nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026
    Facebook Twitter Instagram
    ಟ್ರೆಂಡಿಂಗ್
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    • ಮಹಿಳಾ ಪಿಎಸ್‌ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
    • ಕರ್ತವ್ಯನಿರತ ಮಹಿಳಾ ಪಿಎಸ್‌ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್‌ ಐಆರ್ ದಾಖಲು!
    • ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 
    ತಾಲೂಕು ಸುದ್ದಿ February 7, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    By adminFebruary 7, 2024No Comments2 Mins Read
    siddarameshwara

    ಸರಗೂರು: ನಾವೆಲ್ಲರೂ ಸಂಘಟಿತರಾಗುವ ಮೂಲಕ ಆರ್ಥಿಕವಾಗಿ ಹಿಂದುಳಿದಿರುವ ಭೋವಿ ಜನಾಂಗವನ್ನು ಮೇಲೇತ್ತುವ ಕೆಲಸ ಮಾಡಬೇಕಿದೆ ಎಂದರು. ಮಹಾ ಸಂಸ್ಥಾನ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮೇಶ್ವರಸ್ವಾಮಿ ಆಶೀರ್ವಚನ ನೀಡಿದರು.

    ತಾಲ್ಲೂಕಿನ ಪಟ್ಟಣದ ಶಿವಯೋಗಿ ಸಿದ್ಧರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ವತಿಯಿಂದ  ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ  ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಂಡಿದ್ದು  ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಸಿದ್ದರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಉದ್ಘಾಟಿಸಿ ಮಾತನಾಡಿದರು.

    ಒಬ್ಬ ನೇಯ್ಗೆ ಕಾಯಕದವ, ಇನ್ನೊಬ್ಬ ಕನ್ನಡಿ (ಕ್ಷೌರದ) ಕಾಯಕದವ. ಇವರಿಬ್ಬರಲ್ಲದೆ ಅಮುಗೇಶ್ವರಲಿಂಗ ಎಂಬ ಅಂಕಿತದ ಒಬ್ಬ ವಚನಕಾರನನ್ನು ಕವಿಚರಿತೆಕಾರರು ಹೇಳಿ ಒಂದು ವಚನವನ್ನು ಉದಾಹರಿಸಿ ಆತ ಇನ್ನೊಬ್ಬ ಆಮುಗಿದೇವಯ್ಯನೆಂದು ಅಭಿಪ್ರಾಯಪಟ್ಟಿದ್ದಾರೆ.

    ಸಿದ್ದರಾಮೇಶ್ವರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಕುಡೊಂಕುಗಳನ್ನು ತಿದ್ದುವ ಕಾರ್ಯ ಮಾಡಿದ್ದಾರೆ. ಇವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಶಾಸಕ ಹಾಗೂ ಜಂಗಲ್ ಲಾಡ್ಜ್ ಹಾಗೂ ರೆಸಾರ್ಟ್‌ ಗಳ ನಿಗಮದ ಅಧ್ಯಕ್ಷ ಅನಿಲ್ ಚಿಕ್ಕಮಾದು ಮಾತನಾಡಿ, ನದಿ, ಕೆರೆ ಕಟ್ಟೆಗಳನ್ನು ನಿರ್ಮಿಸಿ ಶ್ರಮಿಕ ವರ್ಗದ ಆರಾಧ್ಯ ದೈವವಾಗಿ ಗುರುತಿಸಿಕೊಂಡಿರುವ ಶಿವಯೋಗಿ ಸಿದ್ಧರಾಮೇಶ್ವರರು ವಚನದ ಮೂಲಕ ನಾಡಿಗೆ ನೀಡಿದ ಸಂದೇಶ ಅನುಕರಣೀಯವಾದದ್ದು, 12ನೇ ಶತಮಾನದ ಮಹಾಶರಣ ಸಿದ್ಧರಾಮೇಶ್ವರರು ಸಮಾಜದ ಒಳಿತಿಗಾಗಿ ಬದುಕಿದ ನಿಜವಾದ ಕಾಯಕ ಯೋಗಿ. ಹೀಗಾಗಿ ಜಾತಿ, ಮತ, ಪಂಥಗಳೆನ್ನದೆ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಎಲ್ಲರೂ ಆಚರಿಸಬೇಕು. ಅಲ್ಲದೇ, ಅವರ ಆದರ್ಶವನ್ನು ಪಾಲಿಸಬೇಕು ಎಂದರು.

    12ನೇ ಶತಮಾನದಲ್ಲಿದ್ದ ಬಹಳಷ್ಟು ಪಿಡುಗುಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನ ಚಳುವಳಿಕಾರರಲ್ಲಿ ಸಿದ್ದರಾಮೇಶ್ವರರು ಕೂಡ ಪ್ರಮುಖರು .ಇಂತಹ ಮಹಾನ್ ಶಿವಯೋಗಿಗಳ ಜಯಂತಿಯನ್ನು ಒಂದು ಜಾತಿಗೆ ಸೀಮಿತ ಮಾಡದೇ ಇಡೀ ಸಮಾಜಕ್ಕೆ ಅವರ ಕೊಡುಗೆ ಮಾದರಿಯಾಗಬೇಕು’ ಎಂದು ಹೇಳಿದರು.

