ಬೆಂಗಳೂರಿನ ಕೆ. ಆರ್. ಪುರಂ ಪ್ರದೇಶದಲ್ಲಿ 70 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವಶೇಷಗಳನ್ನು ಡ್ರಮ್ ನಲ್ಲಿ ಇರಿಸಿ ಖಾಲಿ ಸ್ಥಳದಲ್ಲಿ ಎಸೆಯಲಾಗಿದೆ. ಮೃತ ದುರ್ದೈವಿಯನ್ನು ಕೆ.ಆರ್. ಪುರಂನ ನಿಸರ್ಗ ಲೇಔಟ್ ಬಳಿಯ ಬಾಡಿಗೆ ಫ್ಲಾಟ್ ನಲ್ಲಿ ತನ್ನ ಮಗಳೊಂದಿಗೆ ವಾಸಿಸುತ್ತಿದ್ದ ಸುಶೀಲಮ್ಮ ಎಂದು ಗುರುತಿಸಲಾಗಿದೆ.
ವರದಿಗಳ ಪ್ರಕಾರ, ದುಷ್ಕರ್ಮಿಗಳು ಮಹಿಳೆಯ ಕೈ ಮತ್ತು ಕಾಲುಗಳನ್ನು ಕತ್ತರಿಸಿದ್ದು, ಅವು ಪ್ರಸ್ತುತ ಕಾಣೆಯಾಗಿವೆ. ಈ ಪ್ರದೇಶದಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. “ಈ ಘಟನೆಯು ನಿನ್ನೆ ಸಂಭವಿಸಿರಬಹುದು. ಸದ್ಯ ಸ್ಥಳ ಪರಿಶೀಲಿಸಲಾಗುತ್ತಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ ಎಂದು ಗುಪ್ತಾ ಹೇಳಿದರು.
ಸಮಗ್ರ ತನಿಖೆಯ ಭರವಸೆ ನೀಡಿದ ಅವರು, “ನಮ್ಮ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ತನಿಖೆಗಳನ್ನು ನಡೆಸುತ್ತಾರೆ. ನಾವು ತನಿಖೆಯನ್ನು ಸಕ್ರಿಯವಾಗಿ ಮುಂದುವರಿಸುತ್ತಿದ್ದೇವೆ ಮತ್ತು ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ತಿಳಿಸಿದರು “.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


