ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ಜೋಕಾಲಿ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ. ಪಿ.ಜೆ. ಕೊಟ್ರೇಶ್(14) ಮೃತ ವಿದ್ಯಾರ್ಥಿಯಾಗಿದ್ದಾನೆ.
ಈತ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದನು. ಬಾಲಕನು ಶಾಲೆ ಮುಗಿಸಿ ಬಂದು ಮನೆಯಲ್ಲಿ ಜೋಕಾಲಿಯಲ್ಲಿ ಕುಳಿತು ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋಕಾಲಿ ಹಗ್ಗವು ಆಕಸ್ಮಿಕವಾಗಿ ಕೊರಳಿಗೆ ಸುತ್ತಿಕೊಂಡಿದೆ.
ಇದರಿಂದಾಗಿ ಹಗ್ಗ ಬಿಗಿಗೊಂಡು ಬಾಲಕನಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


