ಪಾಪ್ ಕಾರ್ನ್ ಆರೋಗ್ಯಕ್ಕೆ ಒಳ್ಳೆಯದು..!:
ಮೆಕ್ಕೆಜೋಳದಿಂದ ತಯಾರಿಸಿದ ಪಾಪ್ ಕಾರ್ನ್ ಅನೇಕ ಪೋಷಕಾಂಶಗಳಿಂದ ಕೂಡಿರುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದು ಸೇರಿದಂತೆ ಮಲಬದ್ಧತೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. ಪಾಪ್ ಕಾರ್ನ್ನಲ್ಲಿರುವ ಫೀನಾಲಿಕ್ ಆಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಅಲ್ಲದೆ ತ್ವಚೆಯ ಮೇಲಿನ ಸುಕ್ಕುಗಳನ್ನು ತಡೆಯಲು ಮತ್ತು ಯೌವನವನ್ನು ಕಾಪಾಡಲು ಇದು ಸಹಾಯ ಮಾಡುತ್ತದೆ.
ಕಪ್ಪು ಕಲೆಗಳಿಗೆ ರಾಮಬಾಣ ಅರಿಶಿನ:
ಮೂಗು ಅಥವಾ ಕೆನ್ನೆಯ ಮೇಲೆ ಕಪ್ಪು ಕಲೆಗಳು ಸಾಮಾನ್ಯ. ಇದು ಯುವಜನತೆ ಹಾಗೂ ವಯಸ್ಸಾದವರಲ್ಲೂ ಕಂಡು ಬರುತ್ತದೆ. ಈ ಕಲೆಗಳನ್ನು ಹೋಗಲಾಡಿಸಲು ಮನೆಯಲ್ಲಿಯೆ ಮದ್ದು ಇದೆ. ಅರಿಶಿನವು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ರೋಗ ನಿರೋಧಕ ಗುಣಗಳಿಂದ ಸಮೃದ್ಧವಾಗಿದೆ. ಮೂಗಿನ ಮೇಲಿನ ಕಪ್ಪು ಕಲೆಗಳನ್ನು ತೊಡೆದುಹಾಕಲು ಅರಿಶಿನದೊಂದಿಗೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಮಿಕ್ಸ್ ಮಾಡಿ. 15 ನಿಮಿಷಗಳ ನಂತರ ಮುಖವನ್ನು ತೊಳೆಯಿರಿ. ವಾರಕ್ಕೆ 3 ಬಾರಿ ಹೀಗೆ ಮಾಡಿದರೆ ಕಪ್ಪು ಕಲೆಗಳು ಮಾಯವಾಗುತ್ತವೆ.
ಪ್ರತಿದಿನ ಕ್ಯಾರೆಟ್ ಜ್ಯೂಸ್ ಕುಡಿಯಿರಿ ಆರೋಗ್ಯವಾಗಿರಿ:
ಕ್ಯಾರೆಟ್ ಜ್ಯೂಸ್ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ಇತ್ತೀಚೆಗೆ ಹಲವಾರು ಅಧ್ಯಯನಗಳು ತಿಳಿಸಿವೆ. ಕ್ಯಾರೆಟ್ ನಲ್ಲಿ ವಿಟಮಿನ್ ಎ, ಬಿ, ಸಿ, ಇ ಅದರ ಜೊತೆಗೆ ಪೊಟ್ಯಾಸಿಯಮ್, ಮೆಗ್ನಿಸಿಯಮ್, ಸೋಡಿಯಂ, ಮ್ಯಾಂಗನೀಸ್, ಕಬ್ಬಿಣ, ಅಯೋಡಿನ್ ಮತ್ತು ಕ್ಯಾಲ್ಸಿಯಂ ಇದೆ. ಕ್ಯಾರೆಟ್ ಹೃದಯ ಮತ್ತು ಕಣ್ಣುಗಳಿಗೆ ಒಳ್ಳೆಯದು. ಪ್ರತಿದಿನ ಕ್ಯಾರೆಟ್ ಜ್ಯೂಸ್ ಸೇವಿಸುವುದರಿಂದ ಕೂದಲು ಚನ್ನಾಗಿ ಬೆಳೆಯುತ್ತದೆ. ಪುರುಷರಲ್ಲಿ ವೀರ್ಯ ಬೆಳವಣಿಗೆಯ ದರವನ್ನು ಹೆಚ್ಚಿಸುತ್ತದೆ.
ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೆ ಹಲವಾರು ಪ್ರಯೋಜನಗಳು:
ಈರುಳ್ಳಿ ರುಚಿಯ ಜೊತೆಗೆ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹೌದು, ನಿಮ್ಮ ಆಹಾರದ ಒಂದು ಭಾಗವಾಗಿ ಹಸಿ ಈರುಳ್ಳಿಯನ್ನು ತಿನ್ನುವುದರಿಂದ, ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಿಸುತ್ತದೆ. ಚರ್ಮದ ಆರೋಗ್ಯವನ್ನು ಹೆಚ್ಚಿಸುತ್ತದೆ. ತೂಕ ಇಳಿಸಲು ಸಹಕಾರಿ. ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಜೀರ್ಣಾಂಗ ವ್ಯವಸ್ಥೆಯನ್ನು ವರ್ಧಿಸುತ್ತದೆ. ಉರಿಯೂತದ ಗುಣ ಹೊಂದಿದೆ. ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ.
ಈ ಆಹಾರವನ್ನು ಇಂದೇ ಬಿಟ್ಟು ಬಿಡಿ:
ನೀವು ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕರಿದ ಆಹಾರವನ್ನು ತ್ಯಜಿಸಬೇಕು. ಇದನ್ನು ತಿನ್ನುವುದರಿಂದ ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್ ನಂತಹ ಕಾಯಿಲೆಗಳು ಹೆಚ್ಚಾಗುತ್ತವೆ. ಅಧಿಕ ಕೊಬ್ಬು ಅಪಧಮನಿಗಳನ್ನು ಮುಚ್ಚುವ ಅಪಾಯವನ್ನು ಹೆಚ್ಚಿಸುತ್ತದೆ. ಹೃದ್ರೋಗಿಗಳು ಐಸ್ ಕ್ರೀಮ್ ತಿನ್ನಬಾರದು. ಇದು ಆರೋಗ್ಯಕ್ಕೆ ಹಾನಿ ಮಾಡಬಹುದು. ಇದು ಹೃದಯ ರೋಗಿಗಳಿಗೆ ತುಂಬಾ ಹಾನಿಕಾರಕವಾಗಿದೆ.