nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    • ತುಮಕೂರು | ನವೆಂಬರ್ 18ರಂದು ನಗರದಲ್ಲಿ ಸಹಕಾರ ಸಪ್ತಾಹ
    • ತುಮಕೂರು | ನ.30ರಂದು ರಾಪಿಡ್ ಚೆಸ್ ಟೂರ್ನಮೆಂಟ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.26ರಿಂದ 28ರವರೆಗೆ ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ
    ಜಿಲ್ಲಾ ಸುದ್ದಿ February 11, 2024

    ಫೆ.26ರಿಂದ 28ರವರೆಗೆ ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

    By adminFebruary 11, 2024No Comments2 Mins Read
    kandegala

    ಸರಗೂರು:  ಫೆ.26ರ ಸೋಮವಾರದಿಂದ ಫೆ.೨28ರವರೆಗೆ  ಕಂದೇಗಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಆಚರಿಸಲು ಜಾತ್ರಾ ಕಮಿಟಿ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.

    ತಾಲ್ಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದೇಗಾಲ ಗ್ರಾಮದ ಮಹದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ  ಪೂರ್ವಭಾವಿ ಸಭೆಯಲ್ಲಿ ಕಮಿಟಿ ಅಧ್ಯಕ್ಷ ಮತ್ತು ಸರ್ವಸದಸ್ಯರು ಸುತ್ತಮುತ್ತಲಿನ ಗ್ರಾಮದ ಮುಖಂಡರೊಂದಿಗೆ ಮಂಗಳವಾರ ದಂದು ನಡೆದ ಸಭೆಯಲ್ಲಿ  ಫೆ.26ರಿಂದ ಫೆ.28ರ ವರೆಗೆ ಮಹದೇಶ್ವರ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಎಂದು ಕಮಿಟಿಯವರು ತೀರ್ಮಾನಿಸಲಾಯಿತು.


    Provided by
    Provided by

    ಪೂರ್ವಭಾವಿ ಸಭೆ ನಡೆಸಿದ ಅವರು, ‘ಜಾತ್ರಾ ದಿನಗಳಂದು 10 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಸಾಧ್ಯತೆ ಇದೆ. ಹೀಗಾಗಿ ಅವರ ಸೌಕರ್ಯಕ್ಕೆ ಕೊರತೆಯಾಗದಂತೆ ಈಗಿನಿಂದಲೇ ಅವಶ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ’ ಎಂದರು.

    ಜಿಲ್ಲೆಯ ವಿವಿಧ ತಾಲ್ಲೂಕಿನ ಭಾಗಗಳಲ್ಲದೆ  ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚು ಬಸ್‌ಗಳನ್ನು ನಿಯೋಜಿಸಬೇಕು. ಕಳೆದ ಬಾರಿಗಿಂತ ಕನಿಷ್ಠ ಶೇ 10ರಷ್ಟು ಬಸ್‌ಗಳನ್ನು ಹೆಚ್ಚು ಮಾಡಬೇಕಿದೆ’ ಎಂದರು.

    ಜಾತ್ರಾ ಗೆ ಬರುವವರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು. ಸಮಿತಿವರು ನೀರು ಸಂಗ್ರಹಗಾರ, ಶುದ್ಧ ಕುಡಿಯುವ ನೀರಿನ ಘಟಕ, ತೊಂಬೆ ಮತ್ತಿತರ ಮೂಲಗಳಿಂದ ನೀರು ಸರಬರಾಜು ಮಾಡಬೇಕು. ಪಾದಯಾತ್ರೆಯಲ್ಲಿ ಆಗಮಿಸುವ ಭಕ್ತರಿಗಾಗಿ  ಕುಡಿಯುವ ನೀರಿನ ಟ್ಯಾಂಕುಗಳನ್ನು ಇಡಬೇಕು. ವಿವಿಧ ಸ್ಥಳಗಳಲ್ಲಿ ನಲ್ಲಿಗಳ ಮೂಲಕವೂ ನೀರು ಪೂರೈಸಬೇಕು’ ಎಂದು ಅವರು ಸೂಚಿಸಿದರು.

