nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಳಧರ ಸರ್ಕಾರಿ ಶಾಲಾ ಆಟದ ಮೈದಾನದ ಉಳಿವಿಗಾಗಿ ವಿವಿಧ ಸಂಘಟನೆಗಳಿಂದ ಮೆರವಣಿಗೆ: ಅಧಿಕಾರಿಗಳ ಅಮಾನತಿಗೆ ಆಗ್ರಹ
    ತುಮಕೂರು March 5, 2024

    ಬೆಳಧರ ಸರ್ಕಾರಿ ಶಾಲಾ ಆಟದ ಮೈದಾನದ ಉಳಿವಿಗಾಗಿ ವಿವಿಧ ಸಂಘಟನೆಗಳಿಂದ ಮೆರವಣಿಗೆ: ಅಧಿಕಾರಿಗಳ ಅಮಾನತಿಗೆ ಆಗ್ರಹ

    By adminMarch 5, 2024No Comments2 Mins Read
    beladhara school

    ವರದಿ: ಮಂಜುಸ್ವಾಮಿ ಎಂ.ಎನ್.

    ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರ ಕೋರ ಹೋಬಳಿಯ ಬೆಳಧರ ಗ್ರಾಮದ ಸರ್ಕಾರಿ ಶಾಲೆಯ ಆಟದ ಮೈದಾನದ ಉಳಿವಿಗಾಗಿ ತುಮಕೂರು ನಗರದ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತದಿಂದ ಜಿಲ್ಲಾ ಪಂಚಾಯತ್ ಕಚೇರಿಗೆ ಮೌನ ಮೆರವಣಿಗೆ ಇಂದು ಕಾಳಜಿ ಫೌಂಡೇಶನ್ ತುಮಕೂರು ವತಿಯಿಂದ ನಡೆಯಿತು.


    Provided by
    Provided by

    ಈ ಹೋರಾಟಕ್ಕೆ  ಸಾಮಾಜಿಕ ಕಳಕಳಿಯ ಅನೇಕ ಸಂಘ ಸಂಸ್ಥೆಗಳು, ವಿವಿಧ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಕಳಕಳಿಯುಳ್ಳ ಸಾರ್ವಜನಿಕರು ಕೈ ಜೋಡಿಸಿ, ಶಾಲೆಯ ಆಟದ ಮೈದಾನದ ಉಳಿವಿಗಾಗಿ ಧ್ವನಿಯೆತ್ತಿದರು.

    ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವ್ಯಾಪ್ತಿಗೆ ಹೊಂದಿಕೊಂಡಂತೆ ಎರಡು ಎಕರೆ ಭೂಮಿ ಗ್ರಾಮಠಾಣಾಗೆ ಸೇರಿದ್ದು, ರಾಜ್ಯ ಸರ್ಕಾರ ಶಾಲಾ ಮಕ್ಕಳ ಆಟದ ಮೈದಾನದ ಉದ್ದೇಶಕ್ಕಾಗಿ 3 ಎಕರೆ ಮೂರು ಗಂಟೆ ಜಮೀನು ಮಂಜೂರು ಮಾಡಿದ್ದು, ಸುಮಾರು ನಾಲ್ಕೈದು ಬಾರಿ ಕಂದಾಯ ಇಲಾಖೆಯಿಂದ ಸರ್ವೇ ಮಾಡಿ ಹದ್ದುಬಸ್ತು ಮಾಡಲಾಗಿದೆ ಹಾಗೂ ಇ ಸ್ವತ್ತು ಸಹ ಮಾಡಲಾಗಿದೆ.

    ಶಾಲೆ ಮೈದಾನದ ಪಕ್ಕದಲ್ಲಿ ಒಬ್ಬ ಖಾಸಗಿ ವ್ಯಕ್ತಿಗೆ ಸೇರಿದ ಕಲ್ಯಾಣ ಮಂಟಪವಿದ್ದು, ಕಲ್ಯಾಣ ಮಂಟಪದ ಮಾಲೀಕ ಶಾಲಾ ಮೈದಾನವನ್ನು ಭೂ ಕಬಳಿಕೆ ಮಾಡಿಕಂಡು ಕಲ್ಯಾಣ ಮಂಟಪಕ್ಕೆ ವಾಹನಗಳ  ಅಕ್ರಮ ನಿಲ್ದಾಣವಾಗಿ ಮಾಡಿಕೊಂಡಿದ್ದಾನೆ. ಈ ಕಲ್ಯಾಣ ಮಂಟಪಕ್ಕೆ ಆಗಮಿಸುವ ವಾಹನಗಳ ಚಾಲಕರು ಶಾಲಾ ಮೈದಾನದಲ್ಲಿ ವಿಪರೀತ ವೇಗ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿಕೊಂಡು ಬಂದು ವಿದ್ಯಾರ್ಥಿಗಳ ಮೇಲೆಯೇ ವಾಹನ ಹತ್ತಿಸುವಂತಹ ಹಲವು ಘಟನೆಗಳು ಇಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡತಂಹ ಘಟನೆಗಳು ನಡೆದಿವೆ ಎಂದು ಪ್ರತಿಭಟನಾಕಾರರು  ಆಕ್ರೋಶ ವ್ಯಕ್ತಪಡಿಸಿದರು.

