ಬೆಣ್ಣೆ ತಿಂದರೆ ಕ್ಯಾಲ್ಸಿಯಂ ಹೇರಳವಾಗಿ ಸಿಗುತ್ತೆ:
ಬೆಣ್ಣೆ ತಿನ್ನೋದ್ರಿಂದ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುತ್ತೆ ಜೊತೆಗೆ ಹೃದಯರಕ್ತನಾಳದ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಕೆಲವು ಜನರು ಅಂದುಕೊಂಡಿದ್ದಾರೆ. ಆದರೆ ನಿಜವಾಗಿ ಹಾಗೆ ಇಲ್ವೇ ಇಲ್ಲ, ಬೆಣ್ಣೆ ಆರೋಗ್ಯಕ್ಕೆ ಅನೇಕ ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಬೆಣ್ಣೆಯಲ್ಲಿ ವಿಟಮಿನ್ ಡಿ ನಂತಹ ಪ್ರಮುಖ ಪೋಷಕಾಂಶಗಳಿವೆ, ಇದು ಮೂಳೆಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಸಹಾಯ ಮಾಡುತ್ತದೆ. ಇದಲ್ಲದೆ, ಇದು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ, ಇದು ಮೂಳೆಯ ಆರೋಗ್ಯಕ್ಕೆ ಬಹಳ ವಿಶೇಷ ಪೋಷಣೆ ನೀಡುತ್ತದೆ.
ಆಲೂಗಡ್ಡೆ ಜ್ಯೂಸ್ ನಲ್ಲಿವೆ ಅದ್ಭುತ ಆರೋಗ್ಯ ಪ್ರಯೋಜನಗಳು:
ಆಲೂ ಜ್ಯೂಸ್ ಕುಡಿಯುವುದರಿಂದ ಮಾನವ ದೇಹಕ್ಕೆ ಹಲವಾರು ಪ್ರಯೋಜನಗಳಿವೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸಮೀಕ್ಷೆಯ ಪ್ರಕಾರ, ಆಲೂಗಡ್ಡೆಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಆಲೂಗಡ್ಡೆಯ ಜ್ಯೂಸ್ ಕುಡಿದರೆ ತೂಕ ಕಡಿಮೆಯಾಗುತ್ತದೆ. ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುತ್ತದೆ. ಕಣ್ಣು, ಚರ್ಮ, ಹಲ್ಲು ಮತ್ತು ನರಮಂಡಲದ ಆರೋಗ್ಯವೂ ಸುಧಾರಿಸುತ್ತದೆ. ಇದು ಅಜೀರ್ಣಕ್ಕೂ ಸಹಾಯ ಮಾಡುತ್ತದೆ. ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ.
ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಹಾಲು ಮತ್ತು ಜಾಯಿಕಾಯಿ:
ಪ್ರತಿದಿನ ಹಾಲು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಈ ಹಾಲಿಗೆ ಜಾಯಿಕಾಯಿ ಪುಡಿಯನ್ನು ಸೇರಿಸುವುದರಿಂದ ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಜಾಯಿಕಾಯಿ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಶೀತ ಮತ್ತು ಕೆಮ್ಮು ಕಡಿಮೆಯಾಗುತ್ತದೆ ಮತ್ತು ದೇಹಕ್ಕೆ ಇತರ ಪ್ರಯೋಜನಗಳನ್ನು ನೀಡುತ್ತದೆ. ಒಂದು ಲೋಟ ಹಾಲಿಗೆ ಸ್ವಲ್ಪ ಜಾಯಿಕಾಯಿ ಪುಡಿ ಬೆರೆಸಿ ಸೇವಿಸಿದರೆ ಸುಲಭವಾಗಿ ನಿದ್ದೆ ಬರುತ್ತದೆ. ಉದರಶೂಲೆಯಂತಹ ಸಮಸ್ಯೆಯನ್ನು ಹೋಗಲಾಡಿಸುವ ಜೊತೆಗೆ ಅಜೀರ್ಣದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296