    ದಾಸೋಹ ವ್ಯವಸ್ಥೆ: ಲಕ್ಷಾಂತರ ಭಕ್ತರು ಬರುವುದರಿಂದ ನಿರಂತರ ದಾಸೋಹ ಒದಗಿಸಬೇಕು. ವಾಸ್ತವ್ಯಕ್ಕಾಗಿ ಅಗತ್ಯ ನೆರಳಿನ ವ್ಯವಸ್ಥೆ ಮಾಡಬೇಕು. ವಿಶೇಷ ದಾಸೋಹ ನಿರ್ವಹಣೆಗೆ ಶಾಮಿಯಾನ ಅಳವಡಿಸಬೇಕು’ ಎಂದರು.

    ಪೊಲೀಸ್ ಬಂದೋಬಸ್ತ್ ಕೈಗೊಳ್ಳಬೇಕು. ವಾಹನಗಳ ಸಂಚಾರ, ನಿಲುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಭಕ್ತರಿಗೆ ಮಾಹಿತಿ ನೀಡಲು ತಾತ್ಕಾಲಿಕ ಮಾಹಿತಿ ಕೇಂದ್ರಗಳ ಸ್ಥಾಪನೆ ಮಾಡಬೇಕು. ವಿದ್ಯುತ್ ಅಡಚಣೆಯಾಗದಂತೆಯೂ ಗಮನ ಹರಿಸಲು ಅವರು ನಿರ್ದೇಶನ ಸಮಿತಿ ಸದಸ್ಯರಿಗೆ ನೀಡಿದರು.

    ಸಾಂಸ್ಕೃತಿಕ ಹಾಗೂ ಕ್ರೀಡಾ ಹಾಗೂ ಇತರೆ ಮನರಂಜನಾ ಮತ್ತು ಧನಗಳ ಜಾತ್ರೆ ಇನ್ನೂ ಮುಂತಾದ .ಕಾರ್ಯಕ್ರಮ ಮುಖಾಂತರ ಅದ್ದೂರಿ ಜಾತ್ರೆ ನಡೆಸಲು ತಾಲ್ಲೂಕಿನ ಜನತೆ ಹಾಗೂ ಎಲ್ಲಾ ಅಕ್ಕಪಕ್ಕದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ ಎಂದು ದೇವಸ್ಥಾನದ ಸಮಿತಿ ಅಧ್ಯಕ್ಷ ಪಾಟೀಲ್ ರಾಜಪ್ಪ ತಿಳಿಸಿದರು.

    ಈ ಸಂದರ್ಭದಲ್ಲಿ ಸಭೆಯಲ್ಲಿ ಮುಖಂಡರಾದ ಚಿಕ್ಕವೀರನಾಯಕ, ರಾಜಪ್ಪ, ಗುರುಮಲ್ಲಪ್ಪ, ಚೆನ್ನರಾಜಪ್ಪ, ಸೋಮಣ್ಣ, ಕಾಳಸ್ವಾಮಿ,  ಲಕ್ಷ್ಮಣಚಾರ್, ಪುಟ್ಟಯ್ಯ, ಶಿವಲಿಂಗಯ್ಯ, ಪುಟ್ಟಸಿದ್ದಯ್ಯ, ಎಚ್.ಎನ್.ಸುಧೀರ್, ಮರಿದಾಸ್, ದಾಸಪ್ಪ, ಅನಿತಾ ರಾಜ್ ಅರಸ್, ಕೆ.ವಿ.ರುದ್ರಯ್ಯ, ಮಹದೇವಪ್ಪ, ನಾರಾಯಣ್ ಸೇರಿದಂತೆ ಕಂದೇಗಾಲ, ಗದ್ದೇಹಳ್ಳ, ಸಾಗರೆ, ಬಿದರಹಳ್ಳಿ, ನಂದಿನಾಥಪುರ, ಚೆನ್ನೀಪುರ, ಹೆಗ್ಗನೂರು, ತೆಲಗುಮಸಹಳ್ಳಿ ಮುಂತಾದ ಗ್ರಾಮಗಳ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ

    admin
    • Website

    Related Posts

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ

    November 17, 2025

    ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ.…

    ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ

    November 17, 2025

    ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ

    November 17, 2025

    ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ

    November 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.