಶಿವಯೋಗಿಗಳ ಜಯಂತಿಯನ್ನು ಒಂದು ಜಾತಿಗೆ ಸೀಮಿತ ಮಾಡದೇ ಇಡೀ ಸಮಾಜಕ್ಕೆ ಅವರ ಕೊಡುಗೆ ಮಾದರಿಯಾಗಬೇಕು’ ಎಂದು ಹೇಳಿದರು.

    ಕಾರ್ಯಕ್ರಮ ಮುನ್ನ .ಸಿದ್ದರಾಮೇಶ್ವರರ ಜಯಂತಿ ಪಟ್ಟಣದ ಸಂತೆಮಾಳ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಬೆಳ್ಳಿ ರಥದಲ್ಲಿ ಸಿದ್ದರಾಮೇಶ್ವರ ಪೋಟೋ ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮೆರವಣಿಗೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಚಾಲನೆ ನೀಡಿ.ಆರಂಭಗೊಂಡ ಒಂದನೇ ಮುಖ್ಯ ರಸ್ತೆ ಹಾಗೂ ಮಹಾವೀರ ಸರ್ಕಲ್ ಮತ್ತು ಬಸ್ ನಿಲ್ದಾಣದ ಮುಂಭಾಗದ ಮೂಲಕ ಕೆಇಬಿ ಕಛೇರಿ ಅದೇ ಮಾರ್ಗವಾಗಿ ನಾಮಧಾರಿಗೌಡ ಸಮುದಾಯದವರೆಗೆ ನಡೆಯಿತು.

    ಬಳಿಕ ಮಾತನಾಡಿದ ಸಂಸದ ಪ್ರಹ್ಲಾದ್ ಜೋಶಿ, ಸಿದ್ದರಾಮೇಶ್ವರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

    ಈ ಸಂದರ್ಭದಲ್ಲಿ ಪಡುವಲ ಮಠದ ಮಹದೇವಸ್ವಾಮಿಜಿ, ದಡದಹಳ್ಳಿ ಮಠದ ಡಾ ಷಡಕ್ಷರ ಸ್ವಾಮೀಜಿ, ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ ವಿ ಸೀತಾರಾಮ, ಮಾಜಿ ಜಿಪಂ ಸದಸ್ಯರು ಎಂ.ಪಿ. ನಾಗರಾಜು, ಚಿಕ್ಕವೀರನಾಯಕ, ಪ.ಪಂ. ಸದಸ್ಯೆ ಹೇಮಾವತಿ ರಮೇಶ್, ಶಿವಯೋಗಿ ಸಿದ್ದರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಐಡಿಯಾ ವೆಂಕಟೇಶ್, ಗೌರವಾಧ್ಯಕ್ಷ ಕೆ. ರಾಜು, ಪ.ಪಂ. ಮಾಜಿ ಸದಸ್ಯರು ರಮೇಶ್, ನಾಗೇಂದ್ರ, ಮಧುಸೂದನ್, ವೆಂಕಟರಾಮು, ರಾಘವೇಂದ್ರ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಎಚ್.ಸಿ. ನರಸಿಂಹಮೂರ್ತಿ, ನಂದಿನಾಥಪುರ ಬಸಪ್ಪ, ಶೇಖರ್, ಸುರೇಂದ್ರ, ಬಿಳಿಯಪ್ಪ, ಮಹಾದೇವ, ಪುಟ್ಟಭೋವಿ, ಚಿಕ್ಕಬರಗಿ ನಾಗರಾಜು, ಜಯಲಕ್ಷ್ಮೀಪುರ ವೆಂಕಟರಾಮು, ಸಿದ್ದಭೋವಿ, ಕೂಸಯ್ಯ, ಗೋವಿಂದರಾಜು, ಕಪ್ಯೂಸ್ವಾಮಿ, ಆನಂದ, ಕೆ.ನಾಗೇಂದ್ರ, ಮಲ್ಲಭೋವಿ, ಹನುಮಯ್ಯ ಪಾಳ್ಯ, ಕಾಂತರಾಜು, ನಾಗರಾಜು ವಡ್ಡರಗುಡಿ, ಗಿರಿಯಭೋವಿ, ಮುರಳಿ, ರಾಮಕೃಷ್ಣ, ಎಲ್ಲಾ ಗ್ರಾಮಗಳಿಂದ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.