    ಶಾಲಾ ಅಭಿವೃದ್ಧಿಗಾಗಿ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮಕ್ಕಳ ಹಿತದೃಷ್ಟಿಯಿಂದ ಆಟದ ಮೈದಾನದ ಸುತ್ತಲೂ  ತಂತಿ ಬೇಲಿ ನಿರ್ಮಾಣ ಕಾಮಗಾರಿಗೆ ಸುಮಾರು ಐದು ಲಕ್ಷ ರೂಪಾಯಿ ಮಂಜೂರು ಮಾಡಿದ್ದರೂ ಸಹ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್, ಮೈದಾನವನ್ನ ಹದ್ದುಬಸ್ತು ಮಾಡಿಕೊಂಡು ಮಕ್ಕಳ ಆಟದ ಮೈದಾನ ಉಳಿಸುವಲ್ಲಿ ವಿಫಲರಾಗಿ ಕರ್ತವ್ಯ ನಿಷ್ಠೆ ಮರೆತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರಿ ಶಾಲೆಯ ಮೈದಾನ ಕಾಪಾಡಬೇಕಿದ್ದ ಅಧಿಕಾರಿಗಳು ಕಲ್ಯಾಣ ಮಂಟಪದ ಮಾಲೀಕನ ಪರ ನಿಂತು ವಾದ ಮಾಡುತ್ತಿದ್ದು,  ಸರ್ಕಾರಿ ಕೆಲಸ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿ ನಡೆದುಕೊಂಡಿದ್ದಾರೆ. ಇಂತಹ ಅಧಿಕಾರಿಗಳನ್ನು ತಕ್ಷಣವೇ ಅಮಾನತ್ತು ಮಾಡಬೇಕೆಂದು ಹೋರಾಟಗಾರರು ಆಗ್ರಹಿಸಿದರು.

    ಕಾಳಜಿ ತಂಡದ ನೇತೃತ್ವದಲ್ಲಿ ನಡೆದ  ಬೆಳೆಧರ ಶಾಲೆ ಮೈದಾನ ಉಳಿವಿಗಾಗಿ ಮೌನ ಮೆರವಣಿಗೆ ಜಾಥಾದಲ್ಲಿ  ನೈಜ ಹೋರಾಟಗಾರರ ವೇದಿಕೆ ಬೆಂಗಳೂರು, ಲಂಚಮುಕ್ತ ಕರ್ನಾಟಕ ಬೆಂಗಳೂರು, ಭೀಮ್ ಆರ್ಮಿ, ಕರುನಾಡು ವಿಜಯ ಸೇನೆ, ರಣಧೀರ ವೇದಿಕೆ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಕೈ ಜೋಡಿಸಿತ್ತು.

    ಮೌನ ಮೆರವಣಿಗೆ ಹೋರಾಟದಲ್ಲಿ ನೈಜ ಹೋರಾಟಗಾರರ ವೇದಿಕೆ ಬೆಂಗಳೂರು ಇದರ ಹೆಚ್.ಎಂ.ವೆಂಕಟೇಶ್, ಲಂಚಮುಕ್ತ ಕರ್ನಾಟಕ ಬೆಂಗಳೂರು ಇದರ ಕುಣಿಗಲ್ ನರಸಿಂಹ ಮೂರ್ತಿ, ಭೀಮ್ ಆರ್ಮಿ ಮುಖಂಡರಾದ ಶ್ರೀನಿವಾಸ್, ಕರುನಾಡು ವಿಜಯ ಸೇನೆ ಅರುಣ್ ಕೃಷ್ಣಯ್ಯ, ಮಧುಗಿರಿ ತಿಮ್ಮರಾಜು, ರಣಧೀರ ವೇದಿಕೆ ಶಂಕರೆ ಗೌಡ್ರು,  ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ, ಡಮರುಗ ಉಮೇಶ್, ಮಾಧ್ಯಮ ಮಿತ್ರರು ಹಾಗೂ ಬೆಳೆಧರ ಗ್ರಾಮಸ್ಥರು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.