    ಕಾರ್ಯಕ್ರಮ ಮುನ್ನ .ಸಿದ್ದರಾಮೇಶ್ವರರ ಜಯಂತಿ ಪಟ್ಟಣದ ಸಂತೆಮಾಳ ಸಂತೆ ಮಾಸ್ತಮ್ಮ ದೇವಸ್ಥಾನದಿಂದ ಬೆಳ್ಳಿ ರಥದಲ್ಲಿ ಸಿದ್ದರಾಮೇಶ್ವರ ಪೋಟೋ ಇರಿಸಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮೆರವಣಿಗೆ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಚಾಲನೆ ನೀಡಿ.ಆರಂಭಗೊಂಡ ಒಂದನೇ ಮುಖ್ಯ ರಸ್ತೆ ಹಾಗೂ ಮಹಾವೀರ ಸರ್ಕಲ್ ಮತ್ತು ಬಸ್ ನಿಲ್ದಾಣದ ಮುಂಭಾಗದ ಮೂಲಕ ಕೆಇಬಿ ಕಛೇರಿ ಅದೇ ಮಾರ್ಗವಾಗಿ ನಾಮಧಾರಿಗೌಡ ಸಮುದಾಯದವರೆಗೆ ನಡೆಯಿತು.

    ಬಳಿಕ ಮಾತನಾಡಿದ ಸಂಸದ ಪ್ರಹ್ಲಾದ್ ಜೋಶಿ, ಸಿದ್ದರಾಮೇಶ್ವರರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು.

    ಈ ಸಂದರ್ಭದಲ್ಲಿ ಪಡುವಲ ಮಠದ ಮಹದೇವಸ್ವಾಮಿಜಿ, ದಡದಹಳ್ಳಿ ಮಠದ ಡಾ ಷಡಕ್ಷರ ಸ್ವಾಮೀಜಿ, ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ ವಿ ಸೀತಾರಾಮ, ಮಾಜಿ ಜಿಪಂ ಸದಸ್ಯರು ಎಂ.ಪಿ. ನಾಗರಾಜು, ಚಿಕ್ಕವೀರನಾಯಕ, ಪ.ಪಂ. ಸದಸ್ಯೆ ಹೇಮಾವತಿ ರಮೇಶ್, ಶಿವಯೋಗಿ ಸಿದ್ದರಾಮೇಶ್ವರ ಭೋವಿ ಸಮಾಜ ಸೇವೆ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಐಡಿಯಾ ವೆಂಕಟೇಶ್, ಗೌರವಾಧ್ಯಕ್ಷ ಕೆ. ರಾಜು, ಪ.ಪಂ. ಮಾಜಿ ಸದಸ್ಯರು ರಮೇಶ್, ನಾಗೇಂದ್ರ, ಮಧುಸೂದನ್, ವೆಂಕಟರಾಮು, ರಾಘವೇಂದ್ರ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಎಚ್.ಸಿ. ನರಸಿಂಹಮೂರ್ತಿ, ನಂದಿನಾಥಪುರ ಬಸಪ್ಪ, ಶೇಖರ್, ಸುರೇಂದ್ರ, ಬಿಳಿಯಪ್ಪ, ಮಹಾದೇವ, ಪುಟ್ಟಭೋವಿ, ಚಿಕ್ಕಬರಗಿ ನಾಗರಾಜು, ಜಯಲಕ್ಷ್ಮೀಪುರ ವೆಂಕಟರಾಮು, ಸಿದ್ದಭೋವಿ, ಕೂಸಯ್ಯ, ಗೋವಿಂದರಾಜು, ಕಪ್ಯೂಸ್ವಾಮಿ, ಆನಂದ, ಕೆ.ನಾಗೇಂದ್ರ, ಮಲ್ಲಭೋವಿ, ಹನುಮಯ್ಯ ಪಾಳ್ಯ, ಕಾಂತರಾಜು, ನಾಗರಾಜು ವಡ್ಡರಗುಡಿ, ಗಿರಿಯಭೋವಿ, ಮುರಳಿ, ರಾಮಕೃಷ್ಣ, ಎಲ್ಲಾ ಗ್ರಾಮಗಳಿಂದ ಮುಖಂಡರು ಹಾಗೂ ಮಹಿಳೆಯರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    ತುಮಕೂರು: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (EPFO) ಸ್ವಯಂಪ್ರೇರಿತ ನಿಯಮ ಅನುಸರಣೆಯನ್ನು ಉತ್ತೇಜಿಸಲು, ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಹಾಗೂ…

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು

    August 14, 2026

    ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.